ರಾಜ್ಯಾದ್ಯಂತ ಸಮಗ್ರ ನೀರಾವರಿಗೆ ಜೆಡಿಎಸ್‌ ಸಂಕಲ್ಪ

ನಗರಕ್ಕಿಂದು ಜನತಾ ಜಲಧಾರೆ ಯಾತ್ರೆ

Team Udayavani, May 8, 2022, 11:13 AM IST

5

ಬಾಗಲಕೋಟೆ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷವನ್ನು ಸ್ವತಂತ್ರವಾಗಿ ಅಧಿಕಾರಕ್ಕೆ ತಂದಲ್ಲಿ ಇಡೀ ರಾಜ್ಯಾದ್ಯಂತ ಸಮಗ್ರ ನೀರಾವರಿ ಮಾಡುವ ಸಂಕಲ್ಪದೊಂದಿಗೆ ಆರಂಭವಾದ ಜನತಾ ಜಲಧಾರೆ ಯಾತ್ರೆ ಮೇ 8ರಂದು ಬಾಗಲಕೋಟೆ ನಗರಕ್ಕೆ ಆಗಮಿಸಲಿದ್ದು, ಮೇ 9ರಂದು ಬಾದಾಮಿಯಲ್ಲಿ ಬೃಹತ್‌ ಸಮಾವೇಶ ನಡೆಯಲಿದೆ ಎಂದು ಜೆಡಿಎಸ್‌ ಜಿಲ್ಲಾ ಯುವ ಘಟಕದ ಅಧ್ಯಕ್ಷ ಗೋಪಾಲ ಲಮಾಣಿ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 15 ಭಾಗಗಳಿಂದ ಜನತಾ ಜಲಧಾರೆ ಯಾತ್ರೆ ಕೈಗೊಂಡಿದ್ದು, ಈ ಯಾತ್ರೆಯುದ್ದಕ್ಕೂ ನದಿ, ಬ್ಯಾರೇಜ್‌ಗಳಿಗೆ ವಿಶೇಷ ಪೂಜೆ ಹಾಗೂ ಜಿಲ್ಲೆಯ ಮೂರು ಪ್ರಮುಖ ಕೃಷ್ಣಾ, ಮಲಪ್ರಭಾ ಹಾಗೂ ಘಟಪ್ರಭಾ ನದಿಗಳ ಜಲ ಸಂಗ್ರಹ ಮಾಡಲಾಗಿದೆ. ಈ ಜಲವನ್ನು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಮುಂದಿನ ಚುನಾವಣೆ ವರೆಗೂ ಜೋಪಾನವಾಗಿಟ್ಟು, ನಿತ್ಯ ಜಲಪೂಜೆ ನಡೆಯಲಿದೆ. ಮುಂದಿನ ಚುನಾವಣೆಯಲ್ಲಿ ರಾಜ್ಯದ ಪ್ರತಿಯೊಂದು ನದಿ ಪಾತ್ರದಲ್ಲೂ ನೀರಾವರಿ ಕೈಗೊಳ್ಳುತ್ತೇವೆ ಎಂಬ ಸಂಕಲ್ಪವೇ ಈ ಜನತಾ ಜಲಧಾರೆ ಯಾತ್ರೆಯ ಉದ್ದೇಶವಾಗಿದೆ ಎಂದರು.

