ಶೇಂಗಾ ಇಳುವರಿ ಭಾರೀ ಕುಸಿತ, ರೈತರಲ್ಲಿ ಆತಂಕ

ಕಳಪೆ ಬೀಜ ಪೂರೈಕೆ,ವಾತಾವರಣ ಪರಿಣಾಮ ಹಿನ್ನೆಲೆ

Team Udayavani, May 7, 2022, 7:43 AM IST

ಶೇಂಗಾ ಇಳುವರಿ ಭಾರೀ ಕುಸಿತ, ರೈತರಲ್ಲಿ ಆತಂಕ

ಸರಿಯಾಗಿ ಬೆಳೆಯದೆ ಕಪ್ಪಾಗಿರುವ ಶೇಂಗಾ ಬೀಜ.

ಕುಂದಾಪುರ ಕರಾವಳಿಯ ಮಟ್ಟಿಗೆ ಉಡುಪಿ ಜಿಲ್ಲೆಯ ಉತ್ತರ ಭಾಗದ ಕೆಲವು ಕಡೆ ಮಾತ್ರ ಬೆಳೆಯಲಾಗುವ ನೆಲಗಡಲೆ ಬೆಳೆಗೆ ಈ ಬಾರಿ ಸಂಕಷ್ಟ ಎದುರಾಗಿದೆ. ಪ್ರತೀ ರೈತನಿಗೂ ಕ್ವಿಂಟಾಲ್‌ ಗಟ್ಟಲೆ ಕಡಿಮೆ ಇಳುವರಿ ಬಂದಿದೆ.
ಆಗಾಗ್ಗೆ ಮಳೆ, ಮೋಡ ಮತ್ತು ಚಳಿ ಕಡಿಮೆಯಾದ ಪರಿಣಾಮ ಹಾಗೂ ಕಳಪೆ ಗುಣಮಟ್ಟದ ಬಿತ್ತನೆ ಬೀಜ ಪೂರೈಕೆ ಇದಕ್ಕೆ ಕಾರಣ.

ಉಡುಪಿ ಜಿಲ್ಲೆಯ ಬೈಂದೂರು, ವಂಡ್ಸೆ, ಕುಂದಾಪುರ, ಕೋಟ, ಬ್ರಹ್ಮಾವರ ಮತ್ತು ಉಡುಪಿ ಹೋಬಳಿಯಲ್ಲಿ ಶೇಂಗಾ ಬೆಳೆಯಲಾಗುತ್ತಿದೆ. ಅಂದಾಜು 1,700-2,000 ಹೆಕ್ಟೇರ್‌ನಲ್ಲಿ ಸುಮಾರು 4 ಸಾವಿರಕ್ಕೂ ಅಧಿಕ ಮಂದಿ ಬೆಳೆಗಾರರಿದ್ದಾರೆ. ಈ ಬಾರಿ ಒಟ್ಟು 1,900 ಹೆಕ್ಟೇರ್‌ನಲ್ಲಿ ಬಿತ್ತಲಾಗಿದ್ದು, ಹಿಂದಿನ ವರ್ಷಗಳಿಗಿಂತ 100 ಹೆಕ್ಟೇರ್‌ನಷ್ಟು ಕಡಿಮೆ ಬಿತ್ತನೆಯಾಗಿದೆ.

