ಪಾಳಾ ಆಪೂಸ್‌ಗೆ ವಿದೇಶಗಳಲ್ಲಿ ಭಾರೀ ಬೇಡಿಕೆ

­594 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದ ಮಾವು ಬೆಳೆ

Team Udayavani, May 4, 2022, 12:21 PM IST

7

ಮುಂಡಗೋಡ: ತಾಲೂಕಿನಲ್ಲಿ ಈ ಬಾರಿ ಮಾವಿನ ಗಿಡಗಳು ಹೂವು ಚೆನ್ನಾಗಿ ಬಿಟ್ಟು ಹೆಚ್ಚಿನ ಇಳುವರಿ ನಿರೀಕ್ಷೆಯಲ್ಲಿದ್ದ ರೈತರು ಮತ್ತು ಮಾವಿನ ಹಣ್ಣಿನ ವ್ಯಾಪಾರಸ್ಥರ ಮುಖದಲ್ಲಿ ನಿರಾಸೆ ಮೂಡಿಸಿದೆ.

ತಾಲೂಕಿನಲ್ಲಿ ಈ ಬಾರಿ ಮಾವಿನ ಗಿಡಗಳು ಹೂವು ಚೆನ್ನಾಗಿ ಬಿಟ್ಟು ಮಾವು ಇಳುವರಿ ಹೆಚ್ಚಾಗುವ ಲಕ್ಷಣಗಳು ಗೋಚರಸಿ ರೈತರಲ್ಲಿ ಆಶಾದಾಯಕ ಭಾವನೆ ಮೂಡಿಸಿತ್ತು. ಆದರೆ ಶೇ.25-30 ರಷ್ಟು ಇಳುವರಿ ಬಂದಿದ್ದು ರೈತರಲ್ಲಿ ನಿರಾಸೆ ಮೂಡಿಸಿದೆ.

ಪ್ರಸಕ್ತ ಸಾಲಿನಲ್ಲಿ ತಾಲೂಕಿನಲ್ಲಿ ಒಟ್ಟು 594 ಹೆಕ್ಟೇರ್‌ ಪ್ರದೇಶದಲ್ಲಿ ರೈತರು ಮಾವು ಬೆಳೆದಿದ್ದರು. ಅದರಲ್ಲಿಯೂ ತಾಲೂಕಿನ ಪಾಳಾ ಗ್ರಾಮದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ರೈತರು ಮಾವು ಬೆಳೆಯುತ್ತಾರೆ. ಪ್ರಸ್ತುತ ವರ್ಷದಲ್ಲಿ ಒಂದೂವರೆ ತಿಂಗಳು ತಡವಾಗಿ ಚೆನ್ನಾಗಿ ಹೂ ಬಿಟ್ಟಿತ್ತು. ಮಾವಿನ ಹೂವು ಚೆನ್ನಾಗಿ ಇದ್ದರು ಕಾಯಿ ಕಟ್ಟಲಿಲ್ಲ.

ಮಾವಿನ ತಳಿಗಳು: ತಾಲೂಕಿನಲ್ಲಿ ಶೇ.90 ರಷ್ಟು ರೈತರು ಆಪೂಸ್‌ ಬೆಳೆಯುತ್ತಾರೆ. ಪಾಳಾ ಮಣ್ಣಿನ ಗುಣ ಮತ್ತು ಹವಮಾನದ ಪೂರಕ ವಾತಾವರಣದಿಂದ ಇಲ್ಲಿನ ರೈತರು ಆಪೂಸ್‌, ರಸಪುರಿ, ತೋತಾಪುರಿ ತಳಿಗಳನ್ನು ಹೆಚ್ಚಾಗಿ ಬೆಳೆಯುತ್ತಾರೆ. ಇನ್ನುಳಿದಂತೆ ನೀಲಂ, ಸಿಂಧೂರಾ, ಬಿನಶಾ, ಮಲಗೋವಾ, ಮಾಂಕುರ, ಮಲ್ಲಿಕಾ, ಕೇಸರ ತಳಿಯ ಮಾವು ಬೆಳೆಯುತ್ತಾರೆ. ಕಳೆದ ಎರಡು ವರ್ಷದ ಹಿಂದೆ ಕೊರೊನಾ ಲಾಕ್‌ಡೌನ್‌ನಿಂದ ಆದ ನಷ್ಟದಲ್ಲಿದ್ದ ರೈತ ಈ ಬಾರಿ ಚೆನ್ನಾಗಿ ಹೂವು ಬಿಟ್ಟು ಉತ್ತಮ ಫಸಲು ಇದ್ದು ಯೋಗ್ಯ ಬೆಲೆಯ ನಿರೀಕ್ಷೆಯಲ್ಲಿದ್ದ. ನಿರೀಕ್ಷೆ ಮಟ್ಟಕ್ಕೆ ಮಾವು ಬಾರದೆ ಕಂಗಾಲ ಆಗುವಂತೆ ಮಾಡಿದೆ.