ಜಲಧಾರೆ ಯಾತ್ರೆ ಈಗಾಗಲೇ ಬಾಗಲಕೋಟೆ ಜಿಲ್ಲೆಯನ್ನು ಪ್ರವೇಶಿಸಿದ್ದು ಮೇ. 8 ರಂದು ನಗರಕ್ಕೆ ಆಗಮಿಸಲಿದೆ. ಅಂದು ನಗರದ ಅಂಜುಮನ್‌ ಸಂಸ್ಥೆಯ ಹತ್ತಿರ ಅದ್ದೂರಿ ಸ್ವಾಗತದೊಂದಿಗೆ ಬೈಕ್‌ ರ್ಯಾಲಿ ನಡೆಯಲಿದೆ. ಬಾಗಲಕೋಟೆಯ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಸಿದರು. ಅಂದು ಬೆಳಗ್ಗೆ 11ಕ್ಕೆ ಬಾಗಲಕೋಟೆಯ ಅಂಜುಮನ್‌ ಸಂಸ್ಥೆಯ ಆವರಣದಲ್ಲಿ ಜನತಾ ಜಲಧಾರೆ ಯಾತ್ರೆಗೆ ಚಾಲನೆ ನೀಡಲಿದ್ದು ಮಠಾಧೀಶರು, ಮೌಲ್ವಿಗಳು, ಪಾದ್ರಿಗಳು ಹಾಗೂ ಪಕÒ‌ದ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ.ಯಾತ್ರೆಗೆ ಚಾಲನೆ ನೀಡಿದ ನಂತರ ಬೈಕ್‌ ರ್ಯಾಲಿ ಆರಂಭವಾಗಿ ನಗರ, ನವನಗರ ಹಾಗೂ ಬಾಗಲಕೋಟೆಯಲ್ಲಿ ಸಂಚರಿಸಲಿದೆ. ಬಸವೇಶ್ವರ ವೃತ್ತದಲ್ಲಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ, ಈ ಯಾತ್ರೆ ಬಾದಾಮಿಗೆ ತೆರಳಲಿದೆ ಎಂದು ವಿವರಿಸಿದರು.

ಬಾದಾಮಿಗೆ ಎಚ್‌ಡಿಕೆ: ಜೆಡಿಎಸ್‌ ಯುವ ಮುಖಂಡ ವಿಜಯ ತೋಟಣ್ಣವರ ಮಾತನಾಡಿ, ಮೇ. 9 ರಂದು ಬಾದಾಮಿಯಲ್ಲಿ 11ಕ್ಕೆ ಜನತಾ ಜಲಧಾರೆ ಯಾತ್ರೆಯ ಸಮಾವೇಶವು ಜರುಗಲಿದೆ. ಸಮಾವೇಶದಲ್ಲಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ, ಮುಖಂಡರಾದ ಸಿ.ಎಂ. ಇಬ್ರಾಹಿಂ, ಬಂಡೆಪ್ಪ ಕಾಶೆಂಪೂರ ಮುಂತಾದವರು ಭಾಗವಹಿಸಲಿದ್ದಾರೆ. ಜಿಲ್ಲೆಯ ಸುಮಾರು 25 ಸಾವಿರಕ್ಕೂ ಹೆಚ್ಚು ಜನರು ಈ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಎರಡು ರಾಷ್ಟ್ರೀಯ ಪಕ್ಷ‌ಗಳು ಜನತೆಯ ಆಶಯಕ್ಕೆ ತಕ್ಕಂತೆ ಕಾರ್ಯ ನಿರ್ವಹಿಸದೇ ವಿಫಲವಾಗಿದೆ. ರಾಜ್ಯದ ನೀರಾವರಿ ಯೋಜನೆಗಳು ಸಂಪೂರ್ಣ ನೆನಗುದಿಗೆ ಬಿದ್ದಿವೆ. ಹೀಗಾಗಿ 2023ರ ಚುನಾವಣೆಯಲ್ಲಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌ಗೆ ಅಧಿಕಾರ ದೊರೆತರೆ ರಾಜ್ಯದ ಎಲ್ಲ ನೀರಾವರಿ ಯೋಜನೆ ಪೂರ್ಣಗೊ ಳಿಸುವ ಸಂಕಲ್ಪವನ್ನು ಕುಮಾರಸ್ವಾಮಿ ಮಾಡಿದ್ದಾರೆ. ಅದಕ್ಕಾಗಿಯೇ ಜನತಾ ಜಲಧಾರೆ ಯಾತ್ರೆ ಆರಂಭಿಸಲಾಗಿದೆ. ಈ ಸಂಕಲ್ಪಕ್ಕೆ ರಾಜ್ಯದ ಜನತೆ ಬೆಂಬಲಿಸಿ ಶಕ್ತಿ ತುಂಬಬೇಕು ಎಂದು ಮನವಿ ಮಾಡಿದರು. ಪಕ್ಷದ ಮುಖಂಡರಾದ ಎಂ.ಎನ್‌.ನದಾಫ್‌, ಯಾಸೀನ್‌ ಮಿರ್ಜಿ, ರಶೀದ ಬಾಗವಾನ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.