ಕೆಮ್ಮಣ್ಣುಗುಂಡಿ ಅಭಿವೃದ್ಧಿಗೆ ಶ್ರಮಿಸಿ
ಅಧಿಕಾರಿಗಳಿಗೆ ಶಾಸಕ ರಘುನಾಥ್ ರಾವ್ ಮಲ್ಕಾಪೂರೆ ಸೂಚನೆ
Team Udayavani, May 6, 2022, 3:46 PM IST
ಚಿಕ್ಕಮಗಳೂರು: ಕೆಮ್ಮಣ್ಣುಗುಂಡಿ ಆಕರ್ಷಕ ಪ್ರವಾಸಿ ತಾಣವಾಗಿದ್ದು, ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವಂತೆ ಕರ್ನಾಟಕ ವಿಧಾನ ಪರಿಷತ್ ಅರ್ಜಿಗಳ ಸಮಿತಿ ಅಧ್ಯಕ್ಷ ಹಾಗೂ ಶಾಸಕ ರಘುನಾಥ್ ರಾವ್ ಮಲ್ಕಾಪೂರೆ ಅವರು ತಿಳಿಸಿದರು.
ತರೀಕೆರೆ ತಾಲೂಕು ಕೆಮ್ಮಣ್ಣಗುಂಡಿಯಲ್ಲಿ ವಿಧಾನ ಪರಿಷತ್ ಅರ್ಜಿಗಳ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾಡಳಿತ, ಪ್ರವಾಸೋದ್ಯಮ, ತೋಟಗಾರಿಕೆ, ಅರಣ್ಯ ಇಲಾಖೆ ಸೇರಿದಂತೆ ಅಂಗ ಸಂಸ್ಥೆಗಳು ಸಮನ್ವಯತೆಯಿಂದ ಕೆಮ್ಮಣ್ಣುಗುಂಡಿ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕೆಂದು ಸೂಚಿಸಿದರು.
ಕೆಮ್ಮಣ್ಣುಗುಂಡಿ ಚಾರಣ ಮತ್ತು ಸಾಹಸ ಕ್ರೀಡೆಗಳಿಗೆ ಯೋಗ್ಯವಾಗಿದ್ದು, ಯೋಜನಾ ವರದಿ ಸಿದ್ಧಗೊಳಿಸಿ ಪ್ರವಾಸಿಗರಿಗೆ ಉತ್ತಮ ಸೌಲಭ್ಯಗಳನ್ನು ನೀಡಲು ಮತ್ತು ಆದಾಯ ಹೆಚ್ಚಳಕ್ಕೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾಡಳಿತ ಸೇರಿದಂತೆ ಇತರೆ ಇಲಾಖೆಗಳು ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ ಪ್ರವಾಸಿ ತಾಣದ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ರಾಫ್ಟಿಂಗ್ ಸಾಹಸಿ ಕ್ರೀಡೆಗೆ ಜೀವ ರಕ್ಷಣೆಗೆ ಅಗತ್ಯವಾದ ನಿಯಮ ಮತ್ತು ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಈ ಹಿನ್ನಲೆಯಲ್ಲಿ ತಾಂತ್ರಿಕ ಸಲಹೆಗಾರರ ಜೊತೆ ಚರ್ಚಿಸುವಂತೆ ಸೂಚಿಸಿದ ಅವರು, ರೋಪ್ ವೇ ಸಾಧ್ಯತೆಗಳ ಬಗ್ಗೆ ಪರಿಶೀಲಿಸುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಾತನಾಡಿ, ಕೆಮ್ಮಣ್ಣುಗುಂಡಿ ಪ್ರದೇಶದಲ್ಲಿ ಪ್ರವಾಸಿಗರಿಗೆ ಅಗತ್ಯವಾದ ಎಲ್ಲಾ ಮೂಲಸೌಲಭ್ಯಗಳನ್ನು ಒದಗಿಸಲಾಗಿದೆ. ಇಲ್ಲಿನ ವಸತಿಗೃಹ ವ್ಯವಸ್ಥೆ ಯನ್ನು ಜಂಗಲ್ ಲಾಡ್ಜ್ ಸಂಸ್ಥೆಗೆ ವಹಿಸಲಾಗಿದೆ. ಪ್ರವಾಸಿಗರ ಬೇಡಿಕೆಗೆ ಸ್ಪಂದಿಸಲಾಗುತ್ತಿದೆ. ಇತರೆ ಗಿರಿಧಾಮಗಳ ಮಾದರಿಯಲ್ಲಿ ಸೌಲಭ್ಯ ಒದಗಿಸಲಾಗುವುದು ಎಂದರು.
