ಅಪಘಾತ ವಲಯವಾದ ಕುಂಟಿಕಾನ: ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ ಕಾರಣ?

ವಾಹನ ಚಾಲಕರಿಗೆ ಗೊಂದಲ; ಪಾದಚಾರಿಗಳಿಗೂ ಅಪಾಯ

Team Udayavani, May 10, 2022, 11:33 AM IST

kuntikana

ಕುಂಟಿಕಾನ: ರಾಷ್ಟ್ರೀಯ ಹೆದ್ದಾರಿ 66ರ ಕುಂಟಿಕಾನ ಪರಿಸರದಲ್ಲಿ ಪ್ರತಿನಿತ್ಯವೆಂಬಂತೆ ಅಪಘಾತಗಳು ಸಂಭವಿಸುತ್ತಿದ್ದು, ಆತಂಕ ಮೂಡಿಸಿದೆ.

ಮುಖ್ಯವಾಗಿ ಕುಂಟಿಕಾನದ ಕದ್ರಿ ಅಗ್ನಿಶಾಮಕ ಠಾಣೆಯ ಎದು ರಿನಲ್ಲಿ ಹಾದು ಹೋಗುವ ಹೆದ್ದಾರಿಯ ಭಾಗ ಅಪಘಾತ ವಲಯವಾಗಿ ಗುರುತಿಸಿಕೊಳ್ಳುತ್ತಿದೆ. ಇಲ್ಲಿ ಹೆದ್ದಾರಿ ತಗ್ಗಿನಿಂದ ಕೂಡಿರುವುದೇ ಅಪಘಾತಕ್ಕೆ ಪ್ರಮುಖ ಕಾರಣ ಎಂಬುದು ಕಂಡು ಬರುತ್ತಿದೆ. ಕೆಪಿಟಿ ಮತ್ತು ಕೊಟ್ಟಾರಚೌಕಿ ಕಡೆಯಿಂದ ಬರುವ ವಾಹನಗಳು ಎತ್ತರದಿಂದ ತಗ್ಗಾದ ಕಡೆಗೆ ಅತ್ಯಂತ ವೇಗವಾಗಿ ಧಾವಿಸುತ್ತವೆ. ಆಗ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗುತ್ತವೆ.

ಈ ಭಾಗದ ಹೆದ್ದಾರಿಯ ಇಕ್ಕೆಲಗಳಲ್ಲಿ ಸರ್ವಿಸ್‌ ರಸ್ತೆ ಇದೆ. ಆದರೆ ಸರ್ವಿಸ್‌ ರಸ್ತೆ ಆರಂಭ/ ಕೊನೆಗೊಳ್ಳುವ ಸ್ಥಳದಲ್ಲಿ ಯಾವುದೇ ಸೂಚನ ಫ‌ಲಕಗಳು ಇಲ್ಲ. ಹಾಗಾಗಿ ವಾಹನಗಳ ಚಾಲಕರು ಗೊಂದಲಕ್ಕೀಡಾಗಿ ಏಕಾಏಕಿ ಬ್ರೇಕ್‌ ಹಾಕುತ್ತಾರೆ. ಇದರಿಂದಾಗಿಯೂ ಅಪಘಾತಗಳು ಸಂಭವಿಸುತ್ತಿವೆ. ಪಾದಚಾರಿಗಳು ರಸ್ತೆ ದಾಟುವುದು ಕೂಡ ಇಲ್ಲಿ ತುಂಬಾ ಅಪಾಯಕಾರಿಯಾಗಿದೆ. ಈ ಹಿಂದೆ ಇಲ್ಲಿ ಡೈವರ್ಷನ್‌ ಇತ್ತು. ಆಗ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದವು. ಡೈವರ್ಷನ್‌ನ್ನು ಮುಚ್ಚಿರುವುದರಿಂದ ಅಪಘಾತಗಳ ಸಂಖ್ಯೆ ಈ ಹಿಂದಿಗಿಂತ ಸ್ವಲ್ಪ ಕಡಿಮೆಯಾಗಿದೆಯಾದರೂ ಆಗಾಗ್ಗೆ ಅಪಘಾತಗಳು ನಡೆಯುತ್ತಲೇ ಇವೆ. ಈ ಸ್ಥಳ ಅಪಾಯಕಾರಿ ಎಂದು ಸೂಚಿಸುವ ರೆಡ್‌ ಸಿಗ್ನಲ್‌ ಲೈಟ್‌ ಅನ್ನು ಇಲ್ಲಿ ಅಳವಡಿಸಲಾಗಿದೆ. ಆದರೆ ವಾಹನ ಸವಾರರು, ಚಾಲಕರು ಇದನ್ನು ಗಮನಿಸಿ ವಾಹನದ ವೇಗ ತಗ್ಗಿಸುವುದಿಲ್ಲ ಎನ್ನುತ್ತಾರೆ ಸ್ಥಳೀಯರು.

