ಪತ್ರಕರ್ತರ ಹೊರಗಿಟ್ಟು ಕೆಡಿಪಿ ಸಭೆ ನಡೆಸಿದ ಸಚಿವ


Team Udayavani, May 11, 2022, 3:53 PM IST

Untitled-1

ಕೋಲಾರ: ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ಕರ್ನಾಟಕ ಪ್ರಗತಿ ಪರಿಶೀಲನಾ ಸಭೆಗೆ ವಾರ್ತಾ ಇಲಾಖೆಯಿಂದ ಎಲ್ಲಾ ಪತ್ರಕರ್ತರನ್ನು ಆಹ್ವಾನಿಸಿ ನಂತರ ಸಭೆಯ ಪ್ರಾರಂಭದಲ್ಲಿ ಹೊರಗೆ ಹೋಗಲು ಜಿಪಂ ಕಾರ್ಯನಿರ್ವಹಣಾಧಿಕಾರಿಗಳೇ ಸೂಚಿಸುವ ಮೂಲಕ ಪಾರದರ್ಶಕ ನಡೆಗೆ ಸಭೆ ತಿಲಾಂಜಲಿಯಿಟ್ಟಿತು.

ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಜಿಲ್ಲಾ ಉಸ್ತುವಾರಿ ವಹಿಸಿಕೊಂಡ ಒಂದೂವರೆ ವರ್ಷದ ನಂತರ ಅನೇಕ ಟೀಕೆ ಟಿಪ್ಪಣಿ ಆಕ್ಷೇಪಣೆಗಳ ಹಿನ್ನೆಲೆಯಲ್ಲಿ ಮಂಗಳವಾರ ಕೆ.ಡಿ.ಪಿ. ಸಭೆಯನ್ನು ಕರೆಯಲಾಗಿತ್ತು. ಈ ಸಭೆಗೆ ಪ್ರತಿಪಕ್ಷದ ಶಾಸಕರಾದ ಕೆ.ರಮೇಶ್‌ಕುಮಾರ್‌, ಕೆ.ಶ್ರೀನಿವಾಸಗೌಡ, ಎಸ್‌. ಎನ್‌.ನಾರಾಯಣಸ್ವಾಮಿ, ಕೆ.ವೈ.ನಂಜೇಗೌಡ, ವಿಧಾನ ಪರಿಷತ್‌ ಸದಸ್ಯ ಅನಿಲ್‌ಕುಮಾರ್‌ ಒಟ್ಟಾಗಿ ಬಂದು ಉಪಸ್ಥಿತರಿದ್ದು, ಸಚಿವ ಮುನಿರತ್ನ ಅವರೊಂದಿಗೆ ಎಂ.ಎಲ್‌.ಸಿ. ಕೆ.ವೈ.ನಾರಾಯಣಸ್ವಾಮಿ ಅವರು ನಿಗಧಿತ ಅವಧಿಗೆ ಬಂದರು. ಅದರೆ, ಏಕೋ…. ಏನೋ…. ವಿಪಕ್ಷದ ದಂಡು ದಾಳಿ ಮಾಡುವ ಭೀತಿಯಿಂದಲೋ ಏನೂ ಸಚಿವರು ಜಿಪಂ ಸಿಇಒ ಮೂಲಕ ಸಭೆಯಲ್ಲಿ ನಡೆಯುವಂತಹ ಮಾಹಿತಿಗಳು ಸಾರ್ವಜನಿಕವಾಗಿ ಬಹಿರಂಗವಾಗದಂತೆ ತಡೆಯಲು ಸಭೆಗೆ ಆಹ್ವಾನ ನೀಡಿದ್ದ ಪತ್ರಕರ್ತರನ್ನು ಹೊರಗೆ ಹಾಕುವ ಕೆಲಸ ಮಾಡಿದರು. ಪಾರದರ್ಶಕ ಅಡಳಿತಕ್ಕೆ ಅಂಕುಶ ಹಾಕಿ, ಜಿಪಂ ಸಿಇಒ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಅಚ್ಚಕಟ್ಟಾಗಿ ಸಚಿವರೇ ಮಾಡಿದರು.

