ಕಮಲ ಕೋಟೆಯಲ್ಲಿ “ಕೈ’ ಕರಾಮತ್ತು


Team Udayavani, May 9, 2022, 6:10 AM IST

ಕಮಲ ಕೋಟೆಯಲ್ಲಿ “ಕೈ’ ಕರಾಮತ್ತು

ಧಾರವಾಡ: ಏಳು ಸುತ್ತಿನ ಕೋಟೆ(ಏಳು ವಿಧಾನಸಭಾ ಕ್ಷೇತ್ರ) ಧಾರವಾಡ ಜಿಲ್ಲೆ 2008ರಿಂದ ಬಿಜೆಪಿ ಭದ್ರಕೋಟೆಯಾಗಿ ಮಾರ್ಪಾಟಾಗಿದ್ದರೂ ಕಾಂಗ್ರೆಸ್‌ 2013ರಲ್ಲಿ ಆರು ಸುತ್ತು ತನ್ನದಾಗಿಸಿಕೊಂಡು ಕೈಬಲ ತೋರಿಸಿತ್ತು. ಇದೀಗ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳನ್ನೂ ಗೆಲ್ಲಲೇಬೇಕೆನ್ನುವ ಲೆಕ್ಕಾಚಾರದಲ್ಲಿದೆ.

ಜೆಡಿಎಸ್‌ನಿಂದ ಜಿಲ್ಲೆಯಲ್ಲಿ ಖಾತೆ ತೆರೆದ ಕಟ್ಟಾಳು ಎನ್‌.ಎಚ್‌.ಕೋನರಡ್ಡಿ ಕೂಡ ಇದೀಗ ಕೈ ಹಿಡಿದಿದ್ದರಿಂದ ತೆನೆ ಹೊತ್ತ ಮಹಿಳೆಗೆ ಜಿಲ್ಲೆಯಲ್ಲಿ ಸಂಕಷ್ಟ ಎದುರಾಗಿದೆ.

ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಟಾನಿಕ್‌ ಆಗಿದ್ದ ಮಾಜಿ ಸಚಿವ ವಿನಯ್‌ ಕುಲಕರ್ಣಿ ಇಲ್ಲದೇ ಇರುವುದು ಒಂದರ್ಥದಲ್ಲಿ ಕೈ ಪಡೆಗೆ ದಂಡ ನಾಯಕ ಇಲ್ಲದಂತಾಗಿದೆ. ಬಿಜೆಪಿ ಮುಖಂಡರ ವಿರುದ್ಧ ಖಡಕ್‌ ಮಾತುಗಳು ಮತ್ತು ಎದೆಗಾರಿಕೆಯಿಂದ ರಾಜಕಾರಣ ಮಾಡುತ್ತಿದ್ದ ವಿನಯ್‌ ಕುಲಕರ್ಣಿ ಸದ್ಯಕ್ಕೆ ಜಿಲ್ಲೆಯ ಹೊರಗಿದ್ದುಕೊಂಡೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ನವಲಗುಂದ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಗೆದ್ದು ಶಾಸಕರಾಗಿದ್ದ ಎನ್‌.ಎಚ್‌.ಕೋನರಡ್ಡಿ ಕಾಂಗ್ರೆಸ್‌ನಿಂದ ಟಿಕೆಟ್‌ ನೀಡುವುದು ಪಕ್ಕಾ ಎನ್ನುವ ನಂಬಿಕೆಯಲ್ಲಿ ಕೈ ಹಿಡಿದಿದ್ದಾರೆ. ಇಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಒಟ್ಟಾದರೆ ಬಿಜೆಪಿಯ ಸಚಿವ ಶಂಕರ ಪಾಟೀಲ ಮುನೇನಕೊಪ್ಪಗೆ ಪ್ರಬಲ ಪೈಪೋಟಿ ಪಕ್ಕಾ ಎನ್ನಲಾಗಿದೆ.

ಲಾಡ್‌ಗೆ ಟೆಂಗಿನಕಾಯಿ ಟಕ್ಕರ್‌: ಕಲಘಟಗಿಯಲ್ಲಿ ಸಂತೋಷ ಲಾಡ್‌ ಮತ್ತೆ ಆಯ್ಕೆಯಾಗಲು ಈಗಲೇ ಕಸರತ್ತು ಆರಂಭಿಸಿದ್ದಾರೆ. ಈ ಬಾರಿ ಕ್ಷೇತ್ರ ಬಿಟ್ಟು ಹೋಗದೆ ಇಲ್ಲಿಯೇ ಮೊಕ್ಕಾಂ ಹೂಡಿರುವ ಅವರು, ನಾನು ಬಳ್ಳಾರಿಗೆ ಹೋಗಲ್ಲ. ಕಲಘಟಗಿಯಿಂದಲೇ ಸ್ಪರ್ಧಿ ಸುವೆ ಎಂದು ಜನಪರ ಕೆಲಸಗಳಲ್ಲಿ ತೊಡಗಿದ್ದಾರೆ. ಬಿಜೆಪಿಯಿಂದ ಸಿ.ಎಂ.ನಿಂಬಣ್ಣವರ ಉತ್ತಮ ಕೆಲಸ ಮಾಡುತ್ತಿದ್ದರೂ ವಯೋಸಹಜತೆ ಯಿಂದಾಗಿ ಲಾಡ್‌ಗೆ ಪ್ರಬಲ ಪೈಪೋಟಿ ನೀಡಲು ಮಹೇಶ ಟೆಂಗಿನಕಾಯಿ ಅವರನ್ನು ಬಿಜೆಪಿ ಕಣಕ್ಕಿಳಿಸಲು ಯೋಚಿಸುತ್ತಿದೆ.