ಸಭೆಯ ಶಿಫಾರಸ್ಸುಗಳನ್ನು ಮತ್ತು ಸೂಚನೆಗಳ ಅನ್ವಯ ತಗೆದುಕೊಂಡ ಕ್ರಮಗಳ ಕುರಿತ ಅನುಪಾಲನಾ ವರದಿಯನ್ನು ಒಂದು ತಿಂಗಳಲ್ಲಿ ಸಲ್ಲಿಸುವಂತೆ ಸಮಿತಿ ಸದಸ್ಯರು ಜಿಲ್ಲಾಡಳಿತಕ್ಕೆ ಸೂಚಿಸಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಸುನೀಲ್ ವಲ್ಯಾಪುರೆ, ಮೋಹನ್ಕುಮಾರ್ ಕೊಂಡಜ್ಜಿ, ಚಿಕ್ಕಮಗಳೂರು ಉಪವಿಭಾಗಾಧಿಕಾರಿ ಡಾ| ಎಚ್.ಎಲ್. ನಾಗರಾಜ್, ತರೀಕೆರೆ ಉಪವಿಭಾಗಾಧಿಕಾರಿ ಸಿದ್ಧಲಿಂಗ ರೆಡ್ಡಿ, ಪ್ರವಾಸೋದ್ಯಮ, ತೋಟಗಾರಿಕೆ ಇಲಾಖೆ, ಜಂಗಲ್ ಲಾಡ್ಜ್ ಸಂಸ್ಥೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri: ದೇವರ ದರ್ಶನಕ್ಕೆಂದು ಬೆಂಗಳೂರಿನಿಂದ ಬಂದಿದ್ದ ಪೊಲೀಸ್ ಪೇದೆ ಮೇಲೆ ಹಲ್ಲೆ
Tragedy: ಕೆರೆಗೆ ಈಜಲು ಹೋದ ಬಾಲಕ ನೀರುಪಾಲು… ಮುಗಿಲು ಮುಟ್ಟಿದ ಪೋಷಕರ ಆಕ್ರಂದನ
Accident: ಬೈಕ್-ಕ್ಯಾಂಟರ್ ಮುಖಾಮುಖಿ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು, ಯುವತಿಯ ನಾಲಿಗೆ ಕಟ್
Snake: ಹಾವು ಕಚ್ಚಿದ್ರು ಮುಳ್ಳು ಚುಚ್ಚಿದೆ ಎಂದು ಮಲಗಿದ್ದ ವ್ಯಕ್ತಿ ಬೆಳಗಾಗುತ್ತಲೇ ಮೃತ್ಯು
King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ
MUST WATCH
ಹೊಸ ಸೇರ್ಪಡೆ
Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು
TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್ – ಆಧಾರ್ ಲಿಂಕ್ ಮಾಡಿ
Ullal: ಬಿಲ್ಡರ್ ನಿಂದ ಹಣ ಪಡೆದು ವಂಚನೆ; ಬ್ಯಾಂಕ್ ಮ್ಯಾನೇಜರ್ ಸೇರಿ ನಾಲ್ವರ ವಿರುದ್ಧ FIR
Panaji: ಜೂ. 4, 5ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ
Sangolli Rayanna: ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ ರಾಯಣ್ಣನ ಸಂಗೊಳ್ಳಿ