ಬಿದ್ದ ಬಿಎಸ್‌ಎನ್‌ಎಲ್‌ ಟವರ್‌: ಶಾಲಾ ಕಟ್ಟಡಕ್ಕೆ ಆತಂಕ


Team Udayavani, May 9, 2022, 4:11 PM IST

schol-building

ಸಾಗರ: ತಾಲೂಕಿನ ಹಕ್ರೆಯಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯ ಛಾವಣಿ ಮೇಲೆ ಬಿಎಸ್‌ ಎನ್‌ಎಲ್‌ ಟವರ್‌ ತೆರವು ಕಾರ್ಯಕ್ಕೆ ಬಿಎಸ್‌ಎನ್‌ ಎಲ್‌ ವಿಳಂಬ ಮಾಡುತ್ತಿದ್ದು, ಶೀಘ್ರ ತೆರವು ಕಾರ್ಯ ಮಾಡಬೇಕಿದೆ. ಈ ನಡುವೆ ತೆರವು ವಿಳಂಬವಾಗುವುದರಿಂದ ಶಾಲೆಯೊಳಗಿನ ಹಳೆಯ ದಾಖಲೆಗಳು ಬೀಳುತ್ತಿರುವ ಹಳೆಯ ಮಳೆಗೆ ನಾಶವಾಗುವ ಅಪಾಯ ಎದುರಾಗಿದೆ.

ಟವರ್‌ ಬಿದ್ದು ಮೂರು ದಿನ ಕಳೆದರೂ ತೆರವು ಕಾರ್ಯಕ್ಕೆ ನಿರ್ಲಕ್ಷ್ಯ ವಹಿಸುವ ಜತೆಗೆ ಈ ಭಾಗದಲ್ಲಿನ ದೂರವಾಣಿ ಸಂಪರ್ಕ ಸಮಸ್ಯೆ ಬಗೆಹರಿಸಲು ಆಸಕ್ತಿ ತೋರಿಸುತ್ತಿಲ್ಲ ಎಂದು ಸ್ಥಳೀಯರು ಆಕ್ಷೇಪಿಸಿದ್ದಾರೆ.

ಶಾಲೆಗೆ ರಜೆ ಇರುವ ಹಿನ್ನೆಲೆಯಲ್ಲಿ ತರಗತಿ ನಡೆಸುವ ಸಮಸ್ಯೆ ಇಲ್ಲ. ಆದರೆ ಟವರ್‌ ಬಿದ್ದ ಹಿನ್ನೆಲೆಯಲ್ಲಿ ಹೆಂಚುಗಳು ಒಡೆದಿದ್ದು, ಮಳೆ ನೀರಿನಿಂದಾಗಿ ಕೋಣೆಯೊಳಗಿನ ವಸ್ತುಗಳು, ಪೀಠೊಪಕರಣ, ಸಲಕರಣೆಗಳು ಹಾಳಾಗುವ ಸಾಧ್ಯತೆಗಳಿವೆ. ಟವರ್‌ ತೆರವುಗೊಳಿಸದೆ ಶಾಲೆಗೆ ಸಂಬಂಧಪಟ್ಟವರು ಒಳಪ್ರವೇಶ ಮಾಡಲು ಸಾಧ್ಯವಿಲ್ಲ. ಪೂರ್ವ ಪ್ರಾಥಮಿಕದಲ್ಲಿ 11 ಹಾಗೂ ಒಂದರಿಂದ 5ನೆಯ ತರಗತಿ ವರೆಗೆ 11 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ಅಭ್ಯಾಸ ಮಾಡುತ್ತಿದ್ದು, ಓರ್ವ ಶಿಕ್ಷಕರು ಕರ್ತವ್ಯದಲ್ಲಿದ್ದಾರೆ. ಟವರ್‌ ಬಿದ್ದ ಸಂಬಂಧ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮೂಲಕ ಬಿಎಸ್‌ಎನ್‌ಎಲ್‌ ಅಧಿಕಾರಿಗಳಿಗೆ ತೆರವು ಕಾರ್ಯಕ್ಕೆ ಕೋರಲಾಗಿದೆ. ತಾಪಂ ಅಧಿಕಾರಿಗಳಿಗೆ, ಗ್ರಾಪಂ ಉಪಾಧ್ಯಕ್ಷರಿಗೆ, ಪಿಡಿಒಗೆ ಸಹ ಶಿಕ್ಷಕರು ಮಾಹಿತಿ ನೀಡಿದ್ದಾರೆ. ವಾಲಿರುವ ಟವರ್‌ ಇನ್ನೂ ಶಾಲೆಯ ಛಾವಣಿಗೆ ಆತುಕೊಂಡಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಹಾನಿಯಾಗುವ ಸಾಧ್ಯತೆ ಸಹ ಇದೆ. ಶೀಘ್ರ ತೆರವು ಕಾರ್ಯಕ್ಕೆ ಬಿಎಸ್‌ಎನ್‌ಎಲ್‌ ಮನಸ್ಸು ಮಾಡಬೇಕಾಗಿದೆ.

