ಆಹಾರ ಸಿಗದೇ ಚಿರತೆ ಸಾವು
Team Udayavani, May 1, 2022, 3:11 PM IST
ಕೆ.ಆರ್.ಪೇಟೆ: ಆಹಾರ ಸಿಗದೇ ಹಸಿವಿನಿಂದ ನರಳಿ ಚಿರತೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿ ಚಿಕ್ಕಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಿಕ್ಕಸೋಮನಹಳ್ಳಿ ಗ್ರಾಮದ ಸರ್ವೆ ನಂ. 39ರಲ್ಲಿ ಚಿರತೆ ಶವ ಬೇಲಿಯೊಳಗೆ ಪತ್ತೆಯಾಗಿತ್ತು. ಸಾರ್ವಜನಿಕರು ಈ ವಿಷಯವನ್ನು ಅರಣ್ಯಾಧಿಕಾರಿಗಳಿಗೆ ತಿಳಿಸಿದ ಹಿನ್ನೆಲೆ ಘಟನಾ ಸ್ಥಳಕ್ಕೆ ತಾಲೂಕಿನ ವಲಯ ಅರಣ್ಯಾಧಿಕಾರಿ ಗಂಗಾಧರ್, ನಾಗಮಂಗಲ ವಲಯ ಅರಣ್ಯ ಸಂರಕ್ಷಣಾಧಿಕಾರಿ ಶಂಕರೇಗೌಡ, ಉಪವಲಯಾರಣ್ಯಾಧಿಕಾರಿ ಭರತ್, ಅರಣ್ಯ ರಕ್ಷಕ ಶಿವಮೂರ್ತಿ, ಮಹೇಶ್, ಮಂಜು, ಪಶು ವೈದ್ಯಾಧಿಕಾರಿ ರವಿಕುಮಾರ್ ಸೇರಿದಂತೆ ಹಲವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಲ್ಲದೇ, ಚಿರತೆ ಯಾವ ಕಾರಣಕ್ಕಾಗಿ ಸಾವನ್ನಪ್ಪಿದೆ ಎಂಬುದನ್ನು ಖಚಿತಪಡಿಸಿಕೊಳ್ಳಲು ನಿಯಮಾನುಸಾರ ವಿಧಿ ವಿಧಾನ ನಡೆಸಿ ನಂತರ ಚಿರತೆಯ ಕಳೆಬರವನ್ನು ಸಾರ್ವಜನಿಕರ ಸಮಕ್ಷಮದಲ್ಲಿ ಸರ್ಕಾರಿ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಿದರು.
ಇತ್ತಿಚೆಗೆ ತಾಲ್ಲೂಕಿನಾದ್ಯಂತ ಕಬ್ಬು ಕಟಾವು ಮಾಡಲಾಗಿದ್ದು ಚಿರತೆಗಳು ವಾಸಿಸಲು ಕಷ್ಟವಾಗಿದೆ ಹಾಗೂ ಆಹಾರ ಹುಡುಕಾಟ ಒಂದು ದೊಡ್ಡ ಸವಾಲಿನ ಕೆಲಸವಾಗಿದೆ. ಇದರಿಂದಾಗಿ ಚಿರತೆಗಳು ಪದೇ ಪದೇ ಆಹಾರಕ್ಕಾಗಿ ಕಾಡಿನಂಚಿನ ಗ್ರಾಮಗಳಿಗೆ ಭೇಟಿ ನೀಡಿ ಹಸು, ಕರು, ನಾಯಿ, ಕುರಿ, ಮೇಕೆ ಮುಂತಾದವುಗಳನ್ನು ಬೇಟೆಯಾಡುವುದು ಸಹಜವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