ವೇಸ್ಟ್‌ ಟು ಎನರ್ಜಿಗೆ ವೇಗ ನೀಡದ ಬಿಬಿಎಂಪಿ

ಕಸದಿಂದ ವಿದ್ಯುತ್‌ ಉತ್ಪಾದಿಸುವ 260 ಕೋಟಿ ರೂ. ಯೋಜನೆಗೆ ತನ್ನ ಪಾಲು ನೀಡಲು ಪಾಲಿಕೆ ಹಿಂದೇಟು

Team Udayavani, May 3, 2022, 10:47 AM IST

4waste

ಬೆಂಗಳೂರು: ಈ ಮೊದಲು ಕಸದಿಂದ ವಿದ್ಯುತ್‌ ಉತ್ಪಾದಿಸುವ ಕನಸಿನ ಯೋಜನೆಗೆ ಖಾಸಗಿ ಕಂಪನಿಗಳು ಮುಂದೆ ಬರುತ್ತಿರಲಿಲ್ಲ. ಈಗ ಸ್ವತಃ ಸರ್ಕಾರದ ಅಂಗಸಂಸ್ಥೆ ಕರ್ನಾಟಕ ವಿದ್ಯುತ್‌ ನಿಗಮ (ಕೆಪಿಸಿಎಲ್‌)ವೇ ಯೋಜನೆ ಕೈಗೆತ್ತಿಕೊಂಡಿದೆ. ಆದರೆ, ಇದಕ್ಕೆ ಬಿಬಿಎಂಪಿ ನಿಯಮಿತವಾಗಿ ತನ್ನ ಪಾಲಿನ ಹಣವನ್ನೇ ನೀಡುತ್ತಿಲ್ಲ. ಇದು ಮತ್ತೊಂದು ರೀತಿಯ ಸಮಸ್ಯೆ ಸೃಷ್ಟಿಗೆ ಎಡೆಮಾಡಿಕೊಡುವ ಲಕ್ಷಣಗಳು ಕಂಡುಬರುತ್ತಿವೆ.

ಸುಮಾರು 260 ಕೋಟಿ ರೂ. ವೆಚ್ಚದಲ್ಲಿ ಬಿಡದಿಯಲ್ಲಿ ಕಸದಿಂದ ವಿದ್ಯುತ್‌ ಉತ್ಪಾದನೆ (ವೇಸ್ಟ್‌ ಟು ಎನರ್ಜಿ) ಮಾಡುವ ಯೋಜನೆಗೆ 2020ರ ಅಕ್ಟೋಬರ್‌ನಲ್ಲಿ ಚಾಲನೆ ನೀಡಿದ್ದು, ವರ್ಷಾಂತ್ಯಕ್ಕೆ ಇದನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿತ್ತು. ಕೆಪಿಸಿಎಲ್‌ ಮತ್ತು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಶೇ. 50ರಷ್ಟು ಅಂದರೆ ತಲಾ 130 ಕೋಟಿ ವೆಚ್ಚ ಭರಿಸುವ ಮೂಲಕ ಯೋಜನೆ ಅನುಷ್ಠಾನಗೊಳಿಸಬೇಕಿದೆ. ಇದನ್ನು ಯೋಜನೆಗಳ ಪ್ರಗತಿಗೆ ಅನುಗುಣವಾಗಿ ಎರಡೂ ಸಂಸ್ಥೆಗಳು ಹಂತ-ಹಂತವಾಗಿ ಹಣ ನೀಡಬೇಕಾಗುತ್ತದೆ. ಆರಂಭದಲ್ಲಿ ತಲಾ 10 ಕೋಟಿ ವಿನಿಯೋಗಿಸಿದ್ದು, ಇದಕ್ಕೆ ಪ್ರತಿಯಾಗಿ “ಯುಟಿಲೈಸೇಷನ್‌ ಪ್ರಮಾಣಪತ್ರ’ ಕೂಡ ದೊರೆತಿದೆ.

