ಅಭಿವೃದ್ಧಿಗೊಂಡ ಫುಟ್‌ಪಾತ್‌ನಲ್ಲಿಯೇ ವಸ್ತುಗಳ ರಾಶಿ

ಪಾದಚಾರಿಗಳು ರಸ್ತೆಗಿಳಿದು ತೆರಳಬೇಕಾದ ಅನಿವಾರ್ಯ

Team Udayavani, May 2, 2022, 11:06 AM IST

traffic

ಮಹಾನಗರ: ಸ್ಮಾರ್ಟ್‌ಸಿಟಿ ಮತ್ತು ಮಹಾನಗರ ಪಾಲಿಕೆಯಿಂದ ಮಂಗಳೂರು ಹಲವು ಕಡೆಗಳಲ್ಲಿ ಫುಟ್‌ ಪಾತ್‌ ಅಭಿವೃದ್ಧಿಗೊಂಡಿದೆ. ಕಾಮಗಾರಿ ಉದ್ದೇಶಕ್ಕೆಂದು ಬಳಸುವ ಕೆಲವೊಂದು ವಸ್ತುಗಳನ್ನು ಫುಟ್‌ಪಾತ್‌ ಮೇಲೆಯೇ ರಾಶಿ ಹಾಕಲಾಗಿದ್ದು, ಪಾದಚಾರಿಗಳು ರಸ್ತೆಗಿಳಿದು ನಡೆಯಬೇಕಾದ ಅನಿವಾರ್ಯ ಎದುರಾಗಿದೆ.

ನಗರದಲ್ಲಿ ಗೈಲ್‌, ಜಲಸಿರಿ ಮಹಾನಗರ ಪಾಲಿಕೆ, ಸ್ಮಾರ್ಟ್‌ಸಿಟಿ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದೆ. ಕೆಲವೊಂದು ಕಾಮಗಾರಿ ಫುಟ್‌ಪಾತ್‌ ಬಳಿಯೇ ನಡೆಯುತ್ತಿದೆ. ಬಿಜೈನಿಂದ ಲಾಲ್‌ಬಾಗ್‌ ರಸ್ತೆಯಲ್ಲಿ ಕಳೆದ ಕೆಲ ತಿಂಗಳ ಹಿಂದೆ ಅಭಿವೃದ್ಧಿಗೊಳಿಸಲಾಗಿತ್ತು. ಆ ವೇಳೆ ಫುಟ್‌ಪಾತ್‌ ಕೂಡ ವ್ಯವಸ್ಥಿತವಾಗಿ ನಿರ್ಮಾಣಗೊಂಡಿತ್ತು. ಅದೇ ಭಾಗದಲ್ಲಿ ಸದ್ಯ ಪೈಪ್‌ಲೈನ್‌ ಕಾಮಗಾರಿಗೆಂದು ಅಗೆಯಲಾಗಿದೆ. ಈ ರಸ್ತೆಯ ಫುಟ್‌ಪಾತ್‌ನಲ್ಲಿ ಪ್ರತೀ ದಿನ ಅನೇಕರು ಸಂಚರಿಸುತ್ತಿದ್ದು, ಕಳೆದ ಹಲವು ತಿಂಗಳಿನಿಂದ ಫುಟ್‌ಪಾತ್‌ನಲ್ಲಿ ಸೂಚನ ಫಲಕ, ಪೈಪ್‌, ಜನರೇಟರ್‌ ಸಹಿತ ಕಲ್ಲುಗಳ ರಾಶಿ ಹಾಕಲಾಗಿದೆ. ಇದೇ ಕಾರಣ ಈ ಭಾಗದ ಫುಟ್‌ಪಾತ್‌ನಲ್ಲಿ ಸಾರ್ವಜನಿಕರು ನಡೆಯುವುದು ಕಷ್ಟ. ಆರ್‌ಟಿಒ ಕಚೇರಿ ಬಳಿ ಇತ್ತೀಚೆಗೆಯಷ್ಟೇ ಫುಟ್‌ಪಾತ್‌ ಅಭಿವೃದ್ಧಿಗೊಂಡಿದ್ದು, ಕಬ್ಬಿಣದ ಕಂಬಗಳನ್ನು ಅಲ್ಲೇ ಇಡಲಾಗಿದೆ. ಕೆ.ಎಸ್. ರಾವ್‌ ರಸ್ತೆಯುದ್ದಕ್ಕೂ ಫುಟ್‌ಪಾತ್‌ ಕಾಮಗಾರಿ ನಡೆಯುತ್ತಿದೆ. ಸದ್ಯ ಕಾಮಗಾರಿಗೆಂದು ರಾಶಿ ಹಾಕಿದ್ದ ಸಿಮೆಂಟ್‌, ಕಲ್ಲು ಅಲ್ಲೇ ಇದೆ. ಫುಟ್‌ ಪಾತ್‌ನಲ್ಲಿ ಕೇಬಲ್‌ ರಾಶಿ ಹಾಕಲಾಗಿದೆ. ನಗರದ ಕೆಲವು ಕಡೆಗಳಲ್ಲಿ ಫುಟ್‌ಪಾತ್‌ನಲ್ಲಿಯೇ ಅನಧಿಕೃತವಾಗಿ ತಳ್ಳುಗಾಡಿ ಇಟ್ಟು ವ್ಯಾಪಾರ ಮಾಡಲಾಗುತ್ತಿದೆ. ಇಲ್ಲೇ, ಕುಳಿತು ಗ್ರಾಹಕರು ತಿಂಡಿ ತಿನ್ನುತ್ತಾರೆ. ಈ ಹಿಂದೆ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಅನೇಕ ಬಾರಿ ಈ ವಿಚಾರ ಚರ್ಚೆ ನಡೆಸಲಾಗಿತ್ತು. ಕೆಲವು ತಿಂಗಳ ಹಿಂದೆ ಪಾಲಿಕೆ ಟೈಗರ್‌ ಕಾರ್ಯಾಚರಣೆ ನಡೆಸಿತ್ತು. ಆದರೂ ನಗರದ ಲೇಡಿಹಿಲ್‌, ಮಣ್ಣಗುಡ್ಡೆ, ಚಿಲಿಂಬಿ ಸಹಿತ ಹಲವು ಕಡೆ ಫುಟ್‌ಪಾತ್‌ ಅತಿಕ್ರಮಣ ನಡೆದಿದೆ.

