ನಗರದ ಸಮಸ್ಯೆಗಳಿಗೆ ಪರಿಹಾರದ ಭರವಸೆ

ಮೂಲ್ಕಿ ನಗರ ಪಂಚಾಯತ್‌ನ ಮಾಸಿಕ ಸಭೆ

Team Udayavani, May 1, 2022, 9:47 AM IST

meeting

ಮೂಲ್ಕಿ: ಮೂಲ್ಕಿ ನಗರ ಪಂಚಾಯತ್‌ನ ಮಾಸಿಕ ಸಭೆಯು ಅಧ್ಯಕ್ಷ ಸುಭಾಷ್‌ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಜರಗಿತು. ಮುಖ್ಯಾಧಿಕಾರಿ ಪಿ. ಚಂದ್ರ ಪೂಜಾರಿ ಸಭೆಯ ನಡಾವಳಿಗಳನ್ನು ದಾಖಲಿಸಿಕೊಂಡರು. ಉಪಾಧ್ಯಕ್ಷ ಸತೀಶ್‌ ಅಂಚನ್‌, ಸ್ಥಾಯೀ ಸಮಿತಿ ಅಧ್ಯಕ್ಷ ಶೈಲೇಶ್‌ ಕುಮಾರ್‌ ಉಪಸ್ಥಿತರಿದ್ದರು.

ನಗರದ ಬ್ಯಾಂಕ್‌ಗಳಲ್ಲಿ ಗ್ರಾಹಕರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸದೇ ಬ್ಯಾಂಕ್‌ ಸಿಬಂದಿ ನಿರ್ಲಕ್ಷ್ಯ ವಹಿಸುವುದು ಕಂಡುಬಂದಿದೆ. ಇದರಿಂದಾಗಿ ಬ್ಯಾಂಕಿಂಗ್‌ ಸೇವೆಗಳು ಜನ ಸಾಮಾನ್ಯರಿಗೆ ಸಿಗುವುದು ಕಷ್ಟವಾಗಿದೆ ಎಂದು ಸ್ಥಾಯೀ ಸಮಿತಿ ಅಧ್ಯಕ್ಷ ಶೈಲೇಶ್‌ ಕುಮಾರ್‌ ಅವರು ಸಭೆಯಲ್ಲಿ ದೂರಿದರು. ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲಾಧಿಕಾರಿಗಳು ಮತ್ತು ಲೀಡ್‌ ಬ್ಯಾಂಕ್‌ಗೆ ವರದಿ ಮಾಡಲು ಸಭೆಯಲ್ಲಿ ತೀರ್ಮಾನಿಸಿತು.

ಕುಂದು ಕೊರತೆ ಸಭೆಯ ನಡವಳಿಕೆ

ಹಿಂದುಳಿದ ಜಾತಿ ಮತ್ತು ವರ್ಗಗಳ ಕುಂದುಕೊರತೆ ಸಭೆಯು ಮೊದಲ ಬಾರಿಗೆ ಮೂಲ್ಕಿಯಲ್ಲಿ ನಡೆದಿರುವುದನ್ನು ಸಭೆಯ ನಡವಳಿಕೆಯಲ್ಲಿ ದಾಖಲಿಸಿಕೊಂಡು ಪಂಚಾಯತ್‌ನ ಮಾಸಿಕ ಸಭೆಯ ತೀರ್ಮಾನದಂತೆ ದಲಿತರ ಮನೆ ರಿಪೇರಿಯ ಮೊತ್ತ 20 ಸಾವಿರ ರೂ. ದಿಂದ 50 ಸಾವಿರಕ್ಕೆ ರೂ. ಏರಿಸುವುದು, ಮನೆ ಕಟ್ಟಲು ನೀಡುವ ಸಹಾಯ ಮೊತ್ತ 3.50 ಲಕ್ಷದಿಂದ 7 ಲಕ್ಷಕ್ಕೆ ಏರಿಸುವ ಬಗೆಗಿನ ತೀರ್ಮಾನವನ್ನು ಸರಕಾರಕ್ಕೆ ಬರೆಯಲು ನಿರ್ಧರಿಸಲಾಯಿತು.

