ಬೆಳಕಿನ ನಿರೀಕ್ಷೆಯಲ್ಲಿ 5,221 ಮನೆ


Team Udayavani, May 8, 2022, 11:18 AM IST

light

ಉಡುಪಿ: ಜಿಲ್ಲೆಯಲ್ಲಿ ಬೆಳಕು ಯೋಜನೆಯ ಮೊದಲ ಮತ್ತು 2ನೇ ಹಂತದಲ್ಲಿ ವಿದ್ಯುತ್‌ ಸಂಪರ್ಕ ಕಲ್ಪಿಸಲು 8,341 ಮನೆಗಳನ್ನು ಗುರುತಿಸಿದ್ದು ಅದರಲ್ಲಿ 3,120 ಮನೆಗಳಿಗೆ ವಿದ್ಯುತ್‌ ಸಂಪರ್ಕ ಒದಗಿಸಲಾಗಿದೆ. ಇನ್ನೂ 5,221 ಮನೆಗಳು ವಿದ್ಯುದ್ದೀಕರಣಕ್ಕೆ ಬಾಕಿಯಿದೆ.

ಪ್ರತೀ ಮನೆಗೂ ವಿದ್ಯುತ್‌ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಬೆಳಕು ಯೋಜನೆಯನ್ನು ಜಾರಿಗೆ ತರಲಾಗಿದೆ. ಅದರಂತೆ ವಿದ್ಯುದ್ದೀಕರಣಕ್ಕೆ ಬಾಕಿ ಇರುವ ಮನೆಗಳನ್ನು ತಾಲೂಕುವಾರು ಪತ್ತೆ ಹಚ್ಚಿ, ವಿದ್ಯುತ್‌ ಸಂಪರ್ಕ ಒದಗಿಸುವ ಕಾರ್ಯ ಇಂಧನ ಇಲಾಖೆಯಿಂದ ನಡೆಯುತ್ತಿದೆ.

ಉಡುಪಿ, ಕಾರ್ಕಳ ಹಾಗೂ ಕುಂದಾಪುರ ತಾಲೂಕಿನಲ್ಲಿ ಮೊದಲ ಹಂತದಲ್ಲಿ 4,066 ಮನೆಗಳನ್ನು ಗುರುತಿಸಲಾಗಿತ್ತು. ಅದರಲ್ಲಿ 3,120 ಮನೆಗಳನ್ನು 8.25 ಕೋ. ರೂ. ವೆಚ್ಚದಲ್ಲಿ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. 946 ಮನೆಗಳಿಗೆ ಇನ್ನೂ ವಿದ್ಯುತ್‌ ಸಂಪರ್ಕ ನೀಡಿಲ್ಲ. ಹಾಗೆಯೇ 2ನೇ ಹಂತದಲ್ಲಿ 4,275 ಮನೆಗಳನ್ನು ಗುರುತಿಸಲಾಗಿದ್ದು, ಇನ್ನೂ ಒಂದು ಮನೆಗೂ ಸಂಪರ್ಕ ಕಲ್ಪಿಸಿಲ್ಲ, ಟೆಂಡರ್‌ ಪ್ರಕ್ರಿಯೆ ಇತ್ಯಾದಿ ಪೂರ್ಣಗೊಂಡ ಅನಂತರ ಸಂಪರ್ಕ ಒದಗಿಸುವ ಕಾರ್ಯ ಆಗಿದೆ.

‘ಬೆಳಕು’ ಪಡೆಯುವುದು ಹೇಗೆ?

