ಪದವಿ ಕಾಲೇಜು ಅಭಿವೃದ್ಧಿಪಡಿಸುವೆ: ರೂಪಾಲಿ

ಭವಿಷ್ಯದ ದೃಷ್ಟಿಯಿಂದ ಸರ್ಕಾರಿ ಕಾಲೇಜಿಗೆ ಉತ್ತಮ ಸೌಲಭ್ಯ

Team Udayavani, May 8, 2022, 4:12 PM IST

19

ಕಾರವಾರ: ನಗರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಪದವಿ ಕಾಲೇಜು ಅತ್ಯಂತ ಪ್ರಮುಖ ಕಾಲೇಜಾಗಿದ್ದು, ಭವಿಷ್ಯದ ದೃಷ್ಟಿಯಿಂದ ಅಭಿವೃದ್ಧಿ ಪಡಿಸಬೇಕಾದ ಅವಶ್ಯಕತೆ ಇದೆ ಎಂದು ಶಾಸಕಿ ರೂಪಾಲಿ ನಾಯ್ಕ ಹೇಳಿದರು.

ನಗರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು ಸಮಸ್ಯೆಗಳ ಕುರಿತು ಕಾಲೇಜಿನ ಪ್ರಭಾರಿ ಪ್ರಿನ್ಸಿಪಾಲರಿಗೆ ಹಾಗೂ ಆಡಳಿತ ಮಂಡಳಿ ಸದಸ್ಯರ ಜೊತೆ ಸಭೆ ನಡೆಸಿ ಮಾಹಿತಿ ಪಡೆದರು. ನಂತರ ಕಾಲೇಜಿನ ವಿವಿಧ ಕಟ್ಟಡಗಳ ವೀಕ್ಷಣೆ ಮಾಡಿದರು.

ಕಾಲೇಜಿನ ಹಿಂದಿನ ಆಡಳಿತ ಮಂಡಳಿಯವರು ಭವಿಷ್ಯದ ಅಗತ್ಯತೆ ಗಮನದಲ್ಲಿಟ್ಟುಕೊಳ್ಳದೆ ಕಾಮಗಾರಿಗಳನ್ನು ಮಾಡಿದ್ದಾರೆ. ಪಿಡಬ್ಲ್ಯೂಡಿ ಇಲಾಖೆ ರೂಪುರೇಷೆ ಇಲ್ಲದೆ ಕಟ್ಟಡಗಳನ್ನು ನಿರ್ಮಿಸಿದ್ದಾರೆ. ಈಗ ನಿರ್ಮಿಸಲಾಗುವ ಕಟ್ಟಡ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗುವಂತೆ ಹಾಗೂ ನಗರದ ಅಂದ ಹೆಚ್ಚಿಸುವಂತೆ ನಿರ್ಮಿಸಲು ಹೊಸ ನೀಲನಕ್ಷೆ ತಯಾರಿಸಬೇಕು. ವಿದ್ಯಾರ್ಥಿಗಳಿಗೆ ಅವಶ್ಯಕವಾಗಿರುವ ಪ್ರಯೋಗಾಲಯ, ತರಗತಿ ಕೊಠಡಿ, ಉದ್ಯಾನವನ, ಮೇಲ್ಮಹಡಿಗೆ ತೆರಳಲು ಮೆಟ್ಟಿಲು ಮತ್ತು ಲಿಫ್ಟ್‌ ಎಲ್ಲವನ್ನು ಪರಿಗಣಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿದರು.

ಕಾಲೇಜು ನಗರದ ಕೇಂದ್ರದಲ್ಲಿದ್ದು ಭವಿಷ್ಯದಲ್ಲಿ ಜಾಗದ ಸಮಸ್ಯೆ ಕಾಡಬಹುದು. ಅದಕ್ಕಾಗಿ ಕಟ್ಟಡದ ಮೇಲೆ ಕೊಠಡಿ ನಿರ್ಮಿಸಬೇಕು. ವಿಶೇಷವಾಗಿ ನಮ್ಮ ಕರಾವಳಿ ಭಾಗಕ್ಕೆ ಅನುಕೂಲವಾಗುವಂತೆ ಕಟ್ಟಡದ ವಿನ್ಯಾಸ ಮಾಡುವಂತೆ ಸಂಬಂತ ಇಂಜಿನೀಯರಿಂಗ್‌ ಇಲಾಖೆಗೆ ಶಾಸಕಿ ಸೂಚನೆ ನೀಡಿದರು.

