ಉಪವಿಭಾಗ ಭಾಗ್ಯ ಕೈಗೂಡಿಲ್ಲ

ಉಪ್ಪಿನಂಗಡಿ: ಮೆಸ್ಕಾಂ ಕಚೇರಿ

Team Udayavani, May 9, 2022, 9:33 AM IST

mescom

ಉಪ್ಪಿನಂಗಡಿ: ಪುತ್ತೂರು ತಾಲೂಕಿನ ಅತೀ ದೊಡ್ಡ ವಾಣಿಜ್ಯ ನಗರಿ ಉಪ್ಪಿನಂಗಡಿ. ಆದರೆ ಮೆಸ್ಕಾಂ ಮಾತ್ರ ಇನ್ನೂ ಶಾಖೆಯಾಗಿಯೇ ಉಳಿದುಕೊಂಡಿದೆ. ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ದೂರಲಾಗುತ್ತಿದೆ.

ಈಗಾಗಲೇ ಇಲ್ಲಿರುವ ಕಚೇರಿ 10 ಗ್ರಾಮ ವ್ಯಾಪ್ತಿಯನ್ನು ಹೊಂದಿದ್ದು, 18 ಸಾವಿರಕ್ಕೂ ಅಧಿಕ ಗ್ರಾಹಕರನ್ನು ಒಳ ಗೊಂಡಿದೆ. ನಿಗಮದ ನಿಯಮದಂತೆ 15 ಸಾವಿರಕ್ಕೂ ಅಧಿಕ ಗ್ರಾಹ ಕರನ್ನು ಹೊಂದಿದ್ದರೆ ಅಂತಹ ಶಾಖೆ ಯನ್ನು ಉಪವಿಭಾಗವೆಂದು ಪರಿಗಣಿಸಿ ಮೇಲ್ದರ್ಜೆಗೆ ಏರಿಸಿ ಎಲ್ಲ ಸೌಕರ್ಯಗಳ ಒದಗಿಸಬೇಕಾದದ್ದು ವಾಡಿಕೆ. ಆದರೆ ಇಲ್ಲಿಯ ಶಾಖಾಧಿಕಾರಿಗಳ ಹುದ್ದೆಯನ್ನು ರದ್ದುಗೊಳಿಸಿ ಸಹಾಯಕ ಎಂಜಿನಿಯರ್‌ ಹುದ್ದೆ ಯನ್ನು ಸೃಷ್ಟಿಸಿ ನಾಲ್ಕು ವರ್ಷ ಕಳೆ ದರೂ ಬೇರೆ ಯಾವುದೇ ಸೌಕರ್ಯ ಒದಗಿಸ ದಿರುವುದು ವಿಪರ್ಯಾಸ.

ಕೌಂಟರ್‌ ತೆರೆಯಲು ವಿಳಂಬ

ಇಲ್ಲಿ ವಿದ್ಯುತ್‌ ಬಿಲ್‌ ಪಾವತಿ ಕೌಂಟರ್‌ ತೆರೆಯಲು ಹಿಂದೇಟು ಹಾಕುತ್ತಿರುವುದು ಹಲವು ಸಂಶಯಗಳಿಗೆ ಕಾರಣವಾಗಿದೆ. ನಿಗಮವು ಕಚೇರಿ ಹಿರಿಯ ಅಧಿಕಾರಿ ಹುದ್ದೆಯನ್ನು ಮೇಲ್ದರ್ಜೆಗೆ ಏರಿಸಿದೆ ಹೊರತು ಜನಸಾಮಾನ್ಯರಿಗೆ ನೀಡುವ ಸೇವೆ ಯನ್ನು ಮಾತ್ರ ಅಭಿವೃದ್ಧಿ ಪಡಿಸದಿರುವುದಕ್ಕೆ ಇಚ್ಛಾಶಕ್ತಿ ಕೊರತೆ ಕಾರಣ ಎನ್ನುವ ಆರೋಪ ಕೇಳಿ ಬಂದಿದೆ. ಸುಸಜ್ಜಿತ ಕಟ್ಟಡ ಇದ್ದು ಬಿಲ್‌ ಪಾವತಿಸುವ ಕೌಂಟರ್‌ ಇದ್ದರೂ ಓರ್ವ ಸಿಬಂದಿಯನ್ನು ನೇಮಿಸಲು ಹಿಂದೇಟು ಹಾಕುತ್ತಿದೆ. ಗ್ರಾಹಕರಿಗೆ ಸಂಪರ್ಕ ಕಡಿತವಾದರೆ ಮರು ಸಂಪರ್ಕ ಜೋಡಣೆ ಮಾಡಬೇಕಾದರೆ ಪುತ್ತೂರಿನ ಕೇಂದ್ರ ಕಚೇರಿಯಿಂದ ಸೂಚನೆ ಬರಬೇಕು.