9 ಕ್ವಿಂಟಾಲ್‌ ಬೆಳೆಯುವಲ್ಲಿ 2-3 ಕ್ವಿಂಟಾಲ್‌
ಪ್ರತೀ ವರ್ಷ 60 ಸೆಂಟ್ಸ್‌ (1 ಮುಡಿ) ಗದ್ದೆಯಲ್ಲಿ ನೆಲಗಡಲೆ ಬೆಳೆಯುತ್ತೇನೆ. ಪ್ರತೀ ವರ್ಷ 9ರಿಂದ 10 ಕ್ವಿಂಟಾಲ್‌ ಇಳುವರಿ ಬರುತ್ತಿತ್ತು. ಆದರೆ ಈ ಬಾರಿ 2-3 ಕ್ವಿಂಟಾಲ್‌ ಕೂಡ ಬಂದಿಲ್ಲ. ಪ್ರತೀ ವರ್ಷ 30 ಸಾವಿರ ರೂ. ಖರ್ಚು ಮಾಡಿದರೆ 70-75 ಸಾವಿರ ರೂ. ಆದಾಯ ಬರುತ್ತಿತ್ತು. ಈ ಬಾರಿ 30 -35 ಸಾವಿರ ರೂ. ಖರ್ಚು ಮಾಡಿದ್ದೇನೆ. ಶೇಂಗಾ ಇನ್ನೂ ಮಾರಾಟ ಮಾಡಿಲ್ಲ. ಆದ ಖರ್ಚು ಕೂಡ ಹುಟ್ಟುವುದು ಕಷ್ಟ ಎನ್ನುತ್ತಾರೆ ಹೆರಂಜಾಲಿನ ಹಿರಿಯ ಕೃಷಿಕ ಶೀನ ಗಾಣಿಗ.

ಕಳಪೆ ಬೀಜ ಕಾರಣ: ಆರೋಪ
ಈ ಬಾರಿ ಇಲಾಖೆಯಿಂದ ವಿತರಣೆಯಾದ ಶೇಂಗಾ ಬೀಜ ಹಲವು ದಿನಗಳಾದರೂ ಮೊಳಕೆ ಬಂದಿರಲಿಲ್ಲ ಎನ್ನುವ ಆರೋಪ ಆರಂಭದಲ್ಲೇ ಕೇಳಿ ಬಂದಿತ್ತು. ಕಳಪೆ ಗುಣಮಟ್ಟದ ಬೀಜದಿಂದಾಗಿಯೇ ಇಳುವರಿ ಕಡಿಮೆಯಾಗಿದೆ. ಬಂದಿರುವ ಬೆಳೆಯೂ ಬಹುಪಾಲು ಟೊಳ್ಳಾಗಿದೆಯಲ್ಲದೆ ಗಾತ್ರವೂ ಸಣ್ಣದಾಗಿದೆ ಎನ್ನುವುದು ರೈತರ ಅಳಲು.

ಹವಾಮಾನ ಪರಿಣಾಮ?
ಶೇಂಗಾ ಒಣಭೂಮಿಯ ಬೆಳೆ. ನವೆಂಬರ್‌ ಆರಂಭದಲ್ಲಿ ಗದ್ದೆ ಹದ ಮಾಡಿ, ಡಿಸೆಂಬರ್‌ನಲ್ಲಿ ಬಿತ್ತಲಾಗುತ್ತದೆ. ಆದರೆ ಈ ಬಾರಿ ನಿರಂತರ ಮಳೆಯಿಂದಾಗಿ ಜನವರಿಯ ವರೆಗೂ ತೇವಾಂಶ ಹೆಚ್ಚಿದ್ದು, ಬಿತ್ತನೆ ಸಾಧ್ಯವಾಗಿರಲಿಲ್ಲ. ಕಡಿಮೆ ಇಳುವರಿಗೆ ಇದು ಕೂಡ ಕಾರಣವಾಗಿರಬಹುದು. ಶೇಂಗಾ ಕಾಯಿ ಕಟ್ಟುವ ವೇಳೆ ನೀರಿನ ಕೊರತೆಯಾದರೂ ಸಮಸ್ಯೆಯಾಗುತ್ತದೆ. ಈ ಬಾರಿಯ ಏರುಪೇರು ಹವಾಮಾನ ಇಳುವರಿ ಕುಸಿತಕ್ಕೆ ಕಾರಣವಾಗಿರಬಹುದು ಎನ್ನುವುದು ಕೃಷಿ ಇಲಾಖೆ ಅಧಿಕಾರಿಗಳ ಅಭಿಪ್ರಾಯ.