ಎರಡನೇ ಹಂತದಲ್ಲಿ ತಲಾ 30 ಕೋಟಿ ನೀಡಬೇಕಿದ್ದು, ಕೆಪಿಸಿಎಲ್‌ ತನ್ನ ಪಾಲಿನ ಹಣ ಬಿಡುಗಡೆ ಮಾಡಿದೆ. ಆದರೆ, ಪಾಲಿಕೆಯಿಂದ ನಾಲ್ಕು ತಿಂಗಳಾದರೂ ಹಣ ಬಿಡುಗಡೆ ಆಗಿಲ್ಲ. ಈ ಸಂಬಂಧ ಮೂರು ಬಾರಿ ಕೆಪಿಸಿಎಲ್‌ನಿಂದ ಪತ್ರ ಬರೆಯಲಾಗಿದೆ. ತಿಂಗಳ ಹಿಂದಷ್ಟೇ ಸರ್ಕಾರದಿಂದ ಪಾಲಿಕೆಗೆ ಸಾವಿರ ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಅದರಿಂದಲೂ ಯೋಜನೆಗೆ ಹಣ ಬಿಡುಗಡೆ ಆಗಿಲ್ಲ. ಈ ವಿಳಂಬ ಧೋರಣೆ ಮುಂದುವರಿದರೆ, ಯೋಜನೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎನ್ನಲಾಗಿದೆ.

ಯೋಜನೆ ಅಡಿ ಪುನರ್‌ಬಳಕೆ ಸಾಧ್ಯವಿಲ್ಲದ ಕಸ (ಆರ್‌ಡಿಎಫ್)ವನ್ನು ಸುಟ್ಟು ಅದರಿಂದ ವಿದ್ಯುತ್‌ ಉತ್ಪಾದಿಸಲಾಗುತ್ತದೆ. ಸುಮಾರು 600 ಟನ್‌ ನಗರದ ತ್ಯಾಜ್ಯವು ಇದಕ್ಕೆ ಪೂರೈಸಲಾಗುತ್ತದೆ. ಇದರಿಂದ 11.5 ಮೆ.ವಾ. ವಿದ್ಯುತ್‌ ಉತ್ಪಾದಿಸಿ, ಸರಬರಾಜು ಮಾಡಲಾಗುತ್ತದೆ. 2023ರ ಮಾರ್ಚ್‌ ವೇಳೆಗೆ ಇದನ್ನು ಲೋಕಾರ್ಪಣೆ ಮಾಡುವ ಗುರಿಯನ್ನು ಕೆಪಿಸಿಎಲ್‌ ಹೊಂದಿದೆ. ಪ್ರಸ್ತುತ ಶೇ. 35ರಿಂದ 40ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, 35-40 ಕೋಟಿ ರೂ. ಖರ್ಚಾಗಿದೆ. ಕೆಪಿಸಿಎಲ್‌ ಈ ಯೋಜನೆಗಾಗಿ ತನ್ನ ಪಾಲಿನ ಹಣ ಭರಿಸಲು ಬ್ಯಾಂಕ್‌ನಿಂದ ಸಾಲ ಮಾಡಿದೆ ಎಂದು ನಿಗಮದ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಮಾಹಿತಿ ನೀಡಿದರು.

ಸರ್ಕಾರಿ ಸಂಸ್ಥೆ ಎಂಬ ಉದಾಸೀನ?

ಎರಡೂ ಸರ್ಕಾರಿ ಸಂಸ್ಥೆಗಳೇ ಆಗಿದ್ದರಿಂದ ಹಣ ಬಿಡುಗಡೆ ವಿಳಂಬದಿಂದ ಯೋಜನೆಗೆ ಯಾವುದೇ ಸಮಸ್ಯೆ ಆಗದು ಎಂಬ ಉದಾಸೀನ ಕೂಡ ಇದಕ್ಕೆ ಕಾರಣ ಎನ್ನಲಾಗಿದೆ. ಅಲ್ಲದೆ, ಯೋಜನೆಗಳಿಗೆ ಜೇಷ್ಠತೆ ಆಧಾರದಲ್ಲಿ ಹಣ ನೀಡಲಾಗುತ್ತಿದೆ. ಉದ್ದೇಶಿತ ವೇಸ್ಟ್‌ ಟು ಎನರ್ಜಿ ಯೋಜನೆಗೆ ಹಣ ಬಿಡುಗಡೆಯಾಗದಿರಲು ಇದು ಕೂಡ ಕಾರಣ ಇರಬಹುದು ಎಂದು ಅಧಿಕಾರಿಯೊಬ್ಬರು ತಿಳಿಸುತ್ತಾರೆ.

“ಈಗಾಗಲೇ ತನ್ನ ಪಾಲಿನ ಹಣ ಬಿಡುಗಡೆ ಮಾಡುವಂತೆ ಪಾಲಿಕೆಗೆ ಮೂರು ಬಾರಿ ಪತ್ರ ಬರೆಯಲಾಗಿದೆ. ಖುದ್ದು ಮುಖ್ಯ ಆಯುಕ್ತರು ಹಾಗೂ ವಿಶೇಷ ಆಯುಕ್ತರಿಗೂ ಮನವಿ ಮಾಡಿದ್ದೇವೆ. ಈ ಮಧ್ಯೆ ಯೋಜನೆಗೆ ಯಾವುದೇ ತೊಂದರೆ ಯಾಗಿಲ್ಲ. ನಿಗದಿತ ಗುರಿಯಲ್ಲಿ ಪೂರ್ಣಗೊಳಿಸಲಾಗುವುದು’ ಎಂದು ಕೆಪಿಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ವಿ. ಪೊನ್ನುರಾಜ್‌ ಸ್ಪಷ್ಟಪಡಿಸಿದರು.