ಪ್ರಗತಿಯಲ್ಲಿದೆ

ಶಾಖೆಯ ವ್ಯಾಪ್ತಿಯಲ್ಲಿ ಈಗಾಗಲೇ 18 ಸಾವಿರಕ್ಕೂ ಅಧಿಕ ಗ್ರಾಹಕರಿದ್ದು ಅಧಿಕಾರಿಗಳ ಹುದ್ದೆಯನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಈಗಾಗಲೇ ಸಬ್‌ಸ್ಟೇಶನ್‌ ನಿವೇಶನ ನಿಗದಿಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು ಬಳಿಕ ಪೂರ್ಣ ಪ್ರಮಾಣದ ಉಪ ವಿಭಾಗದ ಎಲ್ಲ ವ್ಯವಸ್ಥೆ ನಡೆಯಲಿದೆ ರಾಮಚಂದ್ರ, ಎಡಬ್ಲ್ಯುಇ

ಕ್ರಮ ಕೈಗೊಂಡಿಲ್ಲ

ಹೆಚ್ಚಿನ ಸೌಕರ್ಯ ಒದಗಿಸುವುದು ನಿಗಮದ ಕರ್ತವ್ಯ. ಉಪ್ಪಿನಂಗಡಿ ನೆರೆಪೀಡಿತ ಪ್ರದೇಶವೆಂದು ತಿಳಿದಿದ್ದರೂ ಮಳೆಗಾಲದಲ್ಲಿ ಸಿಬಂದಿಗೆ ಪ್ರತ್ಯೇಕ ವಾಹನದ ವ್ಯವಸ್ಥೆ ನೀಡುವಂತೆ ಒತ್ತಡ ಹೇರಿದರೂ ಕ್ರಮ ಕೈಗೊಂಡಿಲ್ಲ ಸುರೇಶ ಅತ್ರಮಜಲು, ಉಪ್ಪಿನಂಗಡಿ ,ಗ್ರಾ.ಪಂ. ಸದಸ್ಯ

ಸ್ಪಂದನೆ ಸಿಕ್ಕಿಲ್ಲ

ಮೆಸ್ಕಾಂ ಅಧಿಕಾರಿಗಳ ಹುದ್ದೆ ಭಡ್ತಿಗೊಳಿಸಲಾಗಿದೆ ಹೊರತು ಸೌಲಭ್ಯಗಳನ್ನು ಒದಗಿಸುತ್ತಿಲ್ಲ. ನಿಗಮಕ್ಕೆ ಈ ಹಿಂದೆ ಬಿಲ್‌ ಪಾವತಿ ಸೇವಾ ಕೌಂಟರ್‌ ತೆರೆಯಲು ಕೇಳಿಕೊಂಡಿದ್ದೆವು. ಆದರೆ ಸ್ಪಂದಿಸಿಲ್ಲ. ಅಬ್ದುಲ್‌ ರಹಿಮಾನ್‌, ಉಪ್ಪಿನಂಗಡಿ ಗ್ರಾ.ಪಂ, ನಿಕಟಪೂರ್ವ ಅಧ್ಯಕ್ಷ

ಇಲ್ಲಗಳ ಪಟ್ಟಿ

ಇಲ್ಲಿಯ ಶಾಖೆ ಗೋಳಿತ್ತೂಟ್ಟು, ವಳಾಲು, ಹಿರೇಬಂಡಾಡಿ, 34 ನೆಕ್ಕಿಲಾಡಿ, ಉಪ್ಪಿನಂಗಡಿ, ಕೊಯ್ಲ, ರಾಮಕುಂಜ, ಆಲಂತಾಯ, ಬಜತ್ತೂರು, ಕೊಣಾಲು ಗ್ರಾಮ ಗಳನ್ನು ಒಳಗೊಂಡಿದ್ದರೂ ಅಧಿ ಕಾರಿಗಳಿಗೆ ಸಂಚಾರಕ್ಕೆ ವಾಹನ ವ್ಯವಸ್ಥೆ ಇಲ್ಲ. ಸಬ್‌ಸ್ಟೇಶನ್‌, ಬಿಲ್‌ ಕೌಂಟರ್‌, ಸಿಬಂದಿ ಕೊರತೆ ಎದ್ದು ಕಾಣುತ್ತಿದೆ. ಉಪ್ಪಿನಂಗಡಿಗೆ ಬೆಳ್ತಂಗಡಿ ತಾಲೂಕಿನ ಕಲ್ಲೇರಿ ಸಬ್‌ಸ್ಟೇಶನ್‌ ನಿಂದ ವಿದ್ಯುತ್‌ ಒದಗಿಸಿದರೆ, 34 ನೆಕ್ಕಿಲಾಡಿ, ಹಿರೇ ಬಂಡಾಡಿಗೆ ಪುತ್ತೂರು ಮೆಸ್ಕಾಂ ಉಪ ವಿಭಾಗದಿಂದ ಸಂಪರ್ಕ. ಹೀಗೆ ಇದ್ದರೂ ತಾತ್ಕಾಲಿಕ ವ್ಯವಸ್ಥೆಯಡಿ ಉಪ್ಪಿನಂಗಡಿ ಶಾಖೆಯ ದಾಖಲೆಗಳಿಗೆ ಪುತ್ತೂರು ಕಚೇರಿಯನ್ನು ಸಂಪರ್ಕಿಸ ಬೇಕಾಗಿದ್ದು, ಗ್ರಾಹಕರಿಗೆ ಸಮಸ್ಯೆಯಾಗಿದೆ.

ಎಂ.ಎಸ್.ಭಟ್‌, ಉಪ್ಪಿನಂಗಡಿ

 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.