ಪತಿ, ಪತ್ನಿ ನಡುವೆ ಜಗಳ; ನೊಂದ ಪತ್ನಿ ನೇಣಿಗೆ ಶರಣು
Team Udayavani, May 4, 2022, 5:58 PM IST
ಕಾರ್ಕಳ: ದಂಪತಿಯ ಜಗಳ ಪತ್ನಿ ಆತ್ಮಹತ್ಯೆಗೆ ಶರಣಾಗುವ ಮೂಲಕ ಅಂತ್ಯಗೊಂಡ ಘಟನೆ ಮೇ 3 ರಂದು ಕುಕ್ಕುಂದೂರು ಗ್ರಾಮದ ಜೋಡುರಸ್ತೆಯಲ್ಲಿ ಸಂಭವಿಸಿದೆ.
ಮೃತರನ್ನು ಶೋಭಾ (28) ಎಂದು ಗುರುತಿಸಲಾಗಿದೆ. ಶೋಭಾ ಅವರಿಗೆ ಶಿವಮೊಗ್ಗದ ಲೋಕೇಶ ಅವರ ಜತೆ ವಿವಾಹವಾಗಿತ್ತು. ಅವರು ಜೋಡುರಸ್ತೆ ಬಳಿ ಮನೆ ಮಾಡಿ ವಾಸವಿದ್ದರು. ಮೇ 3ರಂದು ದಂಪತಿ ನಡುವೆ ಜಗಳವಾಗಿದ್ದು, ಅದರಿಂದ ನೊಂದು ಶೋಭಾ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾರೆ.
ವಿಚಾರ ತಿಳಿದ ಪತಿ ಲೋಕೇಶ ಶೋಭಾ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವಿಚಾರವನ್ನು ಪಕ್ಕದ ಮನೆಯವರು ಮೃತರ ಸಹೋದರ ಮಂಜುನಾಥರಿಗೆ ತಿಳಿಸಿದ್ದು, ಅದರಂತೆ ಅವರು ಆಸ್ಪತ್ರೆಗೆ ತೆರಳಿದ ವೇಳೆ ಶೋಭಾ ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಪತ್ನಿ ಜತೆ ಕುಡಿದು ಜಗಳವಾಡಿದ್ದನ್ನು ಲೋಕೇಶ ಒಪ್ಪಿಕೊಂಡಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು