ನಿರಂತರ 8 ತಾಸು ವಿದ್ಯುತ್ ನೀಡಿದರೆ ರೈತರ ಬಾಳು ಬಂಗಾರ
Team Udayavani, May 1, 2022, 5:34 PM IST
ಬಸವನಬಾಗೇವಾಡಿ: ರಾಜ್ಯ ಸರ್ಕಾರ ಅನ್ನದಾತರಿಗೆ ನಿರಂತರ 8 ತಾಸು ವಿದ್ಯುತ್ ನೀಡಿದಲ್ಲಿ ಅನ್ನದಾತರ ಬಾಳು ಹಸನಾಗುತ್ತದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮೀನಮೇಷ ಮಾಡುತ್ತಿರುವುದು ವಿಷಾದದ ಸಂಗತಿ ಎಂದು ಶಾಸಕ ಶಿವಾನಂದ ಪಾಟೀಲ ಹೇಳಿದರು.
ತಾಲೂಕಿನ ಮುತ್ತಗಿ ಗ್ರಾಮದಲ್ಲಿ ಜಿಪಂ, ತಾಪಂ ಹಾಗೂ ಗ್ರಾಪಂ ಸಂಯುಕ್ತ ಆಶ್ರಯದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 20 ಲಕ್ಷ ರೂ. ವೆಚ್ಚದಲ್ಲಿ ಕೃಷಿ ಉತ್ಪನ್ನಗಳ ದಾಸ್ತಾನಿಗೆ ನಿರ್ಮಿಸಲಾದ ಗೋದಾಮು ಕಟ್ಟಡ ಉದ್ಘಾಟನೆ ಹಾಗೂ ಕಸದ ತೊಟ್ಟೆ ಮತ್ತು ಹೊಲಿಗೆ ಯಂತ್ರ, ಕಂಪ್ಯೂಟರ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರೈತರಿಗೆ ಹಗಲು 4, ರಾತ್ರಿ 4 ತಾಸು ನಿತಂತರ ವಿದ್ಯುತ್ ನೀಡಬೇಕು ಎಂದು ಅಧಿವೇಶನದಲ್ಲಿ ಸರ್ಕಾರಕ್ಕೆ ಒತ್ತಾಯಿಸಿದರೂ ಕೂಡಾ ಸರ್ಕಾರ ಸಮರ್ಪಕವಾಗಿ ವಿದ್ಯುತ್ ಪೂರೈಸುತ್ತಿಲ್ಲ. ಇದರಿಂದ ಕುಡಿಯುವ ನೀರು, ನೀರಾವರಿ ಸೇರಿದಂತೆ ಅನೇಕ ಸಮಸ್ಯೆಗಳನ್ನು ರೈತರು ಮತ್ತು ಸಾರ್ವಜನಿಕರು ಎದುರಿಸುವ ಸ್ಥಿತಿ ನಿರ್ಮಾಣವಾಗಿದೆ ಎಂದರು.
ಬಸವನಬಾಗೇವಾಡಿ ಮತಕ್ಷೇತ್ರ ಹಾಗೂ ತಾಲೂಕಿನಾದ್ಯಾಂತ ಬಹು ಹಳ್ಳಿ ಕುಡಿಯುವ ನೀರಿನ ಯೋಜನೆ ಹಾಗೂ ಕಾಲುವೆಗಳ ಮೂಲಕ ಕರೆ ತುಂಬುವ ಯೋಜನೆ ಸೇರಿದಂತೆ ಅನೇಕ ಮೂಲಗಳಿಂದ ನೀರಿನ ಸೌಕರ್ಯವಿದ್ದರು ಕೂಡಾ ಸಮರ್ಪಕವಾದ ವಿದ್ಯುತ್ ಇಲ್ಲದ ಕಾರಣ ನೀರು ಸಿಗದ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಈಗಲಾದರೂ ರಾಜ್ಯಾದ್ಯಂತ ನಿರಂತರ 8 ತಾಸು ವಿದ್ಯುತ್ ನೀಡಿದಲ್ಲಿ ರೈತರ ಬಾಳು ಬಂಗಾರವಾಗುತ್ತದೆ ಎಂದು ಹೇಳಿದರು.
ಅಧ್ಯಕ್ಷತೆಯನ್ನು ಮುತ್ತಗಿ ಗ್ರಾಪಂ ಅಧ್ಯಕ್ಷ ತೇಜಶ್ವಿನಿ ಉನ್ನಿಭಾವಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಗೌರಿಶಂಕರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ರಮೇಶ ಸೂಳಿಭಾವಿ, ಟಿಎಪಿಎಂಸಿ ಅಧ್ಯಕ್ಷ ಪ್ರೇಮಕುಮಾರ ಮ್ಯಾಗೇರಿ, ಭೀಮಸಿ ಜಗ್ಗಲ್, ಗ್ರಾಪಂ ಉಪಾಧ್ಯಕ್ಷ ಕನಕಪ್ಪ ಬಂಡಿವಡ್ಡರ, ಸದಸ್ಯರಾದ ಈಶ್ವರ ದೇವರಗುಡಿ, ಶಿವಾಜಿ ಪವಾರ, ಬಸಪ್ಪ ದೇವನಗಾವಿ, ಮೈಬೂಬ ಮುಜಾವರ, ಭೀಮನಗೌಡ ಪಾಟೀಲ, ಅಪ್ಪು ಹಿರೇಮಠ, ಗೀತಾ ಪೂಜಾರಿ, ಮಂಜುಳಾ ಚವ್ಹಾಣ, ಕವಿತಾ ಬಡಿಗೇರ, ರಾಜು ದೊಡ್ಡಮನಿ, ಸೀತಾ ದೊಡ್ಡಮನಿ, ನಿಂಗು ಹಚ್ಚಾಳ, ಶಿಲ್ಪಾ ಶಿಲ್ಪಿ, ತಾಪಂ ಅಧಿಕಾರಿ ಉದಯಕುಮಾರ, ಪಿಡಿಒ ಬಿ.ಎಸ್. ಬಡಿಗೇರ ಸೇರಿದಂತೆ ಅನೇಕರು ಇದ್ದರು. ಪ್ರೇಮು ಮ್ಯಾಗೇರಿ ಸ್ವಾಗತಿಸಿದರು. ಶಶಿಧರ ಪಾಟೀಲ ನಿರೂಪಿಸಿದರು. ಅಪ್ಪು ಧನಶೆಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ
Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್
Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ
ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ
MUST WATCH
ಹೊಸ ಸೇರ್ಪಡೆ
Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ
Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!
Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್