ಕೊಟ್ಟಿಗೆಯಂತಾಗಿದೆ ಗ್ರಂಥಾಲಯ
Team Udayavani, May 6, 2022, 11:59 AM IST
ಶಹಾಬಾದ: ತಾಲೂಕಿನ ಭಂಕೂರ ಗ್ರಾಮ ಪಂಚಾಯಿತಿ ಗ್ರಂಥಾಲಯಕ್ಕೆ ಗ್ರಾಪಂ ಸದಸ್ಯ ಲಕ್ಷ್ಮೀಕಾಂತ ಕಂದಗೂಳ ಭೇಟಿ ನೀಡಿದಾಗ ಅಲ್ಲಿನ ಅವ್ಯವಸ್ಥೆ ಕಂಡು ಸಿಡಿಮಿಡಿಗೊಂಡರು.
ಗ್ರಂಥಾಲಯದ ಟೇಬಲ್ ಮೇಲೆ, ಜ್ಞಾನಪೀಠ ಪ್ರಶಸ್ತಿ ವಿಜೇತರ ಭಾವಚಿತ್ರದ ಎದುರೇ ಸೆಗಣಿ ಹರಡಲಾಗಿತ್ತು. ಈ ಅವ್ಯವಸ್ಥೆ ಕಂಡು ಅಲ್ಲಿನ ಸಿಬ್ಬಂದಿ ವಿರುದ್ಧ ಕಂದಗೂಳ ಆಕ್ರೋಶ ವ್ಯಕ್ತಪಡಿಸಿದರು.
ಗ್ರಂಥಾಲಯ ಸಿಬ್ಬಂದಿ ಪಾರ್ವತಿ ಮಠಪತಿ ಸರಿಯಾದ ಸಮಯಕ್ಕೆ ಬರುತ್ತಿಲ್ಲ ಎನ್ನುವ ಕಾರಣಕ್ಕೆ ಬಯೋಮೆಟ್ರಿಕ್ ಯಂತ್ರ ಕೂಡಿಸಲಾಗಿತ್ತು. ಅದನ್ನು ಕೂಡಾ ಹಾಳು ಮಾಡಿದ್ದರಿಂದ ಈಗ ಮತ್ತೊಂದು ಯಂತ್ರ ಕೂಡಿಸಲಾಗಿದೆ. ಆದರೂ ಸರಿಯಾದ ಸಮಯಕ್ಕೆ ಅವರು ಬಾಗಿಲು ತೆರೆಯುತ್ತಿಲ್ಲ. ಆದ್ದರಿಂದ ಗ್ರಂಥಾಲಯ ಸ್ವಚ್ಛತೆ ಹಾಗೂ ಸಿಬ್ಬಂದಿ ನಿರ್ಲಕ್ಷ್ಯದ ವಿರುದ್ಧ ತಾಪಂ ಇಒ ಬಸಲಿಂಗಪ್ಪ ಡಿಗ್ಗಿ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಕುರಿತು ಮೇಲಧಿಕಾರಿಗಳಿಗೆ ದೂರು ನೀಡಲಾಗುವುದು ಎಂದು ಕಂದಗೂಳ ತಿಳಿಸಿದರು.
ಗ್ರಂಥಾಲಯದಲ್ಲಿನ ಸ್ವತ್ಛತೆ ಕುರಿತು ಮಾಹಿತಿ ಬಂದಿದ್ದು, ಅಲ್ಲಿನ ಸಿಬ್ಬಂದಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗುವುದು. ಸೂಕ್ತ ಕ್ರಮ ಕೈಗೊಳ್ಳಲಾಗುವುದು. –ಬಸಲಿಂಗಪ್ಪ ಡಿಗ್ಗಿ, ಇಒ, ತಾಪಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