ಸಚಿವರ ಗೈರು-ಸ್ಥಳೀಯರ ಆಕ್ರೋಶ: ಮುಖ್ಯಮಂತ್ರಿ ಕ್ಷಮೆಯಾಚನೆಗೆ ಆಗ್ರಹ
Team Udayavani, May 4, 2022, 1:28 PM IST
ವಿಜಯಪುರ: ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ಬಸವ ಜನ್ಮಭೂಮಿ ಬಸವನಬಾಗೇವಾಡಿ ಪಟ್ಟಣದಲ್ಲಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ಬಸವ ಜಯಂತಿ ಕಾರ್ಯಕ್ರಮಕ್ಕೆ ಸಚಿವರೇ ಗೈರಾಗುವ ಮೂಲಕ ಕಾಟಾಚಾರದ ಕಾರ್ಯಕ್ರಮ ಎಂಬಂತೆ ಆಚರಿಸಿದೆ. ಈ ಬಗ್ಗೆ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದು ಮುಖ್ಯಮಂತ್ರಿ ಕ್ಷಮೆ ಕೋರುವಂತೆ ಆಗ್ರಹ ಕೇಳಿ ಬಂದಿದೆ.
ಬಸವನಬಾಗೇವಾಡಿಯ ಮೂಲ ನಂದೀಶ್ವರ ದೇವಸ್ಥಾನದ ಪರಿಸರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿಜಯಪುರ ಜಿಲ್ಲಾಡಳಿತ, ಜಿಪಂ, ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಜಂಟಿಯಾಗಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಗಮಿಸಬೇಕಿದ್ದ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲಕುಮಾರ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಸೇರಿದಂತೆ ಬಹುತೇಕ ಆಹ್ವಾನಿತ ಜನಪ್ರತಿನಿಧಿಗಳು ಗೈರಾಗಿದ್ದರು.
ಬಸವನಬಾಗೇವಾಡಿ ಶಾಸಕರಾದ ಮಾಜಿ ಸಚಿವ ಶಿವಾನಂದ ಪಾಟೀಲ, ಮೇಲ್ಮನೆ ಕಾಂಗ್ರೆಸ್ ಮುಖ್ಯ ಸಚೇತಕ ಪ್ರಕಾಶ ರಾಠೊಡ, ಕೂಡಲಸಂಗಮ ಅಭಿವೃದ್ಧಿ ಪ್ರಾ ಧಿಕಾರದ ವಿಶೇಷಾಧಿಕಾರಿ ಶಿವಯೋಗಿ ಕಳಸದ, ಜಿಲ್ಲಾಧಿಕಾರಿ ವಿ.ಎಂ.ದಾನಮ್ಮನವರ, ಸಿಇಒ ರಾಹುಲ್ ಶಿಂಧೆ ಸೇರಿದಂತೆ ಕೆಲವೇ ಕೆಲವರು ಮಾತ್ರ ವೇದಿಕೆಯಲ್ಲಿದ್ದರು.
ಸರ್ಕಾರ ರಾಜ್ಯಮಟ್ಟದ ಬಸವ ಜಯಂತಿ ಕಾರ್ಯಕ್ರಮವನ್ನು ಬಸವನಬಾಗೇವಾಡಿ ಪಟ್ಟಣದಲ್ಲಿ ಆಚರಿಸುವ ಕುರಿತು ಆದೇಶ ಹೊರಡಿಸಿದ್ದು ಆದೇಶಕ್ಕೆ ಸೀಮಿತವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ರಾಜ್ಯಮಟ್ಟದ ರಾಜ್ಯ ಸರ್ಕಾರದ ಬಸವ ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಜಿಲ್ಲೆಯ ಸಚಿವರು ಗೈರಾಗಿರುವುದು ಬೇಸರ ತರಿಸಿದೆ ಎಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಕಾಶ ರಾಠೊಡ ಆಕ್ಷೇಪಿಸಿದರು.
ವಿಧಾನಸೌಧದ ಬ್ಯಾಕ್ವೆಂಟ್ ಹಾಲ್ನಲ್ಲೂ ಬಸವ ಜಯಂತಿ ಅಚರಿಸುವ ಮೂಲಕ ವಿಶ್ವದ ಮೊದಲ ಸಂಸತ್ ಸ್ಥಾಪನೆ ರೂವಾರಿ ಬಸವೇಶ್ವರರಿಗೆ ಗೌರವ ಸಲ್ಲಿಸಬೇಕು ಎಂದು ಒತ್ತಾಯಿಸಿದರು.
ಬಸನ ಜನ್ಮಭೂಮಿಯಲ್ಲಿ ಬಸವ ಜಯಂತಿ ಆಚರಣೆಯನ್ನು ಸರ್ಕಾರದ ವತಿಯಿಂದ ಆಚರಿಸಬೇಕೆಂಬ ಬೇಡಿಕೆಗೆ ಸ್ಪಂ ದಿಸಿದ್ದ ಸರ್ಕಾರ, ಆಚರಣೆ ವಿಷಯದಲ್ಲಿ ನಿರ್ಲಕ್ಷ್ಯ ಮಾಡಿದೆ. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಜನರ ಕ್ಷಮೆ ಯಾಚಿಸಬೇಕು ಎಂದು ಪ್ರಕಾಶ ರಾಠೊಡ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…