ಹ್ಯಾಟ್ರಿಕ್‌ ಸೋಲು; ಆರ್‌ಸಿಬಿ ಹಾದಿ ಕಠಿನ

ಉಳಿದ ನಾಲ್ಕೂ ಪಂದ್ಯಗಳನ್ನು ದೊಡ್ಡ ಅಂತರದಲ್ಲಿ ಗೆಲ್ಲಬೇಕಾದ ಒತ್ತಡ

Team Udayavani, May 2, 2022, 6:45 AM IST

ಹ್ಯಾಟ್ರಿಕ್‌ ಸೋಲು; ಆರ್‌ಸಿಬಿ ಹಾದಿ ಕಠಿನ

ಮುಂಬಯಿ: ಈ ಸೀಸನ್‌ನ ಮೊದಲಾರ್ಧದಲ್ಲಿ ಭಾರೀ ಭರವಸೆ ಮೂಡಿಸಿದ್ದ ಆರ್‌ಸಿಬಿ, ದ್ವಿತೀಯಾರ್ಧದಲ್ಲಿ ಸೋಲುವುದನ್ನೇ ಹವ್ಯಾಸವನ್ನಾಗಿ ಮಾಡಿಕೊಂಡಂತಿದೆ. ಮೊದಲ 7 ಪಂದ್ಯಗಳಲ್ಲಿ ಐದನ್ನು ಜಯಿಸಿದ್ದನ್ನು ಕಂಡಾಗ ಆರ್‌ಸಿಬಿಯ ಹಣೆಬರಹ ಬದಲಾಯಿತೆಂದೇ ಭಾವಿಸಲಾಗಿತ್ತು.

ಆದರೆ ಡು ಪ್ಲೆಸಿಸ್‌ ಪಡೆ ಈಗ ಹ್ಯಾಟ್ರಿಕ್‌ ಸೋಲಿನ ಸುಳಿಗೆ ಸಿಲುಕಿದೆ. ಉಳಿದಿರುವುದು ಕೇವಲ 4 ಪಂದ್ಯ. ಇವೆಲ್ಲವನ್ನೂ ದೊಡ್ಡ ಅಂತರದಲ್ಲಿ ಗೆದ್ದರಷ್ಟೇ ಆರ್‌ಸಿಬಿ ಟಾಪ್‌-4ರಲ್ಲಿ ಕಾಣಿಸಿಕೊಂಡು ಮುಂದಿನ ಸುತ್ತು ಪ್ರವೇಶಿಸಲಿದೆ ಎಂಬುದು ಸದ್ಯದ ಲೆಕ್ಕಾಚಾರ.

ಗುಜರಾತ್‌ ವಿರುದ್ಧ ಜಯ ಸಾಧಿಸಿದ್ದೇ ಆದರೆ ಆರ್‌ಸಿಬಿಯ ಮುಂದಿನ ಹಾದಿ ಸುಗಮಗೊಳ್ಳುತ್ತಿತ್ತು. ಆದರೆ ನಾಯಕ ಡು ಪ್ಲೆಸಿಸ್‌ ಹೇಳಿದಂತೆ, ಇಲ್ಲಿ ದೊಡ್ಡ ಮೊತ್ತ ದಾಖಲಿಸಲಾಗದೇ ಸೋಲು ಕಾಣಬೇಕಾಯಿತು. “ನಮ್ಮ ಆರಂಭ ಉತ್ತಮವಾಗಿಯೇ ಇತ್ತು. ಮಧ್ಯಮ ಕ್ರಮಾಂಕದಲ್ಲಿ ಸಾಕಷ್ಟು ರನ್‌ ಬರಲಿಲ್ಲ.

