ಬಿಜೆಪಿ ನಾಯಕರಲ್ಲಿ ‘ಸಂಕಟ’ ತಂದ ‘ಸಂತೋಷ’ ಹೇಳಿಕೆ; ಬಿಎಲ್ಎಸ್ ನೀಡಿದ ಮಹತ್ವದ ಸುಳಿವೇನು?
Team Udayavani, May 2, 2022, 10:59 AM IST
ಬೆಂಗಳೂರು: ಮುಂದಿನ ಚುನಾವಣೆಯ ಅಭ್ಯರ್ಥಿ ಆಯ್ಕೆ ಹಾಗೂ ವಂಶಾಡಳಿತ ರಾಜಕಾರಣದ ಕುರಿತಂತೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ನೀಡಿರುವ ಹೇಳಿಕೆ ಈಗ ಬಿಜೆಪಿಯಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಯಾರನ್ನು ಗುರಿಯಾಗಿಸಿಕೊಂಡು ಸಂತೋಷ್ ಈ ಹೇಳಿಕೆ ನೀಡಿದ್ದಾರೆ ಎಂಬ ಬಗ್ಗೆ ಪಕ್ಷದಲ್ಲಿ ಗುಸುಗುಸು ಆರಂಭವಾಗಿದೆ.
ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ, ಸಂಘಟನಾತ್ಮಕ ಸಿದ್ಧತೆ ಸೇರಿದಂತೆ ಬಿಜೆಪಿಯಲ್ಲಿ ಸಾಕಷ್ಟು ಸಿದ್ಧತೆ ನಡೆಯುತ್ತಿರುವಾಗಲೇ ಸಂತೋಷ್ ಅವರ ಹೇಳಿಕೆ ಈಗ ಎಲ್ಲಿಲ್ಲದ ಚರ್ಚೆಗೆ ಕಾರಣವಾಗಿದೆ.
ಸಂಘಟನಾತ್ಮಕವಾಗಿ ಆಯಕಟ್ಟಿನ ಸ್ಥಾನದಲ್ಲಿರುವ ಸಂತೋಷ್ ಕೇವಲ “ವಾಕ್ ಚಪಲ”ಕ್ಕಾಗಿ ಈ ಮಾತನಾಡಿರಲು ಸಾಧ್ಯವಿಲ್ಲ. ಪಕ್ಷದ ವಲಯದಲ್ಲಿ ನಡೆಯಬಹುದಾದ ಮಹತ್ತರ ಬದಲಾವಣೆಯ ಸುಳಿವನ್ನೇ ಅವರು ನೀಡಿದ್ದಾರೆ ಎಂದು ಈಗ ವ್ಯಾಖ್ಯಾನಿಸಲಾಗುತ್ತಿದೆ.
ಇದನ್ನೂ ಓದಿ:ಆತ್ಮನಿರ್ಭರ ಭಾರತದ ಕಲ್ಪನೆ ಸಾಕಾರಗೊಳಿಸಲು ಶ್ರಮಿಸಿ: ಅಂಗಾರ
ಸಂತೋಷ್ ಅವರ ಹೇಳಿಕೆಯಲ್ಲಿ ಪ್ರಮುಖವಾಗಿ ನಾಲ್ಕು ಅಂಶಗಳು ಈಗ ಚರ್ಚೆಗೆ ಕಾರಣವಾಗಿದೆ. ಅವುಗಳನ್ನು ಒಂದೊಂದಾಗಿ ವಿಶ್ಲೇಷಿಸುವುದಾದರೆ…
ನಾಯಕತ್ವದ ವಯಸ್ಸು:
ನಾಯಕತ್ವದ ವಯಸ್ಸಿನ ಬಗ್ಗೆ ಸಂತೋಷ್ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ. ಕೇಂದ್ರ ಸಂಪುಟದಲ್ಲಿ ಇರುವ ಸಚಿವರ ಸರಾಸರಿ ವಯಸ್ಸು 57, ನಾನಾ ರಾಜ್ಯಗಳ ಬಿಜೆಪಿ ಮುಖ್ಯಮಂತ್ರಿ ವಯಸ್ಸು ಕೂಡಾ 55ರಿಂದ 57 ಎಂದು ಹೇಳುವ ಮೂಲಕ ಭವಿಷ್ಯದ ನಾಯಕತ್ವಕ್ಕೆ ವೃದ್ಧಾಪ್ಯದ ಲೇಪ ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದಂತಾಗಿದೆ.
ಹಿರಿಯರಿಗೆ ಗೇಟ್ ಪಾಸ್:
ಪಕ್ಷದಲ್ಲಿ ಹಿರಿಯರಿಗೆ ಗೇಟ್ ಪಾಸ್ ನೀಡುವ ಸಾಧ್ಯತೆ ಬಗ್ಗೆ ಸಂತೋಷ್ ಪರೋಕ್ಷವಾಗಿ ಪ್ರಸ್ತಾಪಿಸಿದ್ದಾರೆ. ಇದಕ್ಕಾಗಿ ಅವರು ಉತ್ತರ ಪ್ರದೇಶ, ಗುಜರಾತ್ ಹಾಗೂ ದಿಲ್ಲಿ ಕಾರ್ಪೋರೇಷನ್ ಚುನಾವಣೆಗೆ ನಡೆಸಿದ ಅಭ್ಯರ್ಥಿ ಆಯ್ಕೆಯ ಉದಾಹರಣೆ ನೀಡಿದ್ದಾರೆ. ಒಂದು ಕ್ಷೇತ್ರದಲ್ಲಿ ಹಲವು ಬಾರಿ ಗೆದ್ದವರಿಗೆ ಇದರಿಂದ ನಡುಕ ಶುರುವಾಗಿದೆ.
ವಂಶ ರಾಜಕಾರಣ:
ಎಲ್ಲದಕ್ಕಿಂತ ಮುಖ್ಯವಾಗಿ ವಂಶವಾಹಿನಿ ರಾಜಕಾರಣದ ಬಗ್ಗೆ ಅವರು ಪ್ರಸ್ತಾಪಿಸಿದ್ದಾರೆ. ಅಪ್ಪನಿಂದ ಮಗನಿಗೆ ಅಧಿಕಾರ ಹಸ್ತಾಂತರಿಸಿರುವ ಪ್ರಕ್ರಿಯೆಯನ್ನು ಅವರು ಬಲವಾಗಿ ವಿರೋಧಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಲವು ಬಾರಿ ಈ ವಿಚಾರ ಪ್ರಸ್ತಾಪಿಸಿರುವುದರಿಂದ ಸಂತೋಷ್ ಹೇಳಿಕೆಗೆ ಈಗ ಮಹತ್ವ ಲಭಿಸಿದೆ.
ನಾಯಕತ್ವ ಬದಲಾವಣೆ:
ಇದೆಲ್ಲಕ್ಕಿಂತ ಮುಖ್ಯವಾಗಿ ರಾಜ್ಯದ ನಾಯಕತ್ವ ಬದಲಾವಣೆ ಬಗ್ಗೆ ಸಂತೋಷ್ ಸೂಚ್ಯವಾಗಿ ಹೇಳಿರಬಹುದೇ ಎಂದು ಚರ್ಚೆಯಾಗುತ್ತಿದ್ದು, ಇನ್ನೆರಡು ದಿನದಲ್ಲಿ ಎಲ್ಲದಕ್ಕೂ ಸ್ಪಷ್ಟತೆ ಲಭಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