ಮೀಸಲಿಗಾಗಿ 20ರಂದು ರಾಜ್ಯಾದ್ಯಂತ ಹೋರಾಟ
Team Udayavani, May 11, 2022, 11:52 AM IST
ಕಲಬುರಗಿ: ಬೆಂಗಳೂರಿನಲ್ಲಿ ಕಳೆದ 90 ದಿನಗಳಿಂದ ಎಸ್ಸಿ,ಎಸ್ಟಿ ಮೀಸಲಾತಿಗೆ ಒತ್ತಾಯಿಸಿ ನಡೆಯುತ್ತಿರುವ ಶ್ರೀ ಪ್ರಸನ್ನಾನಂದಪುರಿ ಮಹಾ ಸ್ವಾಮೀಜಿಗಳ ಧರಣಿ ಕುರಿತು ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ ಖಂಡಿಸಿ ಮೇ 20ರಂದು ರಾಜ್ಯವ್ಯಾಪಿ ಹೋರಾಟ ನಡೆಸಲು ಮಂಗಳವಾರ ನಗರದಲ್ಲಿ ನಡೆದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು.
ಬಂಜಾರಾ, ಮಾದಿಗ, ಚಲವಾದಿ, ಭೋವಿ ಸಮಾಜಗಳ ಮುಖಂಡರು ಸಭೆಯಲ್ಲಿ ಭಾಗಿಯಾಗಿ ಸರ್ಕಾರದ ನಡೆ ಕುರಿತು ಖಂಡಿಸಿದರು. 90 ದಿನಗಳಿಂದ ಧರಣಿ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ಮತ್ತು ಮಂತ್ರಿಗಳು ಖುದ್ದು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಈ ಕುರಿತು ಆಸಕ್ತಿ ಇಲ್ಲ ಎಂದು ದೂರಿದರು.
ಈ ಎಲ್ಲ ನಿರ್ಲಕ್ಷ್ಯವನ್ನು ಖಂಡಿಸಿ ಮೇ 20ರಂದು ರಾಜ್ಯವ್ಯಾಪಿ ಹೋರಾಟವನ್ನು ಮಾಡಲು ನಿರ್ಧರಿ ಸಲಾಗಿದೆ ಎಂದು ಅಧ್ಯಕ್ಷತೆ ವಹಿಸಿದ್ದ ಕಲ್ಯಾಣ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕರ ಸಂಘದ ವಿಭಾಗೀಯ ಅಧ್ಯಕ್ಷ ನಂದಕುಮಾರ ಮಾಲಿ ಪಾಟೀಲ ತಿಳಿಸಿದರು.
ಬಂಜಾರಾ ನೌಕರರ ಸಂಘದ ಬಿ.ಬಿ.ನಾಯಕ, ಭೋವಿ ಸಮಾಜದ ಮಲ್ಲಿಕಾರ್ಜುನ ಕುಸ್ತಿ, ವಾಲ್ಮೀಕಿ ಸಮಾಜದ ಮಾರುತಿ ಜಮಾದಾರ, ವೆಂಕಟರಮಣ ಕೊಡಚಿ, ನಂದ ಕುಮಾರ ನಾಯಕ, ರಾಜು, ಅಶೋಕ ಕಾಳಮಂದಿರಗಿ, ಮೇದಾರ ಸಂಘದ ಜಿಲ್ಲಾಧ್ಯಕ್ಷರಾದ ಭೀಮಣ್ಣ ಬೋನಾಳ, ವಿಠಲ ಜಾಧವ, ಎಸ್.ಎಸ್. ಪವಾರ, ಮಂಜುನಾಥ ನಾಲವಾರಕರ, ಲಾಲಪ್ಪ ರಾಠೊಡ, ಬಸವರಾಜ ಜಮಾದಾರ ಚಿಂಚೋಳಿ ಹಾಗೂ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