ಆಜಾನ್ ವಿರೋಧಿ ಹೋರಾಟ: ಸಿಎಂ ಭೇಟಿ ಮಾಡಿದ ಕಾಂಗ್ರೆಸ್ ಅಲ್ಪ ಸಂಖ್ಯಾತರ ನಿಯೋಗ
ಕೆಲ ಶಕ್ತಿಗಳಿಂದ ಅಶಾಂತಿ ಉಂಟು ಮಾಡಲು ಯತ್ನ : ಖಾದರ್
Team Udayavani, May 9, 2022, 10:30 AM IST
ಆರ್ .ಟಿ. ನಗರ : ರಾಜ್ಯದಲ್ಲಿ ಆಜಾನ್ ವಿಚಾರದಲ್ಲಿ ಶ್ರೀರಾಮ ಸೇನೆ ಸೇರಿ ಕೆಲ ಹಿಂದೂ ಪರ ಸಂಘಟನೆ ಗಳು ಹೋರಾಟಕ್ಕಿಳಿದಿರುವ ವೇಳೆ ಕಾಂಗ್ರೆಸ್ ಅಲ್ಪ ಸಂಖ್ಯಾತರ ನಿಯೋಗ ಸೋಮವಾರ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿದೆ.
ಸಿಎಂ ಭೇಟಿ ನಂತರ ಅಲ್ಪಸಂಖ್ಯಾತರ ನಿಯೋಗದ ನೇತೃತ್ವ ವಹಿಸಿದ್ದ ಯು. ಟಿ. ಖಾದರ್ ಹೇಳಿಕೆ ನೀಡಿ, ರಾಜ್ಯದಲ್ಲಿ ಬಹುತೇಕ ಎಲ್ಲ ಜನರು ಶಾಂತಿ ಸೌಹಾರ್ದತೆ ನಿರೀಕ್ಷೆ ಮಾಡುತ್ತಿದ್ದಾರೆ. ಕೆಲವೊಂದು ಶಕ್ತಿ ಗಳು ಕೆಲ ವಿಷಯ ಮುಂದಿಟ್ಟುಕೊಂಡು ಅಶಾಂತಿ ಉಂಟು ಮಾಡಲು ಯತ್ನ ಮಾಡುತ್ತಿದ್ದಾರೆ. ಸರ್ಕಾರ ಶಾಂತಿಯುತ ವಾತಾವರಣ ನಿರ್ಮಾಣ ಮಾಡಬೇಕು. ಈ ನಿಟ್ಟಿನಲ್ಲಿ ಸಿಎಂ ಜತೆ ಚರ್ಚೆ ಮಾಡಿದ್ದೇವೆ ಎಂದರು.
ಇದನ್ನೂ ಓದಿ :ವಿಜಯಪುರ ಮತ್ತು ಪಾವಗಡದಲ್ಲಿ ಆಜಾನ್ ವಿರುದ್ಧ ಭಜನ್ ಅಭಿಯಾನ
ಸಿಎಂ ಕೂಡ ಎಲ್ಲ ರೀತಿಯ ಕ್ರಮ ಕೈಗೊಳ್ಳುವ ಭರವಸೆ ಕೊಟ್ಟಿದ್ದಾರೆ. ಆಜಾನ್ ಬಗ್ಗೆ ಗೃಹ ಸಚಿವರು ಎಲ್ಲಿಯೂ ಹೇಳಿಲ್ಲ. ಆದರೆ ಶಬ್ದ ಮಾಲಿನ್ಯದ ಬಗ್ಗೆ ಕೋರ್ಟ್ ಆದೇಶದಂತೆ ಸರ್ಕಾರದ ನಿಯಮ ರೂಪಿಸಲಿದೆ. ಅದರಂತೆ ಎಲ್ಲರು ಕೂಡ ಪಾಲನೆ ಮಾಡಬೇಕು ಎಂದಿದ್ದಾರೆ ಎಂದು ಖಾದರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ
ICSE: ರಾಜ್ಯದ ವಿದ್ಯಾರ್ಥಿಗಳಿಗೆ ಶೇ. 99 ಮೀರಿದ ಫಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ
Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ
ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ
Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Manipal ಖಾಸಗಿ ಬಸ್ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು
T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್ ಗೆಲುವು: 4-0 ಮುನ್ನಡೆ
Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ
Pakistan ಟಿ20 ವಿಶ್ವಕಪ್ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್ ಬಹುಮಾನ
Table Tennis Star; ಬಾಳ್ವೆಯ ದೊಡ್ಡ ಗೆಲುವು ದಾಖಲಿಸಿದ ಮನಿಕಾ ಬಾತ್ರ