ಪಕ್ಷ ನಿಷ್ಠರಿಗೆ ಟಿಕೆಟ್‌ ನೀಡಲು ಆಗ್ರಹ

ಮಾಜಿ ಶಾಸಕ ಮಂಜುನಾಥ್‌ ಗೌಡರನ್ನು ವೇದಿಕೆಗೆ ಆಹ್ವಾನಿಸಿ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ.

Team Udayavani, May 6, 2022, 6:12 PM IST

ಪಕ್ಷ ನಿಷ್ಠರಿಗೆ ಟಿಕೆಟ್‌ ನೀಡಲು ಆಗ್ರಹ

ಕೋಲಾರ: ಜೆಡಿಎಸ್‌,ಕಾಂಗ್ರೆಸ್‌ಗೆ ಬೇಡವಾದ ಮಾಜಿ ಶಾಸಕ ಮಂಜುನಾಥಗೌಡ ಅಥವಾ ಹೊರಗಿನವರಿಗೆ ಬಿಜೆಪಿ ಟಿಕೆಟ್‌ ನೀಡಿದಲ್ಲಿ ನಮ್ಮ ಪ್ರತಿರೋಧ ಖಚಿತ. ಪಕ್ಷದ ನಿಷ್ಠಾವಂತರಿಗೆ ಟಿಕೆಟ್‌ ನೀಡಬೇಕು ಎಂದು ಮಾಲೂರು ತಾಲೂಕು ಬಿಜೆಪಿ ಅಧ್ಯಕ್ಷ ಪುರ ನಾರಾಯಣಸ್ವಾಮಿ ಆಗ್ರಹಿಸಿದರು.

ಗುರುವಾರ ನಗರದ ಪತ್ರಕರ್ತರ ಭವನದಲ್ಲಿ ಮಾಲೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರು ಕರೆದಿದ್ದ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಮಾಲೂರಿನಲ್ಲಿ ಬಿಜೆಪಿ ಸದೃಢವಾಗಿ ಬೆಳೆದಿದೆ. ಮುಂದಿನ ದಿನಗಳಲ್ಲಿ ಯಾವುದೇ ಚುನಾವಣೆ ಬಂದರೂ ಬಿಜೆಪಿಗೆ ಗೆಲ್ಲುವ ತಾಕತ್ತು ಇದೆ. ಸದ್ಯ ಮಾಲೂರಿನ ಬಿಜೆಪಿಯಲ್ಲಿ ಹಲವರು ಟಿಕೆಟ್‌ ಆಕಾಂಕ್ಷಿಗಳಿದ್ದಾರೆ ಎಂದರು.

ಸಂಸದ ಎಸ್‌.ಮುನಿಸ್ವಾಮಿ ಅವರು ಜೆಡಿಎಸ್‌ ಪಕ್ಷದ ಮಾಜಿ ಶಾಸಕ ಮಂಜುನಾಥ್‌ಗೌಡರನ್ನು ಪಕ್ಷಕ್ಕೆ ಸೇರಿಸಿ ಕೊಂಡು ಅವರಿಗೆ ಟಿಕೆಟ್‌ ಕೊಡಿಸಿ ಋಣ ತೀರಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಯಾವ ನ್ಯಾಯ ಸಂಸದರ ಮಾತುಗಳಿಗೆ ನಮ್ಮ ವಿರೋಧವಿದೆ ಇದರ ಬಗ್ಗೆ ಕೋರ್‌ ಕಮಿಟಿಯಲ್ಲೂ ವರಿಷ್ಠರ ಗಮನಕ್ಕೆ ತಂದಿದ್ದೇವೆ ಎಂದರು.

ಬಿಜೆಪಿಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ರಾಜ್ಯ ಸಮಿತಿ ಸದಸ್ಯ ಆರ್‌. ಪ್ರಭಾಕರ್‌ ಮಾತನಾಡಿ, ಸಂಸದ ಮುನಿಸ್ವಾಮಿ ಹಾಗೂ ಸಚಿವ ಮುನಿರತ್ನ ಅವರು ಪಕ್ಷ ಕಟ್ಟಲು ದುಡಿದ ನಿಷ್ಠಾವಂತ ಮೂಲ ಬಿಜೆಪಿ ಕಾರ್ಯಕರ್ತರನ್ನು ಕಡೆಗಣಿಸಿ ಜೆ.ಡಿ.ಎಸ್‌ನ ಮಂಜುನಾಥಗೌಡರಿಗೆ ಬಿಜೆಪಿ ಟಿಕೆಟ್‌ ನೀಡಿದಲ್ಲಿ ನಿಷ್ಠಾವಂತರ ವಿರೋಧ ಖಚಿತ ಎಂದರು.