ಕಂಬದಲ್ಲಿ ಕೇಬಲ್‌!

ನಗರದ ಕೆಲವೊಂದು ವಿದ್ಯುತ್‌ ಕಂಬಗಳು ಫುಟ್‌ಪಾತ್‌ನಲ್ಲಿ ಅಥವಾ ಅದಕ್ಕೆ ಹೊಂದಿಕೊಂಡೇ ಇದೆ. ನಗರದ ಬಂದರು, ಕೊಡಿಯಾಲಬೈಲ್‌, ಕೊಟ್ಟಾರ, ಉರ್ವ, ಬಂಟ್ಸ್‌ಹಾಸ್ಟೆಲ್‌, ಕದ್ರಿ, ರಥಬೀದಿ, ಮಣ್ಣಗುಡ್ಡೆ ಸಹಿತ ವಿವಿಧ ಕಡೆಗಳಲ್ಲಿ ಬಹುತೇಕ ಕಂಬಗಳ ಮೇಲೆ ಸುರುಳಿಸುತ್ತಿದ ಕೇಬಲ್‌ ಬಂಡಲ್‌ಗ‌ಳನ್ನು ಅನಗತ್ಯವಾಗಿ ನೇತು ಹಾಕಲಾಗಿದೆ. ಇದು ಪಾದಚಾರಿ ಮಾರ್ಗಕ್ಕೆ ತಾಗಿಕೊಂಡು ಇದ್ದು, ಇಲ್ಲಿ ಸಾರ್ವಜನಿಕರು ನಡೆಯವುದು ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅನಧಿಕೃತ ಕೇಬಲ್‌ ತೆರವು ಮಾಡುವಂತೆ ಸಂಬಂಧಿತ ನೆಟ್‌ವರ್ಕ್‌ ಕಂಪೆನಿಗೆ ಈಗಾಗಲೇ ಪಾಲಿಕೆಯಿಂದ ಸೂಚನೆ ನೀಡಲಾಗಿದೆ. ಆದರೂ ತೆರವು ಕಾರ್ಯ ನಡೆದಿಲ್ಲ.

ಪಾಲಿಕೆ ಎದುರೇ ಅಪಾಯಕಾರಿ ಗುಂಡಿ!