ಅಗ್ನಿಶಾಮಕ ಠಾಣೆಯ ಎದುರೇ ಈ ‘ಆ್ಯಕ್ಸಿಡೆಂಟ್‌ ಸ್ಪಾಟ್‌’ ಇದೆ. ಅಪಘಾತ ನಡೆದರೆ ಅಗ್ನಿಶಾಮಕ ಸಿಬಂದಿ ಹಗಲು ರಾತ್ರಿಯೆನ್ನದೆ ಜೀವ ಉಳಿಸಲು ಮುಂದಾಗುತ್ತಿದ್ದಾರೆ. ಇತ್ತೀಚೆಗೆ ನಡೆದ ಅಪಘಾತದಲ್ಲಿ ಅಗ್ನಿಶಾಮಕ ದಳ ಓರ್ವ ಸಿಬಂದಿಯೇ ಮೃತಪಟ್ಟಿದ್ದರು.

ಪರಿಹಾರವೇನು?

ಹೆದ್ದಾರಿ ನಿರ್ಮಾಣ ಅಸಮರ್ಪಕವಾಗಿರುವುದರಿಂದಲೇ ಅಪಘಾತಗಳು ಇಲ್ಲಿ ಹೆಚ್ಚಾಗಿ ಸಂಭವಿಸುತ್ತಿವೆ ಎಂಬುದು ಸ್ಥಳೀಯರ ಅಭಿಪ್ರಾಯ. ವಾಹನಗಳ ವೇಗದ ಮಿತಿಯನ್ನು ಕಡಿಮೆ ಮಾಡಿಸುವುದು ಸದ್ಯಕ್ಕೆ ಇರುವ ಪರಿಹಾರ. ಅದಕ್ಕಾಗಿ ಬ್ಯಾರಿಕೇಡ್‌ಗಳನ್ನು ಅಳವಡಿಸಬಹುದು ಅಥವಾ ವೈಜ್ಞಾನಿಕ ರೀತಿಯ ಹಂಪ್ಸ್‌ ಹಾಕಬಹುದು. ವಾಹನ ಸವಾರರು, ಚಾಲಕರ ಗಮನ ಸೆಳೆಯುವಂತಹ ರೀತಿಯಲ್ಲಿ ಮುನ್ನೆಚ್ಚರಿಕೆ ಫ‌ಲಕಗಳನ್ನು ಅಳವಡಿಸ ಬಹುದು ಎಂದು ಸ್ಥಳೀಯ ವಾಹನ ಚಾಲಕರು ಸಲಹೆ ನೀಡಿದ್ದಾರೆ.

-ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

1–wwqaeeq

Mangaluru; ಮಂಗಳಾ ಕಪ್‌ ಓಪನ್‌ ಬ್ಯಾಡ್ಮಿಂಟನ್‌ ಕೂಟಕ್ಕೆ ಚಾಲನೆ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

1-weewewq

Punjab ಅಭಿಮಾನಿಗಳ ಕ್ಷಮೆ ಕೋರಿದ ನಾಯಕ ಸ್ಯಾಮ್‌ ಕರನ್‌

1-wqeqewqewq

Tennis; ಇದೇ ಕೊನೆಯ ಸೀಸನ್‌:ಡೊಮಿನಿಕ್‌ ಥೀಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.