ಉದ್ಯೋಗ ಯೋಜನೆ ದೇಶಕ್ಕೆ ಮಾದರಿ
Team Udayavani, May 1, 2022, 3:28 PM IST
ಬೀದರ: ಟಾಟಾ ಸಹಯೋಗದೊಂದಿಗೆ 150 ಕಡೆಗಳಲ್ಲಿ ಅನುಷ್ಠಾನ ಗೊಂಡಿರುವ ಉದ್ಯೋಗ ಯೋಜನೆ ಇಂದು ದೇಶಕ್ಕೆ ಮಾದರಿಯಾಗಿದೆ. ತರಬೇತಿದಾರರು ಇತ್ತೀಚಿನ ಕೈಗಾರಿಕೆಯ ಬಹು ಕೌಶಲ ತಂತ್ರಜ್ಞಾನ ಕಲಿಯಲು ಉದ್ಯೋಗ ಯೋಜನೆ ಬಲು ಸಹಕಾರಿಯಾಗಿದೆ ಎಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ನಿರ್ದೇಶಕ ಯೋಗೇಶ್ವರ ಎಸ್. ಹೇಳಿದರು.
ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ ಕೌಶಲ ಅಭಿವೃದ್ಧಿ ಜೀವನ ಸಮೃದ್ಧಿ ತರಬೇತಿದಾರರಿಗೆ ವಿಶೇಷ ಮಾರ್ಗದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಉದ್ಯೋಗ ಯೋಜನೆಯಡಿ ಮೆಕ್ಯಾನಿಕ ಎಲೆಕ್ಟ್ರಿಕ್ ವೆಹಿಕಲ್ ಹಾಗೂ ರೋಬೆಟಿಕ ಕೋರ್ಸ್ ಪ್ರಾರಂಭಿಸಿದೆ. ಇನ್ನು ಅನೇಕ ಅಲ್ಪಾವಧಿ ಕೋರ್ಸ್ಗಳು ಸಹ ಉಚಿತವಾಗಿ ಕಲ್ಪಿಸಲಾಗುವುದು. ಕೋಟ್ಯಂತರ ಬೆಲೆಬಾಳುವ ಯಂತ್ರೋಪಕರಣ ಹಾಗೂ ಅತ್ಯಂತ ಬೆಲೆ ಬಾಳುವ ಸಾಪ್ಟವೇರ್ ಅಳವಡಿಸಿದೆ. ಇದೊಂದು ತಂತ್ರಜ್ಞಾನದ ಹಬ್ ಆಗಬೇಕೆಂಬ ವಿಚಾರ ನಮ್ಮೆಲ್ಲರದ್ದಾಗಿದೆ ಎಂದರು.
ದೇಶದಲ್ಲೆ ಪ್ರಥಮ ಬಾರಿಗೆ ಕರ್ನಾಟಕ ಸರ್ಕಾರ ಚಾಲನೆ ಮಾಡಿದ್ದು, ಇಲ್ಲಿ ಕಲಿತ ಎಲ್ಲರಿಗೆ ಖಂಡಿತವಾಗಿ ನೌಕರಿಗಾಗಿ ಪರಿತಪಿಸುವ ಭ್ರಮೆ ಇಲ್ಲ. ಈಗಾಗಲೇ ಟಾಟಾನವರ ಜೊತೆಗೆ ಒಡಂಬಡಿಕೆ ಮಾಡಿಕೊಂಡಿದ್ದು, ಪ್ರಾಯೋಗಿಕ ಪರಿಣಿತ ಕುಶಲಕರ್ಮಿಗಳಿಗೆ ಅವರೇ ಉದ್ಯೋಗ ಕೊಡುತ್ತಾರೆ. ತಾವು ಕೇವಲ ಕಲಿಯುವುದರ ಕಡೆಗೆ ಗಮನ ಹರಿಸಬೇಕು ಎಂದು ಕರೆ ನೀಡಿದರು.