ರಸ್ತೆ ಬದಿ ಅತಿಕ್ರಮಣ

ಕಟ್ಟಡ ದರ್ಗಾರೋಡ್‌ನ‌ಲ್ಲಿರುವ ಕಟ್ಟಡ, ರಸ್ತೆಯಲ್ಲಿ ನಿಯಮ ಮೀರಿ ಆವರಿಸಿ ಕೊಂಡಿದೆ. ಈ ಕುರಿತು ಯಾವ ಕ್ರಮ ತೆಗೆದು ಕೊಂಡಿದ್ದೀರಿ ಎಂಬ ಸದಸ್ಯೆ ವಂದನಾ ಕಾಮತ್‌ ಪ್ರಶ್ನೆಗೆ, ಈಗಾಗಲೇ ನೋಟಿಸ್‌ ನೀಡಲಾಗಿದ್ದು, ಅಕ್ರಮಗಳಿಗೆ ಅವಕಾಶ ನೀಡುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.

ರಸ್ತೆ ಬ್ಯಾರಿಕೇಡರ್‌

ಬಪ್ಪನಾಡು ಮತ್ತು ಆದಿದನ್‌ ಬಳಿ ಹೆದ್ದಾರಿಯಲ್ಲಿ ಹಾಕಿರುವ ಟ್ರಾಫಿಕ್‌ ಬ್ಯಾರಿಕೇಡರ್‌ ಅಫಘಾತಕ್ಕೆ ಕಾರಣವಾಗಿದೆ ಇದನ್ನು ತೆರವುಗೊಳಿಸಿ ಎಂದು ಸದಸ್ಯ ಬೋಳ ಬಾಲಚಂದ್ರ ಕಾಮತ್‌ ಸಭೆಗೆ ತಿಳಿಸಿದಾಗ ಪೊಲೀಸರಿಗೆ ಪತ್ರ ಬರೆಯಲು ತೀರ್ಮಾನಿಸಲಾಯಿತು.

ರೇಶನ್‌ಗೆ ತೊಂದರೆ

ಮೂಲ್ಕಿ ವಿಜಯ ಸನ್ನಿಧಿ ಕಟ್ಟಡ ಬಳಿ ನಿಯಮ ಮೀರಿ ವಾಹನ ಪಾರ್ಕ್‌ ಮಾಡಲಾಗುತ್ತಿದ್ದು, ಇದರಿಂದ ಸಹಕಾರಿ ಸಂಘದ ರೇಶನ್‌ ತರುವ ಜನರಿಗೆ ತೊಂದರೆಯಾಗಿದೆ ಎಂದು ಸದಸ್ಯ ನರಸಿಂಹ ಪೂಜಾರಿ ಆಗ್ರಹಿಸಿದರು.

ಮೊದಲು ಬಸ್‌ ನಿಲ್ದಾಣ

ಮಾಡಿ ಮೂಡುಬಿದಿರೆಗೆ ಮುಖ್ಯಮಂತ್ರಿಗಳು ಆಗಮಿಸಿದಾಗ ನಗರದ ಬೆಳವಣಿಗೆಗೆ ಬೇಡಿಕೆ ಸಲ್ಲಿಸಿಲ್ಲ. ನನೆಗುದಿಗೆ ಬಿದ್ದಿರುವ ಬಸ್‌ ನಿಲ್ದಾಣ ಮಾಡಿ, ಅನಂತರ ಇತರ ಸರಕಾರಿ ಬಂಗಲೆ ಮಾಡಿ ಎಂದು ಸದಸ್ಯರಾದ ಪುತ್ತು ಬಾವಾ, ಯೋಗೀಶ್‌ ಕೋಟ್ಯಾನ್‌ ಸಭೆಯಲ್ಲಿ ಆಗ್ರಹಿಸಿದರು.

ಮಳೆಗಾಲ ಆರಂಭವಾಗಲಿದೆ ಸದಸ್ಯರು ತಮ್ಮ ವಾರ್ಡ್‌ನ ತುರ್ತು ಕೆಲಸಗಳ ಬಗ್ಗೆ ಮಾಹಿತಿ ನೀಡಿ ಆಡಳಿತದೊಂದಿಗೆ ಸಮಾನ ಮನಸ್ಸಿನಿಂದ ಸಹಕರಿಸುವಂತೆ ಮುಖ್ಯಾಧಿಕಾರಿ ಚಂದ್ರ ಪೂಜಾರಿ ಕೋರಿದರು.

ಟಾಪ್ ನ್ಯೂಸ್

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.