ಕಾರ್ಮಿಕರು ಸಂಘಟಿತರಾಗಲಿ


Team Udayavani, May 6, 2022, 1:12 PM IST

14workers

ಆಳಂದ: ಸಂಘಟಿತ ಹೋರಾಟದ ಮೂಲಕ ಕಾರ್ಮಿಕರು ತಮ್ಮ ಹಕ್ಕು ಮತ್ತು ಸೌಲಭ್ಯ ಪಡೆಯಲು ಮುಂದಾಗಬೇಕು ಎಂದು ಜಿಲ್ಲಾ ಬಂಡಾಯ ಸಾಹಿತಿ ಡಾ| ಪ್ರಭು ಖಾನಾಪುರೆ ಹೇಳಿದರು.

ಪಟ್ಟಣದ ಭೀಮನಗರದಲ್ಲಿ ಸ್ಥಳೀಯ ಕಾರ್ಮಿಕ ಕಲ್ಯಾಣ ಸಮಿತಿ ವಿಶ್ವ ಕಾರ್ಮಿಕ ದಿನಾಚರಣೆ ಅಂಗವಾಗಿ ಪೌರಕಾರ್ಮಿಕರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ದೇಶದ ಕಾರ್ಮಿಕರ ಮೇಲೆ ಬಂಡವಾಳ ಶಾಹಿಗಳ ದಬ್ಟಾಳಿಕೆ, ಶೋಷಣೆ ವಿರುದ್ಧ ಡಾ| ಬಿ.ಆರ್‌. ಅಂಬೇಡ್ಕರ್‌ ಅನೇಕ ಹೋರಾಟಗಳನ್ನು ಮಾಡಿ ಕಾರ್ಮಿಕರಿಗೆ ಅನುಕೂಲವಾಗುವ ಕಾನೂನುಗಳನ್ನು ರಚಿಸಿದ್ದಾರೆ. 12 ಗಂಟೆ ಕೆಲಸದ ಬದಲು ಎಂಟು ಗಂಟೆ ಕೆಲಸ ಮಾಡಬೇಕು. ರಜೆ, ಆಸ್ಪತ್ರೆ, ಮಹಿಳೆಯರಿಗೆ ಹೆರಿಗೆ ರಜೆ ಸೌಲಭ್ಯಗಳನ್ನು ನೀಡುವ ಕುರಿತು ಸಂವಿಧಾನದಲ್ಲಿ ಹಕ್ಕು ನೀಡಿದ್ದಾರೆ ಎಂದು ಹೇಳಿದರು.

ಕಾರ್ಮಿಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಕಾನೂನಿನ ಮೂಲಕ ಸೌಲಭ್ಯಗಳ ಲಾಭ ಪಡೆದುಕೊಳ್ಳಲು ಸಂಘಟನೆ, ಶಿಕ್ಷಣ ಮತ್ತು ಹೋರಾಟಕ್ಕೆ ಮುಂದಾಗಬೇಕು ಎಂದರು.

ಸಾನ್ನಿಧ್ಯ ವಹಿಸಿದ್ದ ಸಂಸ್ಥಾನ ಹಿರೇಮಠದ ಶ್ರೀ ಸಿದ್ಧೇಶ್ವರ ಶಿವಾಚಾರ್ಯರು ಮಾತನಾಡಿ, ಸಮಾಜದಲ್ಲಿ ಪೌರಕಾರ್ಮಿಕರ ಸೇವೆ ಶ್ರೇಷ್ಠವಾಗಿದೆ. ಇವರನ್ನು ಪ್ರೀತಿ, ಗೌರವದಿಂದ ಕಾಣಬೇಕು ಎಂದು ಹೇಳಿದರು.

ಬೆಳಮಗಿ ಬುದ್ಧ ವಿಹಾರದ ಬಂತೇ ಅಮರಜೋತಿ ಮಾತನಾಡಿ, ಕಾರ್ಮಿಕ ದಿನಾಚರಣೆ ಅಂಗವಾಗಿ ಕಾರ್ಮಿಕ ಕಲ್ಯಾಣ ಸಮಿತಿ ಅಧ್ಯಕ್ಷ ಮಲ್ಲಿನಾಥ ಯಲಶೆಟ್ಟಿ ಅವರನ್ನು ಸನ್ಮಾನಿಸುವ ಶ್ಲಾಘನೀಯ ಕಾರ್ಯಮಾಡಿದ್ದಾರೆ ಎಂದರು.

ಮಕ್ಕಳ ವೈದ್ಯ ಡಾ| ನಿಖೀಲ ಶಾಹ, ಅಂಗನವಾಡಿ ಮೇಲ್ವಿಚಾರಕಿ ಭಾಗಿರಥಿ ಎಂ. ಯಲ್ಲಶೆಟ್ಟಿ, ಪ್ರಾಂತ ರೈತ ಸಂಘದ ಪಾಂಡುರಂಗ ಮಾವೀನಕರ್‌, ಜಿಲ್ಲಾ ದಲಿತ ಸಮನ್ವಯ ಸಮಿತಿ ಸುಧಾಮ ಧನ್ನಿ, ಭೀಮನಗರದ ಶಾಮರಾವ್‌ ಸಾಲೇಗಾಂವ, ಪುರಸಭೆ ಸದಸ್ಯ ಲಕ್ಷ್ಮಣ ಝಳಕಿ, ಮುತ್ತಣ್ಣಾ ಸಾಲೇಗಾಂವ, ಅಪ್ಪಾಸಾಬ್‌ ತೀಥೆì, ಜಯಭೀಮ ದೊಡ್ಡಿ, ಸೂರ್ಯಕಾಂತ ಸಾಲೇಗಾಂವ, ಮಲ್ಲಿಕಾರ್ಜುನ ಮಂಟಗಿಕರ್‌, ಆನಂದರಾವ್‌ ಯಲಶೆಟ್ಟಿ, ಲಕ್ಷ್ಮಣ ಮುದಗಲೆ, ದಯಾನಂದ ಸಾಲೇಗಾಂವ, ಅನಿಲ ಯಲಶೆಟ್ಟಿ, ಸತೀಶ ಮೊದಲೆ, ಪ್ರಥ್ವಿರಾಜ ಮೊದಲೆ, ಲಕ್ಷ್ಮೀಕಾಂತ ತೋಳೆ, ಮಡಿವಾಳಪ್ಪ ಯಲಶೆಟ್ಟಿ ಮತ್ತಿತರರು ಇದ್ದರು.

ಸಮಿತಿ ಅಧ್ಯಕ್ಷ ಮಲ್ಲಿನಾಥ ಯಲಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಣ್ಣಾರಾವ್‌ ಪಾಟೀಲ ಸ್ವಾಗತಿಸಿದರು, ಮಡಿವಾಳಯ್ಯ ಮಠಪತಿ ನಿರೂಪಿಸಿದರು, ವಿಕ್ರಮ ಅಷ್ಟಗಿ ವಂದಿಸಿದರು. ಕಾರ್ಮಿಕ ಗೀತೆ ಕಲಾವಿದ ಕಾಶಿನಾಥ ಬಿರಾದಾರ, ಕಲ್ಯಾಣಿ ತುಕಾಣಿ ಹಾಡಿದರು

ಟಾಪ್ ನ್ಯೂಸ್

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.