ಪಂಪ್‌ವೆಲ್‌ ಫ್ಲೈ ಓವರ್‌ ಕೆಳಭಾಗ ಸುಂದರಗೊಳಿಸಲು ನಿರ್ಧಾರ


Team Udayavani, May 9, 2022, 11:56 AM IST

fly-over

ಪಂಪ್‌ವೆಲ್‌: ನಗರದ ಮಹತ್ವದ ಪಂಪ್‌ವೆಲ್‌ ಫ್ಲೈ ಓವರ್‌ನ ಕೆಳಭಾಗವನ್ನು ಆಕರ್ಷಣೀಯವಾಗಿ ರೂಪಿಸುವ ಮಹತ್ವದ ಯೋಜನೆ ಕೆಲವೇ ದಿನಗಳಲ್ಲಿ ಸಾಕಾರವಾಗಲಿದೆ.

ಪ್ರತಿಷ್ಠಿತ ಕರ್ಣಾಟಕ ಬ್ಯಾಂಕ್‌ ವತಿಯಿಂದಲೇ ಫ್ಲೈ ಓವರ್‌ನ ಕೆಳಭಾಗದಲ್ಲಿ ಆಕರ್ಷಣೀಯ ಯೋಜನೆ ರೂಪಿಸಲು ಈಗಾಗಲೇ ನಿರ್ಧರಿ ಸಲಾಗಿದೆ. ಇದರ ಪೂರ್ವಭಾವಿಯಾಗಿ ಫ್ಲೈ ಓವರ್‌ ನ ಕೆಳಭಾಗದಲ್ಲಿ ಮಣ್ಣು ಹಾಕಿ ಸಮತಟ್ಟು ಮಾಡುವ ಕಾಮಗಾರಿ ನಡೆಸಲಾಗಿದೆ. ಮುಂದೆ ಪೂರ್ಣವಾಗಿ ಸಮತಟ್ಟು ಮಾಡಿದ ಅನಂತರ ಹಸುರೀಕರಣದ ಮುಖೇನ ಫ್ಲೈ ಓವರ್‌ನ ಕೆಳಭಾಗ ಸುಂದರಗೊಳಿಸಲಾಗಿದೆ. ಈಗಾಗಲೇ ಫ್ಲೈ ಓವರ್‌ನ ಪೂರ್ಣ ಗೋಡೆಯನ್ನು ಕರ್ಣಾಟಕ ಬ್ಯಾಂಕ್‌ ವತಿಯಿಂದ ಸುಂದರಗೊಳಿಸಲಾಗಿದೆ. ಕರ್ಣಾಟಕ ಬ್ಯಾಂಕ್‌ ವತಿ ಯಿಂದ ಫ್ಲೈ ಓವರ್‌ ಕೆಳಭಾಗದ ರಸ್ತೆಯ ನಾಲ್ಕೂ ಬದಿಯಲ್ಲಿ ಹೂಕುಂಡಗಳ ಮೂಲಕ ಅಲಂಕಾರ ಮಾಡಲಾಗುತ್ತದೆ. ಇದರ ಮಧ್ಯಭಾಗದಲ್ಲಿ ಎತ್ತರವಾಗಿ ಮಣ್ಣು ಹಾಕಿ ಹಸುರೀಕರಣದೊಂದಿಗೆ ಸುಂದರಗೊಳಿಸಲಾಗುತ್ತದೆ. ಫ್ಲೈ ಓವರ್‌ನ ಪಿಲ್ಲರ್‌ಗಳಲ್ಲಿ ಆಕರ್ಷಣೀಯ ಚಿತ್ರದ ಮೂಲಕ ಗಮನಸೆಳೆ ಯುವಂತೆ ಮಾಡಲಾಗುತ್ತದೆ. ಈ ಮೂಲಕ ಪಂಪ್‌ವೆಲ್‌ ಫ್ಲೈ ಓವರ್‌ ಪ್ರದೇಶ ಆಕರ್ಷಣೀಯ ಸ್ಥಳವಾಗಿ ರೂಪುಗೊಳ್ಳಲಿದೆ ಎನ್ನುತ್ತಾರೆ ಮೇಯರ್‌ ಪ್ರೇಮಾನಂದ ಶೆಟ್ಟಿ.

