ರೈತರ ಸಮಸ್ಯೆ ಬಗೆಹರಿಸಲು ಸರ್ವ ಕ್ರಮ : ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ.


Team Udayavani, May 11, 2022, 11:17 PM IST

ರೈತರ ಸಮಸ್ಯೆ ಬಗೆಹರಿಸಲು ಸರ್ವ ಕ್ರಮ : ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ.

ಮಂಗಳೂರು: ಜಿಲ್ಲೆಯ ರೈತರ ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾಡಳಿತದಿಂದ ಸಾಧ್ಯವಿರುವ ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ರೈತರಿಗೆ ಭರವಸೆ ನೀಡಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ರೈತರ ಅಹವಾಲುಗಳಿಗೆ ಸಂಬಂಧಿಸಿದಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗೊಬ್ಬರ ಸಿಗದಿದ್ದರೆ ಕರೆ ಮಾಡಿ
ಮುಂಗಾರು ಹತ್ತಿರವಿದೆ. ರೈತ ಸಂಪರ್ಕ ಕೇಂದ್ರದಿಂದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಸಲಾಗುವುದು. ಕೊರತೆ ಆಗದಂತೆ ಎಚ್ಚರ ವಹಿಸಲಾಗಿದೆ. ಡಿಐಪಿ, ಯೂರಿಯಾ, ಗೊಬ್ಬರದ ಸಮಸ್ಯೆ ಕಂಡುಬಂದಲ್ಲಿ ರೈತರು ಹಾಗೂ ರೈತ ಸಂಘಟನೆಗಳು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರಿಗೆ ನೇರವಾಗಿ ಕರೆ ಮಾಡಿ ಪಡೆಯಬಹುದು ಎಂದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಸೀತಾ ಮಾತನಾಡಿ, ರಸಗೊಬ್ಬರದ ಕೊರತೆ ಕಂಡುಬಂದಲ್ಲಿ ಕೂಡಲೇ ಸಂಪರ್ಕಿಬಹುದಾಗಿದೆ. 1 ಗಂಟೆಯೊಳಗೆ ರೈತರಿಗೆ ಗೊಬ್ಬರ ಹಾಗೂ ಬಿತ್ತನೆ ಬೀಜದ ಪೂರೈಸಲಾಗುವುದು ಎಂದರು.

ಅದೇ ರೀತಿ ರಸಗೊಬ್ಬರ ದಾಸ್ತಾನು ಮಾಡುವ ಸಂದರ್ಭದಲ್ಲಿ ಚೀಲಕ್ಕೆ ಕೊಕ್ಕೆ ಹಾಕದಂತೆ ಎಚ್ಚರ ವಹಿಸಬೇಕು, 50 ಕೆಜಿ ರಸಗೊಬ್ಬರದ ಚೀಲಕ್ಕೆ ಕಬ್ಬಿಣದ ಕೊಕ್ಕೆ ಹಾಕಿದಲ್ಲಿ ರಂಧ್ರದ ಮೂಲಕ ಗೊಬ್ಬರ ಪೋಲಾಗುವ ಸಾಧ್ಯತೆ ಇದೆ. ಇಂತಹ ವಿಷಯಗಳಲ್ಲಿ ಕೃಷಿ ಇಲಾಖೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಬೆಳೆ ವಿಮೆ ಸೌಲಭ್ಯ
ಬೆಳೆ ವಿಮ ಹಾಗೂ ಬೆಳೆ ಸಮೀಕ್ಷೆಗೆ ಸಂಬಂಧಿಸಿದ ಚರ್ಚೆಯಲ್ಲಿ ಬೆಳೆ ವಿಮೆಗೆ ಗೊತ್ತುಪಡಿಸಲಾದ ಬೆಳೆಗಳಿಗೆ ಬ್ಯಾಂಕ್‌ ಖಾತೆಗಳಿರುವ ಬ್ಯಾಂಕುಗಳೇ ಬೆಳೆ ವಿಮೆ ಮಾಡಿಕೊಡುತ್ತವೆ. ಲೋನ್‌ ಪಡೆಯದ ರೈತರು ಕೂಡ ನೋಟಿಫೈಡ್‌ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಲು ಅರ್ಹರಿರುತ್ತಾರೆ, ರೈತರು ಇದರ ಪ್ರಯೋಜನ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಕೋರಿದರು.