ಹೀಗಾಗಿ 10-15 ರನ್‌ ಕೊರತೆ ಕಾಡಿತು. ಹಿಂದಿನೆರಡು ಪಂದ್ಯಗಳಲ್ಲಿ ತೀರಾ ಕಳಪೆ ಬ್ಯಾಟಿಂಗ್‌ ನಡೆಸಿದ್ದರಿಂದ ಒಮ್ಮೆಲೇ ಬೃಹತ್‌ ಮೊತ್ತ ಗಳಿಸುವುದು ಸುಲಭವಲ್ಲ. ಹಾಗೆಯೇ ನಮ್ಮ ಬೌಲಿಂಗ್‌ ಕೂಡ ಆರಂಭದಲ್ಲಿ ಗಮನಾರ್ಹ ಮಟ್ಟದಲ್ಲಿತ್ತು. ಬಳಿಕ ಗುಜರಾತ್‌ ಬ್ಯಾಟರ್ ಎಂದಿನ ಲಯ ಕಂಡುಕೊಂಡರು. ಚೇಸಿಂಗ್‌ ಸುಲಭವಾಗಿ ಪರಿಣಮಿಸಿತು’ ಎಂದು ಡು ಪ್ಲೆಸಿಸ್‌ ಹೇಳಿದರು.

ಆರ್‌ಸಿಬಿ ಇನ್ನು ಚೆನ್ನೈ (ಮೇ 4), ಹೈದರಾಬಾದ್‌ (ಮೇ 8), ಪಂಜಾಬ್‌ (ಮೇ 13) ಮತ್ತು ಗುಜರಾತ್‌ (ಮೇ 19) ವಿರುದ್ಧ ಆಡಬೇಕಿದೆ. ಇವೆಲ್ಲವನ್ನೂ ಗೆಲ್ಲುವುದಷ್ಟೇ ಅಲ್ಲ, ರನ್‌ರೇಟನ್ನೂ ಹೆಚ್ಚಿಸಿಕೊಳ್ಳಬೇಕಿದೆ. ಸದ್ಯ -0.558 ರನ್‌ರೇಟ್‌ ಹೊಂದಿದೆ.

ಗುಜರಾತ್‌ ಜನರಿಗೆ ಅರ್ಪಣೆ
ರವಿವಾರ “ಗುಜರಾತ್‌ ಡೇ’ ಆಗಿರುವುದರಿಂದ ಈ ಗೆಲುವನ್ನು ಗುಜರಾತ್‌ ಜನರಿಗೆ ಅರ್ಪಿಸುವುದಾಗಿ ಹೇಳಿದವರು ಗುಜರಾತ್‌ ಟೈಟಾನ್ಸ್‌ ನಾಯಕ ಹಾರ್ದಿಕ್‌ ಪಾಂಡ್ಯ.

9ರಲ್ಲಿ 8 ಪಂದ್ಯಗಳನ್ನು ಗೆದ್ದು 16 ಅಂಕಗಳೊಂದಿಗೆ ಅಗ್ರಸ್ಥಾನ ಅಲಂಕರಿಸಿರುವ ಗುಜರಾತ್‌ ಮೊದಲ ಪ್ರವೇಶದಲ್ಲೇ ಪ್ಲೇ ಆಫ್ ಬಾಗಿಲಲ್ಲಿ ನಿಂತಿದೆ. ಇನ್ನೊಂದು ಪಂದ್ಯ ಗೆದ್ದರೆ ತಂಡದ ಮುಂದಿನ ಸುತ್ತು ಅಧಿಕೃತಗೊಳ್ಳಲಿದೆ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rohit SHarma (2)

Star Sports ; ರೋಹಿತ್‌ ಶರ್ಮರ ಖಾಸಗಿ ಮಾತು ಪ್ರಸಾರ ಮಾಡಿಲ್ಲ

1-wewqe

Alexander Zverev ರೋಮನ್‌ ಕಿಂಗ್‌: ಜೆರ್ರಿ ವಿರುದ್ಧ 6-4, 7-5 ಜಯ

1-weqwewq

Para Athletics: ದೀಪ್ತಿ ಜೀವಂಜಿ ವಿಶ್ವದಾಖಲೆ

1-nnn

World ಬೆಂಚ್‌ಪ್ರಸ್‌ ಸ್ಪರ್ಧೆ : ಸತೀಶ್‌ ಕುಮಾರ್‌ ಕುದ್ರೋಳಿ ಕೋಚ್‌

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.