ಬೆಳೆ ನಷ್ಟವಾಗಿದೆ:
ಪರಿಹಾರ ಕೊಡಿ
ಖಾಸಗಿಯವರಲ್ಲಿ ಖರೀದಿಸಿದ ಬಿತ್ತನೆ ಬೀಜದಿಂದ ಹೆಚ್ಚೇನೂ ನಷ್ಟವಾಗದೆ ಉತ್ತಮ ಫಸಲು ಬಂದಿದೆ. ಆದರೆ ಇಲಾಖೆಯಿಂದ ಪಡೆದ ಬೀಜದಿಂದ ಇಳುವರಿ ಕಡಿಮೆಯಾಗಿದೆ ಎನ್ನುವುದು ರೈತರ ವಾದ. ನಿರೀಕ್ಷಿತ ಬೆಳವಣಿಗೆ ಆಗದೆ ಶೇಂಗಾದ ಗಾತ್ರ ಸಣ್ಣದಿದೆ. ಇದು ತೂಕದಲ್ಲಿ ವ್ಯತ್ಯಾಸಕ್ಕೂ ಕಾರಣವಾಗಿದೆ. ವಾತಾವರಣವೂ ಕಾರಣ ಇರಬಹುದು. ಇಲಾಖೆ ಮತ್ತು ಸರಕಾರ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಲಿ ಎನ್ನುವುದು ಶೇಂಗಾ ಬೆಳೆಗಾರರ ಆಗ್ರಹ.

ಕಳಪೆ ಮಟ್ಟದ ಬೀಜ ಪೂರೈಸಲಾಗಿದೆ ಎನ್ನುವ ಆರೋಪದಲ್ಲಿ ಹುರುಳಿಲ್ಲ. ಪರೀಕ್ಷೆ ನಡೆಸಿಯೇ ಬೀಜ ವಿತರಿಸಲಾಗಿದೆ. ನಿರಂತರ ಮಳೆ ಮತ್ತು ಬೇಕಾದ ವೇಳೆ ನೀರಿನ ಕೊರತೆಯಿಂದ ಇಳುವರಿ ಕುಂಠಿತಗೊಂಡಿರಬಹುದು. ಈ ರೀತಿ ಇಳುವರಿ ಕಡಿಮೆಯಾದಾಗ ಪರಿಹಾರ ಕೊಡುವ ಕ್ರಮವಿಲ್ಲ. ನೆರೆ, ಬರ ಬಂದರೆ ಮಾತ್ರ ನಷ್ಟ ಪರಿಹಾರ ಸಿಗುತ್ತದೆ. ಇದು ಸರಕಾರದ ಮಟ್ಟದಲ್ಲಿಯೇ ಆಗಬೇಕಿದೆ.
– ಕೆಂಪೇಗೌಡ, ಜಂಟಿ ನಿರ್ದೇಶಕರು, ಕೃಷಿ ಇಲಾಖೆ ಉಡುಪಿ

ಖಾಸಗಿಯಿಂದ ಸ್ವಲ್ಪ ಬೀಜ ಖರೀದಿಸಿದ್ದೆ, ಉಳಿದದ್ದು ಇಲಾಖೆಯಿಂದ. ಇಲಾಖೆಯಿಂದ ಪೂರೈಕೆಯಾದ ಬೀಜದ ಇಳುವರಿ ಕಡಿಮೆ ಬಂದಿದೆ. ಇಲಾಖಾಧಿಕಾರಿಗಳು ಭೇಟಿ ನೀಡಿ ಅಧ್ಯಯನ ನಡೆಸಿ, ಪರಿಹಾರ ನೀಡಬೇಕು.
– ರಾಜೇಶ್‌ , ನಾವುಂದ,
ಶೇಂಗಾ ಬೆಳೆಗಾರ

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.