ದೇಶದ ಅಭಿವೃದ್ಧಿಗೆ ಕಾರ್ಮಿಕರ ಕೊಡುಗೆ ಅಪಾರ
Team Udayavani, May 3, 2022, 3:41 PM IST
ಶಹಾಪುರ: ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಕಾರ್ಮಿಕರ ಪರಿಶ್ರಮ ಮಹತ್ವದ್ದಾಗಿದೆ. ಸಂಘಟನೆಗಳು, ಜನಪ್ರತಿನಿಧಿಗಳು, ಚಿಂತಕರು, ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಹೆಚ್ಚಿನ ಕಾಳಜಿ ವಹಿಸುವ ಮೂಲಕ ಕಾರ್ಮಿಕರ ಹಿತ ಕಾಯಬೇಕು ಎಂದು ಏಕದಂಡಿಗೆ ಮಠದ ಕಾಳಹಸ್ತೇಂದ್ರ ಸ್ವಾಮಿಗಳು ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತರಕ್ಷಣಾ ಸಂಘದಿಂದ ಆಯೋಜಿಸಿದ್ದ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಇ-ಶ್ರಮಕಾರ್ಡ್ ವಿತರಣೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
ಕಾಯಕ ತತ್ವವೇ ಮೂಲ ಆಶಯ ವಿಟ್ಟುಕೊಂಡು ದುಡಿಯುತ್ತಿರುವ ಕಾರ್ಮಿಕರಿಗೆ ಶೋಷಣೆಯಾಗದಂತೆ ನೋಡಿಕೊಳ್ಳಬೇಕು. ಶೋಷಣೆ ರಹಿತ ಸಮಾಜ ನಿರ್ಮಾಣಕ್ಕೆ ಸಂಘಟನೆ, ಸಂಘ, ಸಂಸ್ಥೆಗಳ ಪಣ ತೊಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸ್ವಾಮ್ಯದಲ್ಲಿ ದುಡಿಯುವ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳು ಅಸಂಘಟಿತ ಕಾರ್ಮಿಕರಿಗೆ ಸಿಗಬೇಕು. ಕಾರ್ಮಿಕರ ಬಗ್ಗೆ ಕೇವಲ ಅನುಕಂಪ ಬೇಡ, ಅವಕಾಶ ಕಲ್ಪಿಸುವ ಕೆಲಸವಾಗಬೇಕು ಎಂದರು.
ಗ್ರಾಮಾಂತರ ಸಿಪಿಐ ಚೆನ್ನಯ್ಯ ಹಿರೇಮಠ ಮಾತನಾಡಿ, ರಾಜ್ಯ ಸರ್ಕಾರ ಕಲ್ಪಿಸಿದ ಸೌಲಭ್ಯಗಳನ್ನು ಕಾರ್ಮಿಕರು ಸಮರ್ಪಕವಾಗಿ ಪಡೆಯುವ ಮೂಲಕ ಆರ್ಥಿಕವಾಗಿ ಸುಸ್ಥಿತಿಗೆ ಬರಬೇಕು. ಕಾರ್ಮಿಕ ಸಂಘಟನೆಗಳು ಕಾರ್ಮಿಕರಿಗೆ ಸೌಲಭ್ಯ ಒದಗಿಸಿಕೊಡುವಲ್ಲಿ ಹೆಚ್ಚು ಪರಿಶ್ರಮವಹಿಸಬೇಕು. ಅಲ್ಲದೇ ಕಾರ್ಮಿಕ ಕುಟುಂಬದವರಿಗೆ ಉತ್ತಮ ಶಿಕ್ಷಣ, ಆರೋಗ್ಯ ಮತ್ತು ಬದುಕಿಗೆ ಭದ್ರತೆಯಂತಹ ಸೌಲಭ್ಯ ದೊರಕಬೇಕು ಎಂದರು.
ಗುರುಪಾದ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ಮೌನೇಶ್ವರ ಸ್ವಾಮೀಜಿ ಸೇರಿದಂತೆ ದೇಶಮುಖ ಕಾಲೇಜಿನ ಮುಖ್ಯಸ್ಥ ಶಿವರಾಜ ದೇಶಮುಖ, ರಾಯಪ್ಪಗೌಡ ದರ್ಶನಾಪುರ, ಗುರುನಾಥರಡ್ಡಿಗೌಡ ಸಿಂಗನಹಳ್ಳಿ, ಸಂಗಮೇಶ ಮುಡಬೂಳ, ಸಾಯಬಣ್ಣ ಪುರೆಲ ಉಪಸ್ಥಿತರಿದ್ದರು. ಸಮಿತಿ ಸಂಸ್ಥಾಪಕ ಅಧ್ಯಕ್ಷ ಮೌನೇಶ ಸುರಪುರಕರ್ ಅಧ್ಯಕ್ಷತೆ ವಹಿಸಿದ್ದರು. ಇ-ಶ್ರಮ ಹಾಗೂ ಕಿಟ್ ವಿತರಣೆ ಮತ್ತು ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ
MUST WATCH
ಹೊಸ ಸೇರ್ಪಡೆ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್