ಪಾಲಿಕೆಯ ಎದುರಿನ ಸೈಬಿನ್‌ ಕಾಂಪ್ಲೆಕ್ಸ್‌ ಬಳಿ ಫುಟ್‌ಪಾತ್‌ಗೆ ಅಳವಡಿಸಿದ್ದ ಸ್ಲ್ಯಾಬ್‌ ಮುರಿದು ಹಲವು ತಿಂಗಳುಗಳು ಕಳೆದಿವೆ. ಪರಿಣಾಮ ಅಲ್ಲಿ ಅಪಾಯಕಾರಿ ಗುಂಡಿ ಉಂಟಾಗಿದ್ದು, ಸಾರ್ವಜನಿಕರಿಗೆ ಅಪಾಯ ಕಟ್ಟಿಟ್ಟ ಬುತ್ತಿ. ಇದೇ ಫುಟ್‌ಪಾತ್‌ನಲ್ಲಿ ಪ್ರತೀ ದಿನ ನೂರಾರು ಮಂದಿ ಪಾದಚಾರಿಗಳು ನಡೆದುಕೊಂಡು ಬರುತ್ತಿದ್ದು, ಆಯ ತಪ್ಪಿದರೆ ಗುಂಡಿಗೆ ಬೀಳುವ ಆತಂಕ ಎದುರಾಗಿದೆ. ಅದರಲ್ಲೂ ರಾತ್ರಿ ವೇಳೆಯಂತೂ ಈ ದೊಡ್ಡ ಗುಂಡಿ ಸಾರ್ವಜನಿಕರು ತೊಂದರೆಗೊಳಗಾಗಿದ್ದಾರೆ.

ಫುಟ್‌ಪಾತ್‌ನಲ್ಲೇ ವಾಹನ ಸಂಚಾರ

ಪಾದಚಾರಿಗಳಿಗೆ ಅನುಕೂಲವಾಗ ಲೆಂದು ಫುಟ್‌ಪಾತ್‌ ವ್ಯವಸ್ಥೆ ಕಲ್ಪಿಸಿದರೆ, ನಗರದ ಹಲವು ಕಡೆಗಳಲ್ಲಿ ಫುಟ್‌ಪಾತ್‌ನಲ್ಲಿಯೇ ದ್ವಿಚಕ್ರ ವಾಹನಗಳು ಸಂಚರಿಸುತ್ತಿದೆ. ನಗರದ ಎಂ.ಜಿ. ರಸ್ತೆ, ಕೆ.ಎಸ್. ರಾವ್‌ ರಸ್ತೆ ಸೇರಿದಂತೆ ವಿವಿಧ ರಸ್ತೆಗಳಲ್ಲಿ ವಿವಿಧ ಕಡೆಗಳಲ್ಲಿ ಫುಟ್‌ಪಾತ್‌ ರಸ್ತೆ ಮಟ್ಟಕ್ಕಿಂತ ತುಂಬಾ ಎತ್ತರದಲ್ಲಿಲ್ಲ. ಪರಿಣಾಮ ಟ್ರಾಫಿಕ್‌ ಒತ್ತಡ ಹೆಚ್ಚಿದ್ದಾಗ ದ್ವಿಚಕ್ರ ವಾಹನ ಸವಾರರು ಫುಟ್‌ಪಾತ್‌ ಮುಖೇನ ಸಂಚರಿಸುತ್ತಾರೆ. ಆಗ ಪಾದಾಚಾರಿಗಳು ಫುಟ್‌ಪಾತ್‌ ಬದಲು ರಸ್ತೆಯಲ್ಲಿ ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ನಗರದ ಕೆಲವೆಡೆ ಮಾತ್ರ ಸಿ.ಸಿ. ಕೆಮರಾ ಅಳವಡಿಸಲಾಗಿದ್ದು, ಈ ರೀತಿ ಸಂಚಾರ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ. ಆದರೆ ಹಲವು ಕಡೆಗಳಲ್ಲಿ ಪೊಲೀಸರು ಕಾವಲು ಇರುವುದಿಲ್ಲ, ಸಿಸಿ ಕೆಮರಾ ಇರುವುದಿಲ್ಲ. ಇದೇ ಕಾರಣಕ್ಕೆ ಫುಟ್‌ಪಾತ್‌ ಅತಿಕ್ರಮಣ ನಗರದಲ್ಲಿ ನಡೆಯುತ್ತಿದೆ.

ಟಾಪ್ ನ್ಯೂಸ್

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Bangla MP who came to Kolkata goes missing

ಕೋಲ್ಕತಾಗೆ ಬಂದ ಬಾಂಗ್ಲಾ ಸಂಸದ ನಾಪತ್ತೆ

Swati Maliwal case: Data destruction on Bibhav’s phone

Swati Maliwal case: ಬಿಭವ್‌ ಫೋನ್‌ನಲ್ಲಿ ದತ್ತಾಂಶ ನಾಶ

Former AAP leader Jagbir Singh joins BJP

New Delhi; ಆಪ್‌ ಮಾಜಿ ನಾಯಕ ಜಗ್ಬೀರ್‌ ಸಿಂಗ್‌ ಬಿಜೆಪಿ ಸೇರ್ಪಡೆ

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.