ಕೇರಳ ಸಹಿತ ದೇಶದ ವಿವಿಧ ಭಾಗಗಳಿಂದ ನಗರ ಪ್ರವೇಶಕ್ಕೆ ಬಹುಮುಖ್ಯ ಸ್ಥಳ ಪಂಪ್‌ವೆಲ್‌ ಫ್ಲೈ ಓವರ್‌. ಆದರೆ ಫ್ಲೈ ಓವರ್‌ ಕೆಳಭಾಗ ಮಾತ್ರ ನಿರ್ವಹಣೆಯ ಕೊರತೆ ಎದುರಿಸುತ್ತಿತ್ತು. ನಿರಾಶ್ರಿತರ ತಾಣವಾಗಿ ಬದಲಾಗಿತ್ತು. ಗಲೀಜು ಮಾಡಲಾಗುತ್ತಿತ್ತು. ನಗರ ಪ್ರವೇಶಿಸುವವರಿಗೆ ಇಲ್ಲಿನ ಅಸ್ತವ್ಯಸ್ತ ವ್ಯವಸ್ಥೆಗಳನ್ನು ಕಂಡು ಗಲಿಬಿಲಿಗೊಂಡಿದ್ದರು. ಜತೆಗೆ ಸುತ್ತಲೂ ಫ್ಲೆಕ್ಸ್‌ ಗಳೇ ಇಲ್ಲಿ ತುಂಬಿಕೊಂಡಿದ್ದವು. ಇದೆಲ್ಲದಕ್ಕೆ ಪರಿಹಾರವೆಂಬಂತೆ ಇದೀಗ ಸುಂದರಗೊಳಿಸುವ ಮಹತ್ವದ ಯೋಜನೆ ಸಾಕಾರವಾಗುತ್ತಿರುವುದು ಸ್ಥಳೀಯರಲ್ಲಿ ಹರ್ಷ ಮೂಡಿಸಿದೆ.

ನಗರದ ಉಳಿದ ಫ್ಲೈ ಓವರ್‌ ಕೆಳಗೂ ಅವಕಾಶವಿದೆ!

ಫ್ಲೈ ಓವರ್‌ ಕೆಳಭಾಗ ಚೆಲುವಿಗೆ ಭೂಷಣವಾಗಲಿ’ ಎಂಬ ಶೀರ್ಷಿಕೆಯಲ್ಲಿ ಎ. 5ರಂದು ‘ಉದಯವಾಣಿ ಸುದಿನ’ ಫೋಟೋ ಸ್ಟೋರಿ ಪ್ರಕಟಿಸಿತ್ತು. ಪಂಪ್‌ ವೆಲ್‌, ತೊಕ್ಕೊಟ್ಟು, ಕುಂಟಿಕಾನ, ಕುಲಶೇಖರ ಫ್ಲೈ ಓವರ್‌ ಕೆಳಭಾಗವನ್ನು ಅಭಿವೃದ್ಧಿಪಡಿಸಲು ಅವಕಾಶವಿದೆ ಎಂದು ವರದಿಯಲ್ಲಿ ಉಲ್ಲೇಖೀಸಲಾಗಿತ್ತು. ಸದ್ಯ ಪಂಪ್‌ವೆಲ್‌ ಸುಂದರೀಕರಣಕ್ಕೆ ತೆರೆದುಕೊಂಡಿದ್ದು, ಉಳಿದ ಫ್ಲೈ ಓವರ್‌ನ ಕೆಳಭಾಗದಲ್ಲಿಯೂ ಸುಂದರಗೊಳಿಸಲು ಅವಕಾಶಗಳಿವೆ.

ಟಾಪ್ ನ್ಯೂಸ್

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.