“ಸಮಾಜದಿಂದ ಪಡೆದುದನ್ನು ಹಿಂದಿರುಗಿಸಿ’
Team Udayavani, May 4, 2022, 5:40 PM IST
ಬೆಳ್ತಂಗಡಿ: ಜೀವನದಲ್ಲಿ ಬರುವ ಸಮಸ್ಯೆಗಳು ವ್ಯಕ್ತಿಯನ್ನು ಸಕ್ರಿಯವಾಗಿರಿಸುತ್ತವೆ. ಸಮಾಜದಿಂದ ಮತ್ತು ಸಂಸ್ಥೆಯಿಂದ ಏನನ್ನು ಪಡೆದಿರುವಿರೊ ಅದನ್ನು ಹಿಂದಿರುಗಿಸುವ ಕಾರ್ಯವನ್ನು ಇಲ್ಲಿಂದ ತೆರಳಿದ ಕೂಡಲೇ ಆರಂಭಿಸಬೇಕು ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಕಿವಿಮಾತು ನೀಡಿದರು.
ಅವರು ರುಡ್ಸೆಟ್ ಸಂಸ್ಥೆ ಉಜಿರೆಯಲ್ಲಿ ನಡೆದ ಮೊಬೈಲ್ ರಿಪೇರಿ ಮತ್ತು ಎಲೆಕ್ಟ್ರಿಕ್ ಮೋಟಾರ್ ರಿವೈಂಡಿಂಗ್ ತರಬೇತಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.
ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ ಕಲ್ಲಾಪು ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಿರ್ದೇಶಕರಾದ ಎಂ. ಸುರೇಶ್ ಸ್ವಾಗತಿಸಿ ತರಬೇತಿಯ ಹಿನ್ನೋಟವನ್ನು ನೀಡಿದರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರ್ವಹಿಸಿದರು. ಹಿರಿಯ ಉಪನ್ಯಾಸಕಿ ಅನಸೂಯಾ ವಂದಿಸಿದರು.