ಮಾವು ರಫ್ತು: ವಿಶೇಷವಾಗಿ ಪಾಳಾ ಭಾಗದಿಂದ ರಫ್ತಾಗುವ ಮಾವಿಗೆ ಮಹಾರಾಷ್ಟ್ರ ಮಾರುಕಟ್ಟೆಯಲ್ಲಿ ಒಳ್ಳೆಯ ಬೇಡಿಕೆ ಇದೆ. ಇದಲ್ಲದೆ ಹೊರದೇಶಗಳಾದ ಯುರೋಪ್‌ ಮತ್ತು ಗಲ್ಫ್ ದೇಶಗಳಿಗೂ ಇಲ್ಲಿನ ಮಾವು ರಫ್ತಾಗುತ್ತದೆ. ಪಾಳಾ ಗ್ರಾಮದ ಮಾವಿನ ಹಣ್ಣುಗಳಿಗೆ ಇಡೀ ಏಷ್ಯಾದಲ್ಲಿಯೇ ಹೆಚ್ಚಿನ ಬೇಡಿಕೆ ಇದೆ.

ನಮ್ಮ ಅಜ್ಜನ ಕಾಲದಿಂದಲೂ ಮಾವು ಮಾರಾಟ ಮಾಡುತ್ತಿದ್ದೇವೆ. ಕಳೆದ ಬಾರಿ ಉತ್ತಮ ಫಸಲು ಮತ್ತು ಯೋಗ್ಯ ಬೆಲೆ ಇತ್ತು. ನಂತರ ದಿನದಲ್ಲಿ ಕರೊನಾದಿಂದ ಲಾಕ್‌ಡೌನ್‌ ಆಗಿ ನಷ್ಟ ಅನುಭವಿಸುವಂತಾಗಿತ್ತು. ಈ ಬಾರಿ ಇಳುವರಿ ಬಹಳ ಕಡಿಮೆ ಇದೆ. ಫಸ್ಟ್‌ ಕ್ವಾಲಿಟಿ ಆಪೂಸ್‌ ಕೆಜಿ 100 ರಿಂದ 150 ಕೇಳುತ್ತಿದ್ದಾರೆ. ದಿನ ಕಳೆದಂತೆ ಮಾವಿನ ಬೆಲೆ ಕಡಿಮೆಯಾಗುತ್ತದೆ.  ಮೆಹಬೂಬಲಿ ಪಾಟೀಲ, ಮಾವಿನ ಹಣ್ಣಿನ ವ್ಯಾಪಾರಸ್ಥ

ಈ ಬಾರಿ ಮಾವಿನ ಗಿಡಗಳು ಒಂದೂವರೆ ತಿಂಗಳು ತಡವಾಗಿ ಚೆನ್ನಾಗಿ ಹೂವು ಬಿಟ್ಟು ಅನುಕೂಲಕರ ವಾತಾವರಣವಿತ್ತು. ಆದರೆ ಹೂ ಬಿಡುವ ಸಂದರ್ಭದಲ್ಲಿ ಎಲೆಗಳ ಚಿಗುರು ಜಾಸ್ತಿಯಾಗಿ ಸಸ್ಯದ ಬೆಳೆವಣಿಗೆ ಆಯ್ತು ಹೊರತು ಕಾಯಿ ಕಟ್ಟಲಿಲ್ಲ. ನಿರೀಕ್ಷೆ ಮಟ್ಟಕ್ಕೆ ಇಳುವರಿ ಬರಲಿಲ್ಲ.  –ಅಣ್ಣಪ್ಪ ನಾಯ್ಕ, ಹಿರಿಯ ತೋಟಗಾರಿಕಾ ಸಹಾಯಕ ನಿರ್ದೇಶಕ ­

ಮುನೇಶ ತಳವಾರ

ಟಾಪ್ ನ್ಯೂಸ್

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.