ಬಸವ ಜಯಂತಿ; ಮುಷ್ಟಿ ಅಕ್ಕಿ ಅಭಿಯಾನಕ್ಕೆ ಚಾಲನೆ

ಎಪಿಎಂಸಿ ಆವರಣದಲ್ಲಿ ಬಸವೇಶ್ವರ ಪುತ್ಥಳಿ ಮೆರವಣಿಗೆ

Team Udayavani, May 3, 2022, 1:16 PM IST

12

ಹುಬ್ಬಳ್ಳಿ: ಬಸವ ಜಯಂತಿ ಉತ್ಸವ ಅಂಗವಾಗಿ ಅಶ್ವಾರೂಢ ಶ್ರೀ ಬಸವೇಶ್ವರ ಪುತ್ಥಳಿಯ ಭವ್ಯ ಮೆರವಣಿಗೆಯು ಸೋಮವಾರ ಅಮರಗೋಳದ ಶ್ರೀ ಜಗಜ್ಯೋತಿ ಬಸವೇಶ್ವರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (ಎಪಿಎಂಸಿ) ಒಂದನೇ ಗೇಟ್‌ನಿಂದ ಆಹಾರಧಾನ್ಯ ವರ್ತಕರ ಮಾರುಕಟ್ಟೆ ವರೆಗೆ ನಡೆಯಿತು.

ಎಪಿಎಂಸಿ ಬಸವ ಜಯಂತಿ ಉತ್ಸವ ಸಮಿತಿ, ಎಪಿಎಂಸಿಯ ಎಲ್ಲ ಸಂಘ-ಸಂಸ್ಥೆಗಳು ಹಾಗೂ ಬಸವ ಸೇವಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮೆರವಣಿಗೆಗೆ ಮೂರುಸಾವಿರ ಮಠದ ಜಗದ್ಗುರು ಡಾ| ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಚಾಲನೆ ನೀಡಿದರು.

ನಂತರ ನಡೆದ ಬಸವ ಜಯಂತಿ ಉತ್ಸವ ಕಾರ್ಯಕ್ರಮ ಹಾಗೂ ಮುಷ್ಟಿ ಅಕ್ಕಿ ಅಭಿಯಾನಕ್ಕೆ ವಿವಿಧ ಶ್ರೀಗಳು, ಗಣ್ಯರು ಚಾಲನೆ ನೀಡಿದರು.

ಮೂರು ಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮಿಗಳು ಮಾತನಾಡಿ, ಮೂರು ಸಾವಿರ ಮಠದ ಕರ್ತೃ ಗುರುಸಿದ್ಧ ಶ್ರೀಗಳನ್ನು ಹುಚ್ಚನೆಂದು ಕರೆಯುತ್ತಿದ್ದರು. ಅವರ ಹೆಸರಿನಲ್ಲೇ ಹುಚ್ಚನ ಪ್ಯಾಟಿ ಅನ್ನುತ್ತಿದ್ದರು. ಕಾಳು-ಕಡಿ ವ್ಯಾಪಾರಸ್ಥರೆಲ್ಲ ಆ ಪ್ಯಾಟಿಯ ವ್ಯಾಪಾರಿಗಳಾಗಿದ್ದರು. ಅವರೆಲ್ಲ ಪ್ರತಿದಿನ ವ್ಯಾಪಾರಕ್ಕೂ ಮೊದಲು ಮೂರುಸಾವಿರ ಮಠದ ಹುಚ್ಚನ ದಾಸೋಹಕ್ಕೆ ಎಂದು ಒಂದು ಮುಷ್ಟಿ ಇರಿಸುತ್ತಿದ್ದರು. ಅದನ್ನೆ ಮಠದಿಂದ ಹೋಗಿ ಸಂಗ್ರಹಿಸಿ ದಾಸೋಹ ಮಾಡಲಾಗುತ್ತಿತ್ತು. ಈ ಪರಂಪರೆ 300-400 ವರ್ಷಗಳ ಹಿಂದೆ ನಡೆದುಕೊಂಡದ್ದಾಗಿದೆ. ಈಗ ಎಪಿಎಂಸಿ ವ್ಯಾಪಾರಸ್ಥರು ಮುಷ್ಟಿ ಅಕ್ಕಿ ಅಭಿಯಾನ ಆರಂಭಿಸಿದ್ದು ಶ್ಲಾಘನೀಯ.ಪ್ರತಿದಿನ ಶ್ರೀಮಠದಲ್ಲಿ 800-1000 ಜನ ಪ್ರಸಾದ ಮಾಡುತ್ತಿದ್ದಾರೆ. ಅದು ಎಪಿಎಂಸಿ ಮಾರುಕಟ್ಟೆಯಿಂದಲೇ ನಿರಂತರವಾಗಿ ನಡೆಯಬೇಕೆಂಬುದು ನನ್ನ ಆಸೆ ಎಂದರು.

