ಮೂಡಲಗಿ: ಸಂಭ್ರಮದಿಂದ ಜರುಗಿದ ಶ್ರೀಶಿವಬೋಧ ಸ್ವಾಮಿಗಳ ಪಲ್ಲಕ್ಕಿ ಉತ್ಸವ
Team Udayavani, May 11, 2022, 6:47 PM IST
ಮೂಡಲಗಿ: ಭಾವೈಕತೆಗೆ ಹೆಸರಾಗಿರುವ ಪಟ್ಟಣದ ಆರಾಧ್ಯ ದೈವ ಶ್ರೀ ಶಿವಬೋಧಸ್ವಾಮಿಗಳ ಪುಣ್ಯರಾಧನೆ ಹಾಗೂ ಜಾತ್ರಾಮಹೋತ್ಸವ ನಿಮಿತ್ಯ ಶ್ರೀಗಳ ಪಲ್ಲಕ್ಕಿ ಉತ್ಸವ ಬುಧವಾರದಂದು ಶ್ರೀಮಠದ ಪೀಠಾಧಿಪತಿಗಳಾದ ಶ್ರೀ ದತ್ತಾತ್ರೇಯಬೋಧ ಸ್ವಾಮಿಜಿ ಮತ್ತು ಶ್ರೀ ಶ್ರೀಧರಬೋಧ ಸ್ವಾಮಿಜಿ ಸಾನಿಧ್ಯದಲ್ಲಿ ಅಪಾರ ಜನಸ್ತೋಮ ಮಧ್ಯೆ ಜರುಗಿತು.
ಮಂಗಳವಾರ ಮಧ್ಯರಾತ್ರಿಯಿಂದ ಬುಧವರ ಮುಂಜಾನೆವರಿಗೆ ಶ್ರೀಗಳ ಮಠದವರಿಗೆ ಸಹಸ್ರರಾರು ಭಕ್ತರು ತಮ್ಮ ತಮ್ಮ ಮನೆಯಿಂದ ಮತ್ತು ಶ್ರೀ ಯಲ್ಲಮ್ಮ ದೇವಸ್ಥಾನದಿಂದ ದೀರ್ಘದಂಡ ನಮಸ್ಕಾರ ಮತ್ತು ಉರುಳು ಸೇವೆ ಸಲ್ಲಿಸಿ ತಮ್ಮ ಹರಕೆ ತೀರಿಸಿದರು.
ಬುಧವಾರ ಮಧ್ಯಾಹ್ನ ಶ್ರೀಗಳ ಮೇಲಿನ ಮಠದಲ್ಲಿ ಶ್ರೀಗಳ ಉತ್ಸವ ಮೂರ್ತಿಗೆ ವಿವಿಧ ಧಾರ್ಮಿಕ ಕಾರ್ಯಗಳು ನೆರವೇರಿಸಿ ಅಲಂಕೃತಗೊಂಡ ಪಲ್ಲಕ್ಕಿಯಲ್ಲಿ ಶ್ರೀಗಳ ಮೂರ್ತಿಯೊಂದಿಗೆ ಪಲ್ಲಕ್ಕಿ ಉತ್ಸವ ಕೆಳಗಿನ ಮಠದವರಿಗೆ ಅಪಾರ ಜನಸ್ತೋಮದ ಜಯಕಾರದೊಂದಿಗೆ ಮತ್ತು ಕರಡಿ ಮಜಲು, ಶ್ರೀ ರಂಗ ಝಾಂಜ ಪಥಕ ಹಾಗೂ ವಿವಿಧ ವಾದ್ಯ ವೃಂದಗಳೊಂದಿಗೆ ವಿಜೃಂಭಣೆಯಿಂದ ಕೆಳಗಿನ ಮಠಕ್ಕೆ ಸಾಗಿ ಶ್ರೀಮಠದಲ್ಲಿ ಶ್ರೀಗಳ ಉತ್ಸವ ಮೂರ್ತಿಯನ್ನು ಸ್ಥಾಪಿಸಿ ನಂತರ ಅಭಿಷೇಕ ಹಾಗು ಪೂಜೆಸಲ್ಲಿಸಿದರು.
ಪಲ್ಲಕ್ಕಿ ಉತ್ಸವದಲ್ಲಿ ಭಕ್ತರು ಬೆಂಡು-ಬೇತ್ತಾಸು ಸಮರ್ಪಿಸಿದರು, ಉತ್ಸವದ ದಾರಿಯಲ್ಲಿ ಭಕ್ತರು ನೀರು ಹಾಕಿ ಫಲ ಪುಷ್ಪ ನೀಡಿ ಶ್ರೀ ದತ್ತಾತ್ರೇಯಬೋಧ ಸ್ವಾಮಿಜಿ ಮತ್ತು ಶ್ರೀ ಶ್ರೀಧರಬೋಧ ಸ್ವಾಮಿಜಿ ಆಶೀರ್ವಾದ ಪಡೆದುಕೊಂಡು ಪುನಿತರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
MUST WATCH
ಹೊಸ ಸೇರ್ಪಡೆ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