ಉಪನ್ಯಾಸಕರ ಕೊರತೆ: ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ ಬಗ್ಗೆ ಗಮನಕ್ಕೆ ಬಂದಿದೆ. ಕಾರವಾರದಲ್ಲಿ ಕೆಲಸ ಮಾಡಲು ಬಯಸುವ ಉಪನ್ಯಾಸಕರನ್ನು ಮರಳಿ ಇಲ್ಲಿಗೆ ತರಲಾಗುವುದು. ಈ ಸಮಸ್ಯೆ ಪರಿಹರಿಸಲು ಈಗಾಗಲೇ ಉನ್ನತ ಶಿಕ್ಷಣ ಇಲಾಖೆ ಜೊತೆ ಮಾತಾಡಿದ್ದೇನೆ. ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆಡಳಿತ ಮಂಡಳಿ ಸದಸ್ಯರು ಹಾಗೂ ಇನ್‌ಚಾರ್ಜ್‌ ಪ್ರಿನ್ಸಿಪಾಲರಿಗೆ ತಿಳಿಸಿದರು. ಕಾಯಂ ಉಪನ್ಯಾಸಕರ ಕೊರತೆ ಹಾಗೂ ಸ್ವಾಯತ್ತ ಕಾಲೇಜಿಗೆ ಇರುವ ಹೊಣೆಗಾರಿಕೆ, ಪರೀಕ್ಷೆ ನಡೆಸುವ ದೊಡ್ಡ ಜವಾಬ್ದಾರಿಯನ್ನು, ಇದಕ್ಕೆ ಅಗತ್ಯವಿರುವ ಕಾಯಂ ಉಪನ್ಯಾಸಕರ ಅವಶ್ಯಕತೆಯನ್ನು ಕಾಲೇಜಿನ ಸುಪರಿಂಡೆಂಟ್‌ ವಿವರಿಸಿದರು.

ಸರ್ಕಾರಿ ಪ್ರೌಢಶಾಲೆ ವೀಕ್ಷಣೆ: ನಗರದ ಕೇಂದ್ರ ಭಾಗದಲ್ಲಿರುವ ಬ್ರಿಟಿಷರು ನಿರ್ಮಿಸಿದ್ದ, ಬ್ರಿಟಿಷ್‌ ಕಾಲ್‌ ಸರ್ಕಾರಿ ಶಾಲೆ ಕಟ್ಟಡದ ಅಭಿವೃದ್ಧಿ ಬಗ್ಗೆ ಸಹ ವೀಕ್ಷಣೆ ವೇಳೆ ಚರ್ಚಿಸಲಾಯಿತು. ಕಟ್ಟಡಗಳು ಹಳೆಯದಾಗಿದ್ದು, ಹೊಸದಾಗಿ ನಿರ್ಮಾಣ ಮಾಡುವುದು ಅವಶ್ಯಕವಾಗಿದೆ. ಹೊಸದಾಗಿ ವಿನ್ಯಾಸ ಮಾಡಿ ನಿರ್ಮಾಣ ಮಾಡುವ ಕುರಿತು ಡಿಡಿಪಿಐರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಚರ್ಚಿಸಿದರು. ಆಡಳಿತ ಮಂಡಳಿ ಸದಸ್ಯ ರಾಜೇಶ್‌ ನಾಯಕ್‌, ಜಗದೀಶ್‌ ಬಿರ್ಕೊಡಿಕರ್‌, ಅರುಣ ಸಾಳಂಕೆ, ಕಾಲೇಜಿನ ಸಿಬ್ಬಂದಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.