2ಎ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ
ನಿರ್ಲಕ್ಷಿಸಿದರೆ ಸರ್ಕಾರದ ಮೇಲೆ ಪ್ರತಿಕೂಲ ಪರಿಣಾಮ
Team Udayavani, May 10, 2022, 4:32 PM IST
ಯಲಬುರ್ಗಾ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಹಕ್ಕೊತ್ತಾಯಿಸಿ ಸೋಮವಾರ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಮುಖಂಡರು ಸ್ಥಳೀಯ ಪಟ್ಟಣದ ಚನ್ನಮ್ಮ ವೃತ್ತದಲ್ಲಿ ಚನ್ನಮ್ಮ ಪುತ್ಥಳಿಗೆ ಮಾರ್ಲಾಪಣೆ ಮಾಡಿ ನಂತರ ತಹಶೀಲ್ದಾರ್ ಕಚೇರಿವರೆಗೆ ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಸಿದರು.
ಪಂಚಮಸಾಲಿ ಸಮಾಜದ ಹಿರಿಯ ಮುಖಂಡ ಬಸವಲಿಂಗಪ್ಪ ಭೂತೆ ಮಾತನಾಡಿ, ಪಂಚಮಸಾಲಿ ಸಮಾಜದ ಮಕ್ಕಳ ಶಿಕ್ಷಣ, ಯುವ ಜನರ ಉದ್ಯೋಗ, ಮಹಿಳೆಯರ ಕಲ್ಯಾಣ, ರೈತ ಕಾರ್ಮಿಕರ ಅಭ್ಯುದಯ ಸೇರಿದಂತೆ ಸರ್ವರ ಏಳ್ಗೆಗಾಗಿ ನಡೆದ ಐತಿಹಾಸಿಕ ಬೆಂಗಳೂರು ಪಾದಯಾತ್ರೆ ಮಾಡಿದರು ಇದುವರೆಗೂ ನಮ್ಮ ಭರವಸೆ ಈಡೇರಿಲ್ಲ. ಸಮಾಜದ ಬಹುದಿನದ ಬೇಡಿಕೆಯಾದ 2ಎ ಮೀಸಲಾತಿ ಸೌಲಭ್ಯ ಒದಗಿಸಿಕೊಡುವಂತೆ ಈ ಹಿಂದೆ ಸಾಕಷ್ಟು ಬಾರಿ ಹೋರಾಟ ಮಾಡಿ ಮನವಿ ಸಲ್ಲಿಸಿದರೂ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದನೆ ಮಾಡುತ್ತಿಲ್ಲ. ಸಮಾಜಕ್ಕೆ ನ್ಯಾಯ ಒದಗಿಸಿ ಕೊಡುವ ಪ್ರಯತ್ನ ಮಾಡುತ್ತಿಲ್ಲ. ಪದೇ ಪದೆ ಮೀಸಲಾತಿ ಒದಗಿಸಿ ಕೊಡುವ ವಿಷಯದಲ್ಲಿ ವಿಳಂಬ ನೀತಿ ಅನುಸರಿಸಿದರೆ ಮುಂದಿನ ದಿನಮಾನಗಳಲ್ಲಿ ಸರ್ಕಾರದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಆಗ್ರಹಿಸಿದರು.
ಜಿಪಂ ಮಾಜಿ ಸದಸ್ಯ ಸಿ.ಎಚ್. ಪೊಲೀಸ ಪಾಟೀಲ ಮಾತನಾಡಿ, ರಾಜ್ಯಾದ್ಯಂತ ಎಂಬತ್ತು ಲಕ್ಷಕ್ಕಿಂತಲೂ ಅಧಿಕವಾಗಿರುವ ಪಂಚಮಸಾಲಿ ಸಮಾಜ ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ, ತೀರಾ ಹಿಂದುಳಿದಿದೆ. ಆದ್ದರಿಂದ ಸರ್ಕಾರ ಕೂಡಲೇ 2ಎ ಮೀಸಲಾತಿ ನೀಡಬೇಕು. ನಮ್ಮ ಹಕ್ಕು ನ್ಯಾಯಯುತವಾಗಿದೆ ಎಂದರು. ಮುಖಂಡ ವೀರಣ್ಣ ಹುಬ್ಬಳ್ಳಿ ಮಾತನಾಡಿ, ಸಮುದಾಯ ಕೃಷಿಯನ್ನೇ ನೆಚ್ಚಿ ಬದುಕು ಸಾಗಿಸುತ್ತಿದೆ. ಸರಕಾರ ಸಮುದಾಯದ ಬೇಡಿಕೆಯನ್ನು ತ್ವರಿತಗತಿಯಲ್ಲಿ ಈಡೇರಿಸಬೇಕು. ಸಮುದಾಯ ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದಿದೆ. ಇಂದಿಗೂ ನಮ್ಮ ಸಮಾಜ ಬಡತನದಲ್ಲಿ ಬೆಂದು ಬರಡಾಗಿದೆ. ತಾಲೂಕು ಅಧ್ಯಕ್ಷ ಕೆ.ಜಿ. ಪಲ್ಲೇದ, ಕಾರ್ಯದರ್ಶಿ ರಾಜಶೇಖರ ನಿಂಗೋಜಿ, ಶೇಖರಗೌಡ ಉಳ್ಳಾಗಡ್ಡಿ, ಸುರೇಶಗೌಡ ಶಿವನಗೌಡ್ರ ಮಾತನಾಡಿದರು.
ಸ. ಶರಣಪ್ಪ ಪಾಟೀಲ್ ಕರಮುಡಿ, ಶರಣಪ್ಪ ಗಾಂಜಿ, ಆನಂದ ಉಳ್ಳಾಗಡ್ಡಿ, ಸಿದ್ಧರಾಮೇಶ ಬೆಲೇರಿ, ಸಂಗಪ್ಪ ರಾಮತ್ನಾಳ, ಶಿವಕುಮಾರ ನಾಗನಗೌಡ್ರ, ರಾಜಶೇಖರ ಶ್ಯಾಗೋಟಿ, ಕಳಕೇಶ ಅರಕೇರಿ, ಮಹೇಶ ಭೂತೆ, ಶರಣಪ್ಪ ರಾಂಪೂರ, ಪಪಂ ಅಧ್ಯಕ್ಷ ಅಮರೇಶ ಹುಬ್ಬಳ್ಳಿ, ಶರಣಪ್ಪ ಕೊಟಗಿ, ನೀಲನಗೌಡ ತಳವಗೇರಿ, ಡಾ| ಶರಣಪ್ಪ ಕೊಪ್ಪಳ, ಮಹೇಶ ಭೂತೆ, ಶರಣಪ್ಪ, ಬಸವರಾಜ ಚಿತ್ತರಗಿ, ಶರಣಪ್ಪ ಗೋಣಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
MUST WATCH
ಹೊಸ ಸೇರ್ಪಡೆ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