ಭೈರನಹಟ್ಟಿ ಶ್ರೀ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಸ್ವಾಮೀಜಿ ಮಾತನಾಡಿ, ಬಸವಣ್ಣ ಜನಿಸದಿದ್ದರೆ ನಾವಿಂದು ಮೌಡ್ಯತೆ, ಕಂದಾಚಾರ, ವರ್ಣಾಶ್ರಮದ ವ್ಯವಸ್ಥೆಯಲ್ಲೇ ಬದುಕಬೇಕಿತ್ತು. ಅವರು ಬಂದಿದ್ದರಿಂದಲೇ ಮನುಷ್ಯರು ಮನುಷ್ಯರಂತೆ ಕಾಣಲು ಸಾಧ್ಯವಾಯಿತು. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರಿಗೆ ಸ್ವಾತಂತ್ರ್ಯ ಕೊಟ್ಟರು. ವರ್ಗಭೇದ, ವರ್ಣಭೇದ, ಲಿಂಗ ಭೇದ ತೊಡೆದು ಹಾಕುವಲ್ಲಿ ಅವರ ಪಾತ್ರ ದೊಡ್ಡದು ಎಂದರು.

ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಬಸವಣ್ಣನವರು ಕಾಯಕದ ಜೊತೆ ದಾಸೋಹಕ್ಕೆ ಹೆಚ್ಚಿನ ಪ್ರಾಧಾನ್ಯತೆ ಕೊಟ್ಟಿದ್ದರು. ಗುಜರಾತಿನ ವ್ಯಾಪಾರಿಗಳು ತಮ್ಮ ಲಾಭದಲ್ಲಿ ಮತ್ತು ಮುಸ್ಲಿಮರು ಜಕಾತ್‌ನಲ್ಲಿ ಒಂದಿಷ್ಟು ಹಣ ಮೀಸಲಿಡುವಂತೆ ಈ ಭಾಗದ ವ್ಯಾಪಾರಿಗಳು ತಮ್ಮ ಲಾಭದ ಒಂದಿಷ್ಟು ಹಣವನ್ನು ಸಮಾಜಕ್ಕಾಗಿ ಮೀಸಲಿಡಬೇಕು ಎಂದು ಹೇಳಿದರು.

ಕೆಎಲ್‌ಇ ನಿರ್ದೇಶಕ ಶಂಕರಣ್ಣ ಮುನವಳ್ಳಿ, ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಮಾಜಿ ಸದಸ್ಯ ಮಲ್ಲಿಕಾರ್ಜುನ ಗುಂಡೂರ, ಗಂಗನಗೌಡ (ಮುತ್ತು) ಪಾಟೀಲ, ಅಜ³ಪ್ಪ ಬೆಂಡಿಗೇರಿ, ರಾಜು ಶೀಲವಂತರ, ಮಲ್ಲು ಬುರಟ್ಟಿ, ಶಿವಾನಂದ ಸಣ್ಣಕ್ಕಿ, ಬಸವರಾಜ ಯಕಲಾಸಪೂರ, ಅಜಯ ಕೆಸರಪ್ಪನವರ, ಎಪಿಎಂಸಿ-ನವನಗರ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ ಬಿ.ಎಂ. ಮಂಟೂರ ಮೊದಲಾದವರಿದ್ದರು.

ಎಪಿಎಂಸಿ ಅಧ್ಯಕ್ಷ ಬಸನಗೌಡ ಚನ್ನಗೌಡರ ಅಧ್ಯಕ್ಷತೆ ವಹಿಸಿದ್ದರು. ರಾಜು ಶೆಟ್ಟರ ಸ್ವಾಗತಿಸಿದರು. ಎಪಿಎಂಸಿ ಸದಸ್ಯ ಚನ್ನು ಹೊಸಮನಿ ಪ್ರಾಸ್ತಾವಿಕ ಮಾತನಾಡಿದರು. ಪ್ರಭುದೇವ ಹುಗ್ಗಿಶೆಟ್ಟರ, ಕೃಷ್ಣ ಬಡಿಗೇರ ಸಂಗಡಿಗರು ವಚನ ಸಂಗೀತ ಪ್ರಸ್ತುತ ಪಡಿಸಿದರು. ರಾಮು ಮೂಲಗಿ ನಿರೂಪಿಸಿದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.