ಕೊಳ್ಳೇಗಾಲ: ಮಗಳೊಂದಿಗೆ ಜಗಳವಾಡಿದ ಅಳಿಯನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದ ಮಾವ!
Team Udayavani, May 11, 2022, 3:16 PM IST
ಕೊಳ್ಳೇಗಾಲ: ಮಗಳೊಂದಿಗೆ ಜಗಳವಾಡುತ್ತಿದ್ದ ಅಳಿಯನನ್ನೇ ಮಾವ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ತಾಲೂಕಿನ ಜಾಗೇರಿಯಲ್ಲಿ ಮಂಗಳವಾರ ನಡೆದಿದೆ.
ಆಂಥೋಣಿ ಕೊಲೆಯಾದ ಅಳಿಯ. ಗ್ರಾಮದ ಅಯ್ನಾವೂ ತನ್ನ ಮಗಳೊಂದಿಗೆ ಜಗಳ ತೆಗೆಯುತ್ತಿದ್ದ ಅಳಿಯನನ್ನೇ ಕೊಂದ ಆರೋಪಿ.
ಘಟನೆ ವಿವರ: ಜಾಗೇರಿ ಗ್ರಾಮದ ಅಯ್ನಾವೂ ತನ್ನ ಮಗಳು ಜಾನ್ಸಿಯನ್ನು ಅದೇ ಗ್ರಾಮದ ಆಂಥೋಣಿಗೆ ಕೊಟ್ಟು ವಿವಾಹ ಮಾಡಿದರು. ಮನೆಯಲ್ಲಿ ಪತಿ ಪತ್ನಿ ನಡುವೆ ಜಗಳವಾಗಿದ್ದನ್ನು ಅರಿತ ಮಾವ ಮಗಳನ್ನು ಮನೆಗೆ ಕರೆದುಕೊಂಡು ಹೋಗಿದ್ದ. ಇದರಿಂದ ಬೇಸತ್ತ ಆಂಥೋಣಿ ಮಾವನ ಮನೆಗೆ ಹೋಗಿ ಪತ್ನಿಯನ್ನು ಕಳುಹಿಸುವಂತೆ ಕೇಳಿದ್ದು ಮಾತಿಗೆ ಮಾತು ಬೆಳೆದು ಜಗಳಕ್ಕೆ ತಿರುಗಿ ಮಾವ ಆಳಿಯನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ಡಿವೈಎಸ್ಪಿ ನಾಗರಾಜು, ಸಿ.ಐ. ಶಿವರಾಜ ಆರ್.ಮುದುಹೊಳಲು, ಎಸ್ಐ ಮಂಜುನಾಥ ಭೇಟಿ ನೀಡಿ ಪರಿಶೀಲನೆಯ ಬಳಿಕ ಶವವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು