ಮುಖ್ಯರಸ್ತೆ ಕಂಬ ತೆರವುಗೊಳಿಸದೆ ಕಾಮಗಾರಿ
ಗಂಗೊಳ್ಳಿ ಅಸಮರ್ಪಕ ಕಾಮಗಾರಿಗೆ ಅಸಮಾಧಾನ
Team Udayavani, May 3, 2022, 11:00 AM IST
ಗಂಗೊಳ್ಳಿ: ಇಲ್ಲಿನ ನೀರಿನ ಟ್ಯಾಂಕ್ ಬಳಿಯಿಂದ ಮುಖ್ಯರಸ್ತೆಯಲ್ಲಿ ನಡೆಯುತ್ತಿರುವ ಕಾಂಕ್ರೀಟ್ ಕಾಮಗಾರಿ ಬಗ್ಗೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗಮನಹರಿಸದ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕಾಂಕ್ರೀಟ್ ರಸ್ತೆ
ಪ್ರಾಕೃತಿಕ ವಿಕೋಪ ನಿಧಿಯೋಜನೆಯಡಿ 30 ಲಕ್ಷ ರೂ. ವೆಚ್ಚದಲ್ಲಿ ಮುಖ್ಯರಸ್ತೆ ಕಾಂಕ್ರೀಟ್ ಕಾಮಗಾರಿ ಆರಂಭವಾಗಿದೆ. ಕೆಲಸ ಆರಂಭಕ್ಕೂ ಮುನ್ನ ರಸ್ತೆ ಬದಿಯಲ್ಲಿರುವ ದೂರವಾಣಿ ಕಂಬ, ಲೋಕೋಪಯೋಗಿ ಇಲಾಖೆಯ ಸೂಚನಾ ಫಲಕ ಹಾಗೂ ಅತಿಕ್ರಮಣವನ್ನು ತೆರವುಗೊಳಿಸದೆ ಕಾಮಗಾರಿ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಮೇಲ್ಗಂಗೊಳ್ಳಿ ಸಮೀಪ ಮುಖ್ಯರಸ್ತೆಗೆ ತಾಗಿಕೊಂಡು ದೂರವಾಣಿ ಕಂಬ ರಸ್ತೆ ಕಾಂಕ್ರೀಟ್ ಕಾಮಗಾರಿಗೆ ತೊಡಕಾಗುತ್ತಿದೆ. ಈ ಕಂಬವನ್ನು ಸ್ಥಳಾಂತರಿಸುವಂತೆ ಸಂಬಂಧಪಟ್ಟ ಇಲಾಖೆಗೆ ಮನವಿ ಮಾಡಲಾಗಿದೆ.
ಅತಿಕ್ರಮಣ
ಮುಖ್ಯರಸ್ತೆ ಸಮೀಪ ನಿರ್ದಿಷ್ಟ ಜಾಗವನ್ನು ಬಿಡದೆ ಖಾಸಗಿಯವರು ಅತಿಕ್ರಮಿಸಿ ನಿರ್ಮಿಸಿರುವ ಆವರಣ ಗೋಡೆಗಳನ್ನು ತೆರವುಗೊಳಿಸದೆ ರಸ್ತೆ ಕಾಮಗಾರಿ ನಡೆಸಲಾಗಿತ್ತು. ಈ ಹಿಂದೆ ಬೇರೆ ಮುಖ್ಯ ರಸ್ತೆ ಕಾಂಕ್ರೀಟ್ ಕಾಮಗಾರಿ ಸಂದರ್ಭ ಸ್ಥಳೀಯಾಡಳಿತ ರಸ್ತೆಗೆ ಬೇಕಾಗುವಷ್ಟು ಜಾಗ ತೆರವು ಮಾಡಿಸಿತ್ತು. ಆದರೆ ಇಲ್ಲಿ ಮಾತ್ರ ಯಾವುದೇ ಕ್ರಮಕ್ಕೆ ಮುಂದಾಗದಿರುವುದಕ್ಕೆ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ದೂರು ನೀಡಲು ನಿರ್ಧರಿಸಿದ್ದಾರೆ.
ಒತ್ತಾಯ
ಅಂದಾಜುಪಟ್ಟಿಯಲ್ಲಿರುವಂತೆ 7 ಮೀಟರ್ ರಸ್ತೆ ಅಗಲಗೊಳ್ಳಬೇಕಿದ್ದು, ಈಗಿರುವ ರಸ್ತೆಯ ಅಗಲದಷ್ಟೇ ಕಾಂಕ್ರೀಟ್ ಕಾಮಗಾರಿ ನಡೆಸಲು ಗುತ್ತಿಗೆದಾರರು ಮುಂದಾಗಿದ್ದಾರೆ. ಕಂಬ ಹಾಗೂ ಸೂಚನ ಫಲಕ ಮತ್ತು ಅತಿಕ್ರಮಣವನ್ನು ತೆರವುಗೊಳಿಸಿ ಸುವ್ಯವಸ್ಥಿತ ರಸ್ತೆ ನಿರ್ಮಿಸಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮುಂದಾಗಬೇಕು. ಈಗಿರುವಷ್ಟೇ ಅಗಲದ ಕಾಂಕ್ರೀಟ್ ರಸ್ತೆ ನಿರ್ಮಿಸಿದರೆ ಯಾವುದೇ ಪ್ರಯೋಜನವಿಲ್ಲ. ಅಂದಾಜು ಪಟ್ಟಿಯಲ್ಲಿರುವಂತೆ 7 ಮೀಟರ್ ರಸ್ತೆ ವಿಸ್ತರಣೆ ಮಾಡಿಕೊಂಡು ಕಾಮಗಾರಿ ನಿರ್ವಹಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಇಲಾಖೆ ಕಂಬ ಮತ್ತು ಲೋಕೋಪಯೋಗಿ ಇಲಾಖೆಯ ಸೂಚನಾ ಫಲಕ, ಇದ್ದರೂ ಅದನ್ನು ಈವರೆಗೆ ತೆರವುಗೊಳಿಸಿಲ್ಲ. ಇದು ಕಾಮಗಾರಿಗೆ ತೊಡಕಾಗುತ್ತಿದ್ದು, ರಸ್ತೆಯ ಬದಿಯಲ್ಲಿರುವ ದೂರವಾಣಿ ಇಲಾಖೆಯ ಕಂಬಗಲು ಹಾಗೂ ಸೂಚನ ಫಲಕವನ್ನು ತೆರವುಗೊಳಿಸಿ ವ್ಯವಸ್ಥಿತವಾಗಿ ಕಾಂಕ್ರೀಟ್ ಕಾಮಗಾರಿ ನಡೆಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಸೂಚಿಸಲಾಗಿದೆ
ಕಾಂಕ್ರೀಟ್ ಕಾಮಗಾರಿ ನಡೆಸಲಾಗುತ್ತಿದೆ. 7 ಮೀಟರ್ ಅಗಲದ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಬೇಕಾಗುವ ಜಾಗವನ್ನು ತೆರವುಗೊಳಿಸಿಕೊಂಡು ಕಾಮಗಾರಿಯನ್ನು ವ್ಯವಸ್ಥಿತವಾಗಿ ನಡೆಸುವಂತೆ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ಗೆ ತಿಳಿಸಲಾಗಿದೆ. -ಶ್ರೀನಿವಾಸ ಖಾರ್ವಿ ಅಧ್ಯಕ್ಷರು, ಗಂಗೊಳ್ಳಿ ಗ್ರಾ.ಪಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್ ಅಡಿಕೆ ತೋಟಕ್ಕೆ ಹಾನಿ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್