ಯಡಜಿಗಳೇಮನೆ ಗ್ರಾಪಂ ವ್ಯಾಪ್ತಿಯ ಹಕ್ರೆ, ವರದಹಳ್ಳಿ, ಕರ್ಕಿಕೊಪ್ಪ ಮತ್ತಿತರ ಆಸುಪಾಸಿನ ಗ್ರಾಮಗಳಲ್ಲಿ ಮೊಬೈಲ್‌ ಸಂಪರ್ಕ ಸಾಧ್ಯವಾಗುತ್ತಿಲ್ಲ. ಬಿಎಸ್‌ಎನ್‌ಎಲ್‌ ಅಧಿಕಾರಿಗಳು ಶೀಘ್ರ ದುರಸ್ತಿ ಕಾರ್ಯ ನಿರ್ವಹಿಸಲು ಸ್ಥಳೀಯರು ಆಗ್ರಹಿಸಿದ್ದಾರೆ.

ಶಾಲೆಯ ಮೇಲೆ ಟವರ್‌ ಬಿದ್ದ ಬಗ್ಗೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಮೇ 9ರಂದು ತೆರವು ಕಾರ್ಯ ನಡೆಸುವ ಸಾಧ್ಯತೆ ಇದೆ. ಟವರ್‌ ತೆರವು ಹಾಗೂ ಹೆಂಚು ಹಾಕಿಸುವ ಸಂಬಂಧ ಸದ್ಯ ಕೆಲಸ ಮಾಡಲಾಗುವುದು. ಸಂಪರ್ಕ ವ್ಯವಸ್ಥೆ ಸರಿಪಡಿಸಲು ಹೊಸ ಟವರ್‌ ಸ್ಥಾಪಿಸಬೇಕಾಗಿದೆ ಎಂದು ಬಿಎಸ್‌ಎನ್‌ಎಲ್‌ನ ಸ್ಥಳೀಯ ನಿರ್ವಾಹಕ ಅರುಣ್‌ ತಿಳಿಸುತ್ತಾರೆ. ಆದರೆ ಟವರ್‌ ತೆಗೆಯಲು ಇನ್ನೂ ಒಂದು ವಾರ ಬೇಕಾಗಿದ್ದು ಬಿಎಸ್‌ಎನ್‌ಎಲ್‌ನಲ್ಲಿ ಬಜೆಟ್‌ ಕಾರಣದಿಂದ ವಿಳಂಬವಾಗಲಿದೆ. ಹೊಸ ಟವರ್‌ ನಿರ್ಮಾಣ ಕೂಡ ತಡವಾಗಲಿದೆ ಎಂದು ಬಿಎಸ್‌ ಎನ್‌ಎಲ್‌ ಮೂಲಗಳು ತಿಳಿಸಿವೆ.

ಟವರ್‌ ಶಾಲೆಯ ಛಾವಣೆಯ ಮೇಲೆ ಬಿದ್ದ ಮಾಹಿತಿಯನ್ನು ಶಿಕ್ಷಣಾಧಿಕಾರಿ ಕಚೇರಿ ಮೂಲಕ ಬಿಎಸ್‌ಎನ್‌ಎಲ್‌ಗೆ ನೀಡಲಾಗಿದೆ. ಟವರ್‌ ತೆಗೆಯದೇ ಶಾಲಾ ಕಟ್ಟಡ ಒಳಗೆ ಹೋಗಲು ಸಾಧ್ಯವಿಲ್ಲ. ಸ್ಥಳೀಯ ಗ್ರಾಪಂಗೆ ಸಹ ಮಾಹಿತಿ ನೀಡಲಾಗಿದೆ. ಶೀಘ್ರವಾಗಿ ಟವರ್‌ ತೆರವು ಮಾಡಿಕೊಡಬೇಕಾಗಿದೆ. -ಶಿಕ್ಷಕರು, ಸರಕಾರಿ ಪ್ರಾಥಮಿಕ ಶಾಲೆ ಹಕ್ರೆ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.