ಕಾಂಗ್ರೆಸ್ನಿಂದ ಬಿಜೆಪಿಗೆ ಪಕ್ಷಾಂತರ ಮಾಡಿದ್ದ ಇಬ್ಬರು ಪುರಸಭೆ ಸದಸ್ಯರ ಸದಸ್ಯತ್ವ ಅನರ್ಹ
Team Udayavani, May 11, 2022, 11:36 AM IST
ಕುಷ್ಟಗಿ: ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಪಕ್ಷಾಂತರ ಮಾಡಿದ್ದ ಇಬ್ಬರು ಪುರಸಭೆ ಸದಸ್ಯರ ಸದಸ್ಯತ್ವವನ್ನು ಪಕ್ಷಾಂತರ ನಿಷೇಧ ಕಾಯ್ದೆ ಅಡಿ ಅನರ್ಹಗೊಳಿಸಲಾಗಿದೆ.
23 ಸದಸ್ಯ ಬಲದ ಕುಷ್ಟಗಿ ಪುರಸಭೆಗೆ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ 12, ಬಿಜೆಪಿ 8 ಹಾಗೂ ಇಬ್ಬರು ಪಕ್ಷೇತರರು ಹಾಗೂ ಓರ್ವ ಅಭ್ಯರ್ಥಿ ಅವಿರೋಧ ಅಯ್ಕೆಯಾಗಿದ್ದರು. ಕಾಂಗ್ರೆಸ್ ಗೆ ಅಧಿಕಾರದ ಗದ್ದುಗೆಗೇರುವ ಅರ್ಹತೆ ಇದ್ದರೂ, ಕಾಂಗ್ರೆಸ್ ನ ಇಬ್ಬರು ಸದಸ್ಯರಾದ 17ನೇ ವಾರ್ಡ್ ಸದಸ್ಯ ವೀರೇಶಗೌಡ ಬೆದವಟ್ಟಿ ಹಾಗೂ 3ನೇ ವಾರ್ಡ್ ಸದಸ್ಯೆ ಗೀತಾ ತುರಕಾಣಿ ಬಿಜೆಪಿಗೆ ಬೆಂಬಲಿಸಿದ್ದರು.
ಈ ಬೆಳವಣಿಗೆಯಿಂದ ಎರಡನೇ ಸ್ಥಾನದಲ್ಲಿದ್ದ ಬಿಜೆಪಿ ತನ್ನ 8 ಸದಸ್ಯರು, ಇಬ್ಬರು ಪಕ್ಷೇತರರು ಹಾಗೂ ಅವಿರೋಧ ಆಯ್ಕೆಯಾಗಿದ್ದ ಒಬ್ಬರು ಸೇರಿದಂತೆ ಮೂವರು ಹಾಗೂ ಇಬ್ಬರು ಕಾಂಗ್ರೆಸ್ ಬೆಂಬಲಿತರೊಂದಿಗೆ 13 ಸದಸ್ಯ ಬಲದೊಂದಿಗೆ ಅಧ್ಯಕ್ಷ ಚುನಾವಣೆಯಲ್ಲಿ ಗೆದ್ದು ಗಂಗಾಧರಸ್ವಾಮಿ ಹಿರೇಮಠ ಗದ್ದುಗೆ ಅಲಂಕರಿಸಿದ್ದರು. ಈ ವೇಳೆ ಕಾಂಗ್ರೆಸ್ ಪಕ್ಷದ ವಿಪ್ ಉಲ್ಲಂಘಿಸಿ ಸ್ವಪಕ್ಷೀಯರಿಗೆ ಮುಖ ಭಂಗ ಮಾಡಿದ್ದ ಇಬ್ಬರು ಪಕ್ಷಾಂತರಿ ಸದಸ್ಯರ ವಿರುದ್ದ ಪಕ್ಷಾಂತರ ನಿಷೇಧ ಕಾಯ್ದೆ ಅಡಿ, ಸದರಿ ಸದಸ್ಯರ ಸದಸ್ಯತ್ವ ರದ್ದತಿಗೆ ಅರ್ಜಿ ಸಲ್ಲಿಸಿದ್ದರು.
ಜಿಲ್ಲಾಧಿಕಾರಿಗಳು ಈ ಕುರಿತಂತೆ ಸುದೀರ್ಘ ವಿಚಾರಣೆ ನಡೆಸಿ ಪುರಸಭೆ ಸದಸ್ಯ ವೀರೇಶಗೌಡ ಬೆದವಟ್ಟಿ, ಗೀತಾ ತುರಕಾಣಿ ಸದಸ್ಯತ್ವನ್ನು ಅನರ್ಹಗೊಳಿಸಿದ್ದಾರೆ. ಈ ಬೆಳವಣಿಗೆಯಿಂದ ಬಿಜೆಪಿ ಸದಸ್ಯ ಬಲ 11ಕ್ಕೆ ಕುಗ್ಗಿದಂತಾಗಿದೆ.
ಇದನ್ನೂ ಓದಿ:ಸಂಪುಟ ವಿಸ್ತರಣೆ: ಅಮಿತ್ ಶಾ ಭೇಟಿಯಾಗಲು ಸಿಎಂಗೆ ಅವಕಾಶ
ಪುರಸಭೆ ಅನರ್ಹ ಸದಸ್ಯ ವೀರೇಶಗೌಡ ಬೆದವಟ್ಟಿ ಪ್ರತಿಕ್ರಿಯಿಸಿ ಸದಸ್ಯತ್ವ ರದ್ದತಿ ಆದೇಶ ಪ್ರಶ್ನಿಸಿ ತಡೆಯಾಜ್ಞೆಗೆ ಧಾರವಾಡದಲ್ಲಿರುವ ಹೈ ಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ
Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್
ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್ ತಂಗಡಗಿ
Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…