“ಕೆಪಿಸಿಎಲ್‌ನಿಂದ ಪಾಲಿಕೆಗೆ ಹಣ ಬಿಡುಗಡೆ ಮಾಡುವಂತೆ ಪತ್ರ ಬರೆಯಲಾಗಿದೆ. ಎಷ್ಟು ಕೇಳಿದ್ದಾರೆ ಎಂಬುದು ನಿಖರವಾಗಿ ತಕ್ಷಣಕ್ಕೆ ಗೊತ್ತಿಲ್ಲ. ಈ ಬಗ್ಗೆ ಪರಿಶೀಲಿಸಿ ಆದ್ಯತೆ ಮೇರೆಗೆ ಹಣ ಬಿಡುಗಡೆ ಮಾಡಲಾಗುವುದು. ಇದರಿಂದ ಯೋಜನೆಗೆ ಯಾವುದೇ ಅಡತಡೆಯಾಗದು’ ಎಂದು ಬಿಬಿಎಂಪಿ ವಿಶೇಷ ಆಯುಕ್ತೆ (ಹಣಕಾಸು) ತುಳಸಿ ಮದ್ದಿನೇನಿ ತಿಳಿಸಿದರು.

ಯೋಜನೆ ಜಾರಿಯಾದರೆ 35 ಸಾವಿರ ಮನೆಗೆ ವಿದ್ಯುತ್‌! “ಆತ್ಮನಿರ್ಭರ ಭಾರತ’ ಯೋಜನೆ ಅಡಿ ನಿರ್ಮಾಣ ಗೊಳ್ಳಲಿರುವ ಈ ವಿದ್ಯುತ್‌ ಸ್ಥಾವರದಿಂದ ಒಂದು ವಿಧಾನಸಭಾ ಕ್ಷೇತ್ರದ ಮನೆಗಳಿಗೆ ಬೇಕಾಗುವಷ್ಟು ವಿದ್ಯುತ್‌ ಬೇಡಿಕೆಯನ್ನು ಪೂರೈಸಬಹುದು. 600 ಟನ್‌ ಕಸದಿಂದ ಸುಮಾರು 11.5 ಮೆ.ವಾ. ವಿದ್ಯುತ್‌ ಉತ್ಪಾದನೆ ಆಗುತ್ತದೆ. ಇದರಿಂದ 35 ಸಾವಿರ ಮನೆಗಳಿಗೆ ವಿದ್ಯುತ್‌ ಪೂರೈಸಬಹುದಾಗಿದ್ದು, ಇದು ಒಂದು ವಿಧಾನಸಭಾ ಕ್ಷೇತ್ರದಲ್ಲಿ ಬರುವ ಮನೆಗಳಿಗೆ ಸಮ ಎಂದು ಅಂದಾಜಿಸಲಾಗಿದೆ.

ವಾರ್ಷಿಕ 14 ಕೋಟಿ ಪಾಲಿಕೆಗೆ ಉಳಿತಾಯ

ನಗರದಲ್ಲಿ ನಿತ್ಯ 4,000ರಿಂದ 4,500 ಟನ್‌ ತ್ಯಾಜ್ಯ ಉತ್ಪಾದನೆಯಾಗುತ್ತದೆ. ಇದರಲ್ಲಿ ಶೇ. 60ರಷ್ಟು ಹಸಿ ಮತ್ತು ಶೇ. 40ರಷ್ಟು ಒಣತ್ಯಾಜ್ಯ ಬರುತ್ತದೆ. ವಿದ್ಯುತ್‌ ಸ್ಥಾವರಕ್ಕೆ 600 ಟನ್‌ ಪೂರೈಸುವುದರಿಂದ ಇದರ ವಿಲೇವಾರಿ ವೆಚ್ಚ ವಾರ್ಷಿಕ 14 ಕೋಟಿ ರೂ. ಪಾಲಿಕೆಗೆ ಉಳಿತಾಯ ಆಗಲಿದೆ.

ವಿಜಯಕುಮಾರ್ಚಂದರಗಿ

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.