ರಹಸ್ಯವಾಗಿ ಸಭೆ ನಡೆಸಿದ್ದೇಕೆ: ಸಭೆಯಲ್ಲಿ ಉಪಸ್ಥಿತರಿದ್ದ ಪತ್ರಕರ್ತರು ಸಿಇಒ ಅವರು ಪತ್ರಕರ್ತರನ್ನು ಹೊರಗೆ ಹೋಗಲು ಮಾಡಿಕೊಂಡ ಮನವಿ ವಿರುದ್ಧ ಸಿಡಿದು ಕೆಡಿಪಿ ಸಭೆಗಳು ಪಾರದರ್ಶಕವಾಗಿ ನಡೆಸಬೇಕು. ಆದರೆ, ನಿಮ್ಮ ಸರಕಾರವೇನಾದರೂ ಪತ್ರಕರ್ತರನ್ನು ಹೊರಗೆ ಇಟ್ಟು ರಹಸ್ಯವಾಗಿ ಸಭೆ ನಡೆಸಲು ಸೂಚಿಸಿದೆಯೇ, ಕಮೀಷನ್‌ ವ್ಯಾಪಾರವೇನಾದರೂ ಅಧಿಕಾರಿಗಳ ಕುದುರಿಸುತ್ತಿದ್ದಿರಾ ಎಂದು ಖಾರವಾಗಿ ಪ್ರಶ್ನಿಸಿದರು.

ಸಭೆಗೆ ಹೊರಗೆ ಹೋಗಲು ಸೂಚನೆ: ಈ ಸಂದರ್ಭದಲ್ಲಿ ನಾವು ಸಭೆ ನಡೆಸಲು ಅಡ್ಡವಾಗಿದ್ದ ಟಿ.ವಿ. ಮಾಧ್ಯಮದವರಿಗೆ ಹೇಳಿದ್ದು ಎಂದು ಸಬೂಬು ಹೇಳಿದರು. ಆದರೆ, ನಂತರ ಸಚಿವರ ಸೂಚನೆ ಮೇರೆಗೆ ಸಿಇಒ ಅವರು ಮಾಧ್ಯಮದವ ರೆಲ್ಲರೂ ಸಭೆಯಿಂದ ನಿರ್ಗಮಿಸಲು ಮನವಿ ಮಾಡು ತ್ತೇನೆ. ಸಭೆಯ ನಂತರ ಪತ್ರಿಕಾಗೋಷ್ಠಿ ಮೂಲಕ ಮಾಹಿತಿ ನೀಡುವುದಾಗಿ ಮನವಿ ನೀಡಿದರು.

ರೊಚ್ಚಿಗೆದ್ದ ಪತ್ರಕರ್ತರು: ಇದರಿಂದ ರೊಚ್ಚಿಗೆದ್ದ ಪತ್ರ ಕರ್ತರು ಇದು ಕೆ.ಡಿ.ಪಿ. ಸಭೆ, ನೀವುಗಳು ರಹಸ್ಯವಾಗಿ ಸಭೆ ನಡೆಸುವ ಹಾಗಿದ್ದರೆ ಪತ್ರಕರ್ತರನ್ನು ಏತಕ್ಕೆ ಆಹ್ವಾನಿ ಸಿದಿರಿ ಎಂಬ ಪ್ರಶ್ನೆಗೆ ಯಾರ ಬಳಿಯೂ ಉತ್ತರವಿರಲಿಲ್ಲ. ಪತ್ರಕರ್ತರು ಸಭಾಂಗಣದಿಂದ ಹೊರ ಬಂದಾಗ ಜಿಲ್ಲಾಧಿಕಾರಿ ವೆಂಕಟರಾಜ ಅವರು ಹಿಂದೆಯೇ ಬಂದು ಸಮಾಧಾನ ಪಡಿಸಲು ಯತ್ನಿಸಿದರು.

ಒಟ್ಟಾರೆಯಾಗಿ ಕೆಡಿಪಿ ಸಭೆಯಿಂದ ಪತ್ರಕರ್ತರನ್ನು ಹೊರಗೆ ಕಳಹಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರು ವಿವಾದಕ್ಕೆ ತುತ್ತಾದರು. ಜಿಪಂ ಇತಿಹಾಸದಲ್ಲಿ ಕೆಡಿಪಿ ಸಭೆಯನ್ನು ರಹಸ್ಯವಾಗಿ ನಡೆಸುವ ಮೂಲಕ ಹೊಸ ದಾಖಲೆ ಬರೆದರು.

ಟಾಪ್ ನ್ಯೂಸ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.