ಸಂಸದರು ಹಾಗೂ ಉಸ್ತುವಾರಿ ಸಚಿವರು ಪಕ್ಷಕ್ಕಾಗಿ ದುಡಿದ ನಿಷ್ಠಾವಂತ ಮೂಲ ಬಿಜೆಪಿ ಮುಖಂಡರ, ಕಾರ್ಯಕರ್ತರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ದೂರಿದರಲ್ಲದೆ, ಇತ್ತೀಚೆಗೆ ಮಾಲೂರು ತಾಲೂಕಿನ ಟೇಕಲ್‌ನಲ್ಲಿ ನಡೆದ ಕಲ್ಲುಕುಟಿಕರ ಸಮಸ್ಯೆಗಳ ಕುರಿತು ಕರೆದಿದ್ದ ಸಭೆ ಸರ್ಕಾರಿ ಕಾರ್ಯಕ್ರಮ ವಾಗಿದ್ದರೂ ಮಾಜಿ ಶಾಸಕ ಮಂಜುನಾಥ್‌ ಗೌಡರನ್ನು ವೇದಿಕೆಗೆ ಆಹ್ವಾನಿಸಿ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ.

ಜತೆಗೆ ಮಾಜಿ ಶಾಸಕರ ಕರೆ ಮೇರೆಗೆ ಕಾರ್ಯಕ್ರಮಕ್ಕೆ ಆಗಮಿಸಿರುವುದಾಗಿ ಸಚಿವರು ಹೇಳಿಕೆ ನೀಡಿರುವ ಬಗ್ಗೆ ಹಾಗೂ ಸಚಿವರ ಮತ್ತು ಸಂಸದರ ನಡೆ ವಿರುದ್ಧ ಹೆ„ಕಮಾಂಡ್‌ ಗೆ ಸ್ಥಳೀಯ ಮುಖಂಡರು ದೂರು ನೀಡಿದ್ದೇವೆ ಎಂದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುನಾಥರೆಡ್ಡಿ, ಮುಖಂಡರಾದ ಸುಬ್ರಹ್ಮಣ್ಯರೆಡ್ಡಿ, ನಿಕಟ ಪೂರ್ವ ತಾಲೂಕು ಅಧ್ಯಕ್ಷ ವೆಂಕಟೇಶ್‌, ದೀಕ್ಷಾ ಸಮಿತಿ ಸದಸ್ಯ ನಾರಾಯಣ ಸ್ವಾಮಿ, ಮುಖಂಡರಾದ ರಾಜಾರಾಂ, ವೆಂಕಟೇಶ ಗೌಡ ಉಪಸ್ಥಿತರಿದ್ದರು.

ಸಂಸದರಿಗೆ ತಾಕೀತು
ಹೊರಗಿನ ವ್ಯಕ್ತಿಯನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಯತ್ನ ಕೈಬಿಡಬೇಕು. ಸ್ಥಳೀಯ ಬಿಜೆಪಿ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಮಾತನಾಡುವುದು ಸರಿಯಲ್ಲ. ನೀವು ಪಕ್ಷದ ಕಾರ್ಯಕರ್ತರಿಗೆ ದ್ರೋಹ ಮಾಡುವ ಕೆಲಸ ಮಾಡಬೇಡಿ ಎಂದು ಮಾಲೂರು ತಾಲೂಕು ಬಿಜೆಪಿ ಅಧ್ಯಕ್ಷ ಪುರ ನಾರಾಯಣಸ್ವಾಮಿ ಸಂಸದರ ವಿರುದ್ಧ ಕಿಡಿಕಾರಿದರು. ಹಲವಾರು ವರ್ಷಗಳಿಂದ ಪಕ್ಷಕ್ಕಾಗಿ ನಿಷ್ಟೆಯಿಂದ ದುಡಿದಿರುವ ನಾನೂ ಒಳಗೊಂಡಂತೆ ಹೂಡಿ ವಿಜಯಕುಮಾರ್‌, ಪ್ರಭಾಕರ್‌ ಮುಂತಾದವರು ಪ್ರಬಲ ಟಿಕೆಟ್‌ ಆಕಾಂಕ್ಷಿಗಳಾಗಿದ್ದು, ನಮ್ಮನ್ನು ಹೊರತುಪಡಿಸಿ ಬೇರೆಯವರಿಗೆ ಪಕ್ಷದ ವರಿಷ್ಠರು ಅವಕಾಶ ಮಾಡಿ ಕೊಡಬಾರದು ಎಂದು ಆಗ್ರಹಿಸಿದರು.

ಇದೇ ತಿಂಗಳ 13 ಪ್ರಕೋಷ್ಠಗಳ ಸಮಾವೇಶ
ಮಾಲೂರಿನಲ್ಲಿ ಮೇ.13 ರಂದು ಪಕ್ಷದ ಎಲ್ಲಾ ಪ್ರಕೋಷ್ಠಗಳ ಸಮಾವೇಶ ನಡೆಸುತ್ತಿದ್ದು, ಸುಮಾರು 25-30 ಸಾವಿರ ಜನ ಫಲಾನುಭವಿಗಳ ಸಮಾವೇಶ ನಡೆಸಲಾಗುವುದು. ಸಮಾವೇಶದಲ್ಲಿ ರಾಜ್ಯದ ಮಖಂಡರುಗಳಾದ ಸಿ.ಟಿ.ರವಿ ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ, ಸಂಸದ ಎಸ್‌.ಮುನಿಸ್ವಾಮಿ ಹಾಗೂ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸದಸ್ಯ ಪ್ರಭಾಕರ್‌ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.