ಮಾಡಾವಿನಲ್ಲಿ ವಿದ್ಯುತ್‌ ಕೇಂದ್ರ
ಸುಳ್ಯದ ಮಾಡಾವಿನಲ್ಲಿ ಮುಂದಿನ ವರ್ಷದೊಳಗೆ 110 ಕೆ.ವಿ. ಕೇಂದ್ರ ನಿರ್ಮಾಣವಾಗಲಿದೆ ಎಂದರು.

ರೈತರ ಮನವಿ
ವಿವಿಧ ರೀತಿಯ ಬೆಳೆ ಇದ್ದರೂ ಬೆಳೆ ಸಮೀಕ್ಷೆ ವೇಳೆ ಕೇವಲ ಒಂದು ಬೆಳೆಯನ್ನು ಮಾತ್ರ ಆರ್‌ಟಿಸಿಯಲ್ಲಿ ನಮೂದಿಸಲಾಗುತ್ತಿದೆ. ಇದು ರೈತರಲ್ಲಿ ಗೊಂದಲವನ್ನುಂಟು ಮಾಡುತ್ತಿದೆ. ಕೃಷಿ ಇಲಾಖೆ ಕೂಡಲೇ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ರೈತರು ಕೋರಿದರು. ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ, ರೈತರು ಯಾವುದೇ ಬೆಳೆ ಬೆಳೆದಾಗಲೂ ಆರ್‌ಟಿಸಿಯಲ್ಲಿ ಸೂಕ್ತವಾಗಿ ದಾಖಲಿಸಬೇಕು. ಈ ಸಮಸ್ಯೆಯ ಬಗ್ಗೆ ಕೃಷಿ ಇಲಾಖೆ ಕೂಡಲೇ ಪರಿಹಾರ ಒದಗಿಸಬೇಕು ಎಂದರು.

ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಪಡೆಯಿರಿ
ಜಿಲ್ಲೆಯ ಎಲ್ಲ ರೈತರು ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಪಡೆಯುವಂತೆ ಸಲಹೆ ನೀಡಿದ ಜಿಲ್ಲಾಧಿಕಾರಿಯವರು, ಗ್ರಾ.ಪಂ. ಮಟ್ಟದಲ್ಲಿ ಈ ಕಾರ್ಡ್‌ ಪಡೆಯಲು ಕಷ್ಟವಾದಲ್ಲಿ ಗ್ರಾಮಲೆಕ್ಕಾಧಿಕಾರಿ ಹಾಗೂ ಪಿಡಿಒ ನೆರವು ಪಡೆಯುವಂತೆ ತಿಳಿಸಿದರು. ಕೆಲವೊಂದು ಸಮಸ್ಯೆಗಳಿಂದಾಗಿ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಪಡೆಯದ ರೈತರ ಪಟ್ಟಿ ನೀಡಿದರೆ ಸರಿಪಡಿಸಿ ಕೊಡಲಾಗುವುದು ಎಂದರು.

ಜಿ.ಪಂ. ಸಿಇಒ ಡಾ| ಕುಮಾರ್‌ ಹಾಗೂ ಎಡಿಸಿ ಡಾ| ಕೃಷ್ಣಮೂರ್ತಿ ವೇದಿಕೆಯ ಲ್ಲಿದ್ದರು. ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಎಚ್‌.ಆರ್‌. ನಾಯಕ್‌, ಕೃಷಿ, ಪಶುಸಂಗೋಪನ ಇಲಾಖೆ, ಅರಣ್ಯ ಇಲಾಖೆ, ಮೆಸ್ಕಾಂನ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ರೈತ ಮುಖಂಡರಾದ ರೂಪೇಶ್‌ ರೈ, ಸಂಪತ್‌, ಆಲ್ವಿನ್‌, ಧನಕೀರ್ತಿ ಬಲಿಪ ಸೇರಿದಂತೆ ರೈತ ಮುಖಂಡರು ಸಭೆಯಲ್ಲಿದ್ದರು.

 

ಟಾಪ್ ನ್ಯೂಸ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.