ಬೆಳಕು ಯೋಜನೆಯಡಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಕ್ಕೆ ವಿದ್ಯುತ್‌ ಸಂಪರ್ಕವನ್ನು ಉಚಿತವಾಗಿ ಸರಕಾರದಿಂದ ನೀಡಲಾಗುತ್ತದೆ. ಇದಕ್ಕೆ ಸಂಬಂಧಪಟ್ಟ ಗ್ರಾ.ಪಂ.ನಿಂದ ಎನ್‌ ಒಸಿ ಕೂಡ ಬೇಕಾಗುವುದಿಲ್ಲ. ಈ ಹಿಂದೆ ಕನ್ವರ್ಶನ್‌, ಡೋರ್‌ ನಂಬರ್‌ ಇತ್ಯಾದಿ ಮಾಹಿತಿಗಳನ್ನು ಕೇಳುತ್ತಿದ್ದರು. ಈಗ ಅದ್ಯಾವೂದು ಬೇಕಾಗಿಲ್ಲ. ರೇಷನ್‌ ಕಾರ್ಡ್‌ ಮತ್ತು ಆಧಾರ್‌ ಕಾರ್ಡ್‌ ಹೊಂದಿದ್ದು, ಕುಟುಂಬದೊಂದಿಗೆ ವಾಸವಾಗಿರುವ ಮನೆ(ಲಕ್ಷುರಿಯಾಗಿರಬಾರದು)ಯಿದ್ದರೆ ಯೋಜನೆ ಪಡೆಯಬಹುದು. ಮೆಸ್ಕಾಂನ ತಮ್ಮ ವ್ಯಾಪ್ತಿಯ ಉಪವಿಭಾಗಕ್ಕೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದು. ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಾರೆ. ಬೆಳಕು ಯೋಜನೆಯಡಿ ವಿದ್ಯುತ್‌ ಸಂಪರ್ಕ ಪಡೆಯಲು ಅರ್ಹರಿದ್ದರೆ ತತ್‌ಕ್ಷಣವೇ ಒದಗಿಸುವ ಕಾರ್ಯ ಆಗಲಿದೆ ಎಂದು ಮೆಸ್ಕಾಂನ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ವಿದ್ಯುತ್‌ ಸಂಪರ್ಕ ಬಾಕಿ ಇರಲು ಕಾರಣ

ಜಿಲ್ಲೆಯ ಬಹುತೇಕ ಮನೆಗಳಿಗೆ ಇಂಧನ ಇಲಾಖೆಯ ವಿವಿಧ ಯೋಜನೆಯಡಿ ಈಗಾಗಲೇ ವಿದ್ಯುತ್‌ ಸಂಪರ್ಕ ನೀಡಲಾಗಿದೆ. ಅದಾಗ್ಯೂ 5 ಸಾವಿರಕ್ಕೂ ಅಧಿಕ ಮನೆಗಳು ಇನ್ನು ಕತ್ತಲಲ್ಲೆ ಇವೆ. ಇದಕ್ಕೆ ಪ್ರಮುಖ ಕಾರಣ, ವಿದ್ಯುತ್‌ ಲೈನ್‌ ಅಳವಡಿಸಲು ಸಾಧ್ಯವಿರದ ಗುಡ್ಡಗಾಡು ಪ್ರದೇಶ, ಕುದ್ರು ಇತ್ಯಾದಿ ಪ್ರದೇಶ. ಹೊಸ ಮನೆ ನಿರ್ಮಾಣವಾಗಿರುವುದು ಸೇರಿದಂತೆ ವಿದ್ಯುತ್‌ ಸಂಪರ್ಕ ನೀಡಲು ಸಾಧ್ಯವಾಗದ ಹಳ್ಳಿಗಳಲ್ಲಿ ಮಾತ್ರ ಈ ರೀತಿಯ ಮನೆಯಿದ್ದು, ಅದನ್ನು ಗುರುತಿಸಲಾಗುತ್ತಿದೆ.

ಶೆಡ್‌ಗಳಿಗೆ ನೀಡುವುದಿಲ್ಲ

ಈ ಯೋಜನೆಯ ಲಾಭ ಪಡೆಯಬೇಕು ಎಂಬ ದುರಾಸೆಯಿಂದ ಅಥವಾ ಅನ್ಯ ಉದ್ದೇಶಕ್ಕೆ ಇದನ್ನು ಬಳಸಲು ಕೆಲವರು ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಾಣ ಮಾಡಿ, ಬೆಳಕು ಯೋಜನೆಯಡಿ ವಿದ್ಯುತ್‌ಗಾಗಿ ಅರ್ಜಿ ಸಲ್ಲಿಸುತ್ತಿದ್ದಾರೆ. ಅಂತಹ ಯಾವುದೇ ಅರ್ಜಿಗಳನ್ನು ಬೆಳಕು ಯೋಜನೆಯಡಿ ಪರಿಗಣಿಸುವುದಿಲ್ಲ. ಖಾಸಗಿ ಶೆಡ್‌ಗಳಿಗೂ ಈ ಯೋಜನೆಯಡಿ ವಿದ್ಯುತ್‌ ನೀಡುವುದಿಲ್ಲ. ಕುಟುಂಬ ವಾಸಿಸುವ ಮನೆಗೆ ಮಾತ್ರ ವಿದ್ಯುತ್‌ ನೀಡಲಾಗುತ್ತದೆ ಎಂದು ಮೆಸ್ಕಾಂ ಅಧೀಕ್ಷಕ ನರಸಿಂಹ ಪಂಡಿತ್‌ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.