ಬೆಲ್ಲದ ವಿರುದ್ಧ ಯಾರು?: ಹು-ಧಾ ಪಶ್ಚಿಮ ಕ್ಷೇತ್ರ ಬಿಜೆಪಿ ಭದ್ರಕೋಟೆ. ಅರವಿಂದ ಬೆಲ್ಲದ ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಇವರ ವಿರುದ್ಧ ದಿ|ಎಸ್‌.ಆರ್‌. ಮೋರೆ, ಇಸ್ಮಾಯಿಲ್‌ ತಮಟಗಾರ ಸ್ಪರ್ಧಿಸಿದ್ದರೂ ಗೆಲ್ಲಲಿಲ್ಲ. ಕಾಂಗ್ರೆಸ್‌ನಲ್ಲಿ ಈ ಬಾರಿ ಅಲ್ಪಸಂಖ್ಯಾತರ ಬದಲು ಲಿಂಗಾಯತ ಸಮಾಜದ ಅಭ್ಯರ್ಥಿಗೆ ಟಿಕೆಟ್‌ ನೀಡಲು ಲೆಕ್ಕಾಚಾರ ನಡೆದಿದೆ.

ಕುಂದಗೋಳ ಕಥೆ ಏನು?: ಕುಂದಗೋಳದಲ್ಲಿ ಹಾಲಿ ಕಾಂಗ್ರೆಸ್‌ ಶಾಸಕಿ ಕುಸುಮಾವತಿ ಶಿವಳ್ಳಿ ಅವರಿದ್ದು, ನವಲಗುಂದದಲ್ಲಿ ಸ್ಪರ್ಧಿಸಿ ಸೋತಿರುವ ವಿನೋದ ಅಸೂಟಿ ಒಂದು ವೇಳೆ ಕೋನರಡ್ಡಿ ಅವರಿಗೆ ನವಲಗುಂದ ಕ್ಷೇತ್ರ ಬಿಟ್ಟು ಕೊಟ್ಟರೆ ಅವರಿಗೆ ಕುಂದಗೋಳ ಟಿಕೆಟ್‌ ನೀಡುವ ಲೆಕ್ಕಾಚಾರ ನಡೆದಿದೆ. ಇನ್ನು ಬಿಜೆಪಿ ಎಸ್‌.ಐ.ಚಿಕ್ಕನಗೌಡರ ಅಥವಾ ಹೊಸಮುಖಕ್ಕೆ ಮಣೆ ಹಾಕುವ ಚಿಂತನೆಯಲ್ಲಿದೆ.

ಶೆಟ್ಟರ ವಿರುದ್ಧ ಯಾರು?: ಹು-ಧಾ ಸೆಂಟ್ರಲ್‌ ಕ್ಷೇತ್ರದಲ್ಲಿ ಜಗದೀಶ ಶೆಟ್ಟರ ವಿರುದ್ಧ ಯಾರು ಸ್ಪರ್ಧಿಸುತ್ತಾರೆ ಎನ್ನುವುದು ಕೈನಲ್ಲಿ ಇನ್ನೂ ನಿರ್ಧಾರವಾಗಿಲ್ಲ. ಕಾರಣ ಕಳೆದ ಬಾರಿ ಅವರ ವಿರುದ್ಧ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದವರು ನಂತರ ಬಿಜೆಪಿ ಸೇರ್ಪಡೆಯಾದರು. ಆದರೂ ಯುವ ರಾಜಕಾರಣಿ ರಜತ್‌ ಉಳ್ಳಾಗಡ್ಡಿಮಠ ಸೇರಿದಂತೆ ಅನೇಕರು ಆಕಾಂಕ್ಷಿಗಳಿದ್ದಾರೆ. ಹು-ಧಾ ಪೂರ್ವದಲ್ಲಿ ಕಾಂಗ್ರೆಸ್‌ನ ಹಾಲಿ ಶಾಸಕ ಪ್ರಸಾದ ಅಬ್ಬಯ್ಯ ಮತ್ತೆ ಸ್ಪರ್ಧಿಸುವುದು ಪಕ್ಕಾ ಆಗಿದ್ದು, ಬಿಜೆಪಿಯಿಂದ ವೀರಭದ್ರಪ್ಪ ಹಾಲಹರವಿ ಸೇರಿದಂತೆ ಅನೇಕರು ಈ ಬಾರಿ ಟಿಕೆಟ್‌ಗೆ ಪೈಪೋಟಿ ನಡೆಸಿದ್ದಾರೆ.

– ಬಸವರಾಜ ಹೊಂಗಲ್‌

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.