ಹಿರಿಯ ಪ್ರಾಧ್ಯಾಪಕ ಪ್ರೊ| ಅಶೋಕ ಪಾಟೀಲ ಮಾತನಾಡಿ, ಇಂದು ಶಿಕ್ಷಣಕ್ಕೆ ಬೆಲೆ ಸಿಕ್ಕು, ನೌಕರಿ ಬೇಕೆಂದರೆ ವ್ಯಕ್ತಿಯಲ್ಲಿ ಕೌಶಲ ಕರಗತವಾಗಿರಬೇಕು. ನಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೂ ಎರಡು ವರ್ಷಗಳಿಂದ ಮೆಕ್ಯಾನಿಕಲ್ ಹಾಗೂ ವೆಲ್ಡಿಂಗ್ ಡೆಕ್ನೊಲಾಜಿ ಬಗ್ಗೆ ಇಲ್ಲಿ ಪ್ರಾಯೋಗಿಕ ಹಾಗೂ ವೃತ್ತಿ ಸಿದ್ಧಾಂತ ಹೇಳಿಕೊಡಲಾಗುತ್ತಿದೆ. ಇದರಿಂದ ತುಂಬ ಅನುಕೂಲವಾಗಿದೆ. ಇನ್ಮುಂದೆ ಕೌಶಲ ಇದ್ದವನಿಗೆ ಮಾತ್ರ ನೌಕರಿ ಎಂಬುದು ನಾವೆಲ್ಲರೂ ಅರಿಯಬೇಕಿದೆ ಎಂದು ಹೇಳಿದರು.
ಜಿಲ್ಲಾ ಐಟಿಐ ನೋಡಲ್ ಅಧಿಕಾರಿ ಶಿವಶಂಕರ ಟೋಕರೆ ಅಧ್ಯಕ್ಷತೆ ವಹಿಸಿ, ಅನೇಕ ಸಂಕಷ್ಟಗಳ ಮಧ್ಯೆಯು ಇಲಾಖೆಯ ಮಾರ್ಗದರ್ಶನ ಹಾಗೂ ಸ್ಥಳಿಯ ಜನಪ್ರತಿನಿಧಿಗಳ ಸಹಕಾರ ಜೊತೆಗೆ ಅನೇಕ ಕೈಗಾರಿಕೆಗಳ ಮಾನವ ಸಂಪನ್ಮೂಲ ಅಧಿಕಾರಿಗಳು ನಮ್ಮ ಆಮಂತ್ರಣಕ್ಕೆ ಮನ್ನಣೆ ನೀಡಿರುವ ಫಲವೇ ಇಂದು ನಮ್ಮ ಬೀದರ ಐಟಿಐ ಅಭಿವೃದ್ಧಿ ಹೊಂದಲು ಪ್ರಮುಖ ಕಾರಣವಾಗಿದೆ ಎಂದರು.
ನಿವೃತ್ತ ಪಾಚಾರ್ಯ ಪ್ರೊ| ರಾಜಪ್ಪ ಅವರನ್ನು ಗೌರವಿಸಿದರು. ಇಲಾಖೆಯ ಹಿರಿಯ ಉಪನಿರ್ದೇಶಕ ಕೆ.ಆರ್. ಹಾಲಪ್ಪ ಶೆಟ್ಟಿ, ಪ್ರಾಚಾರ್ಯರಾದ ಲಕ್ಷ್ಮೀಕಾಂತ ಭಾಲ್ಕಿ, ಶಿವಕುಮಾರ ಪಾಟೀಲ, ವೀರೇಶ ಪಾಟೀಲ, ಬಸವರಾಜ ಗುಪ್ತಾ ಸೇರಿ ಇನ್ನಿತರರಿದ್ದರು. ಜಿಲ್ಲಾಡಳಿತದಿಂದ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆದ ಕಿರಿಯ ತರಬೇತಿ ಅಧಿಕಾರಿ ಯೂಸುಫಮಿಯ್ಯ ಜೋಜನಾ ಅವರನ್ನು ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
PM ಮೋದಿ ಸ್ಟೇಟ್ಸ್ ಮ್ಯಾನ್ ಅಲ್ಲ, ಸೇಲ್ಸ್ಮ್ಯಾನ್: ಬಿ.ಕೆ ಹರಿಪ್ರಸಾದ್
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