ಸಮಾಜದ ಚಾರಿತ್ರಿಕ ಹಿನ್ನೆಲೆಯನ್ನು ಬಿಂಬಿಸುವ ‘ಕಾನನ ಜನಾರ್ದನ’


Team Udayavani, May 11, 2022, 11:25 PM IST

ಸಮಾಜದ ಚಾರಿತ್ರಿಕ ಹಿನ್ನೆಲೆಯನ್ನು ಬಿಂಬಿಸುವ ‘ಕಾನನ ಜನಾರ್ದನ’

ಇತಿಹಾಸವನ್ನು ಆಧಾರವಾಗಿ ರೋಚಕ ಕಾದಂಬರಿಗಳನ್ನು ವಿಶಿಷ್ಟ ಶೈಲಿಯಲ್ಲಿ ಬರೆಯವ ಕನ್ನಡದ ಕಾದಂಬರಿಕಾರ ಗಣೇಶಯ್ಯನವರು. ಇವರ ಇತ್ತೀಚಿನ ಕಾದಂಬರಿ ‘ಕಾನನ ಜನಾರ್ದನ’.

ಶಿಲಾಯುಗದ ಇತಿಹಾಸವನ್ನಾಧರಿಸಿ, ಅದರಲ್ಲಿಯೂ ಪ್ರಮುಖವಾಗಿ ದಕ್ಷಿಣ ಭಾರತದ ಶಿಲಾಯುಗವನ್ನು ಆಧರಿಸಿ ಈ ಕಾದಂಬರಿಯನ್ನು ಕಟ್ಟಿದ್ದಾರೆ. ಇದು ಒಂದು ರೋಚಕ ಕಾದಂಬರಿಯಷ್ಟೇ ಆಗದೆ ಸಮಾಜದ ಹಲವಾರು ಮೂಢನಂಬಿಕೆಗಳಿಗೆ ಕೊಡಲಿಯನ್ನಿಟ್ಟಿದೆ. ಶಿಲಾಯುಗದ ಮಾನವನ ಬದುಕು ಬಿಂಬಿಸುತ್ತಾ, ಅವರ ಪದ್ದತಿಗಳು ಕ್ರಮಬದ್ಧವಾಗಿ ಹೇಗೆ ಈಗಿನ ಸಮಾಜ ವ್ಯವಸ್ಥೆಗೆ ಅಡಿಪಾಯವಾಗಿವೆ ಎಂಬುದನ್ನು ತಿಳಿಸುತ್ತದೆ ಈ ಪುಸ್ತಕ.

ಭಾರತೀಯ ಆಹಾರ ಪದ್ದತಿ, ದೈವ ಕಲ್ಪನೆ, ವಿವಾಹ ಪದ್ದತಿ ಹಾಗೂ ಆಹಾರ ಪದ್ದತಿಗಳ ಕಥಾತ್ಮಕ ವಿಶ್ಲೇಷಣೆ ಈ ಪುಸ್ತಕ. ಶಿಲಾಯುಗದಿಂದ ಆರಂಭವಾದ ಈ ಪದ್ದತಿಗಳು ಕಾಲಾನುಕ್ರಮದಲ್ಲಿ ಆದ ಬದಲಾವಣೆಯೇ ಈಗಿನ ನಮ್ಮ ಸಮಾಜ. ಭಾರತದ ದಕ್ಷಿಣಕ್ಕೆ ಹೇಗೆ ಉತ್ತರದ ಧಾರ್ಮಿಕ ಪದ್ದತಿಗಳು ಪ್ರಚಾರವಾಗಿ ಇಲ್ಲಿ ನೆಲೆ ನಿಂತವು ಎಂಬುದನ್ನು ವಿವರವಾಗಿ ಬರೆಯಲ್ಪಟ್ಟಿದೆ.

ವರ್ಣ ಪದ್ದತಿ ಎಂದರೆ ಅತ್ಯಾಚಾರ, ಅನಾಚಾರ, ಸಮಾಜದ ಕಳಂಕವೆಂದು ಭಾವಿಸುತ್ತೇವೆ. ಕೃಷಿಯು ಜಾತಿ ಪದ್ದತಿಯ ಉಗಮಕ್ಕೆ ಕಾರಣ. ಕ್ರಿಯಾತ್ಮಕ ಉದ್ದೇಶಕ್ಕಾಗಿ ಜನ್ಮತಾಳಿದ ಜಾತಿ ಪದ್ದತಿ ಕಾಲಾಂತರದಲ್ಲಿ ಭಾರತೀಯ ಸಮಾಜದ ಪಿಡುಗು. ಇದು ಹುಟ್ಟಿ ಬೆಳದ ರೀತಿಯನ್ನು ಸುಲಭವಾಗಿ ಅರ್ಥೈಸಿಕೊಳ್ಳಲು ಈ ಕಾದಂಬರಿ ಓದಬೇಕು.

ಕಾದಂಬರಿಯ ಪಾತ್ರ ನಾಗಯ್ಯ. ಒಂದು ಸಂದರ್ಶನದಲ್ಲಿ, ನಾವು ಮಾಂಸವನ್ನು ಏಕೆ ಸೇವಿಸುತ್ತವೆ? ನೈಸರ್ಗಿಕವಾಗಿ ನಾವು ಮಾಂಸಾಹಾರಿ ಅಥವಾ ಸಸ್ಯಹಾರಿಗಳು? ಎಂಬ ಪ್ರಶ್ನೆಗಳಿಗೆ ನೀಡಿದ ತಾರ್ಕಿಕ ಉತ್ತರಗಳನ್ನು ಜನರು ಓದುವುದು ದೇಶದಲ್ಲಿ ನಡೆಯುತ್ತಿರುವ ಈಗಿನ ಬೆಳವಣಿಗಳಿಗೆ ಅವಶ್ಯಕ.

‘ಅತಿಯಾದ ನಂಬಿಕೆ ಮತ್ತು ಭಕ್ತಿ ಹಾಗೂ ತೀವ್ರವಾದ ಮೋಹ ಮತ್ತು ಮಮಕಾರ, ಇವೆಲ್ಲವೂ ಮನುಷ್ಯನನ್ನು ಒಂದೇ ತೆರನಾಗಿ ಕುರುಡನನ್ನಾಗಿಸುತ್ತವೆ. ಅವುಗಳ ಪ್ರಭಾವದಲ್ಲಿ ತರ್ಕ ಸೋಲುತ್ತದೆ, ಕಟ್ಟಿಕೊಂಡ ಚಿತ್ರಣವೇ ಸತ್ಯ ಎಂಬ ಭ್ರಮೆ ಸೃಷ್ಟಿಯಾಗುತ್ತದೆ. ಸಾವಿರಾರು ವರ್ಷಗಳಿಂದ ಮಾನವ ಇಂತಹ ಅದೆಷ್ಟೋ ಭ್ರಮೆಗಳಲ್ಲಿ ಬದುಕುತ್ತಿದ್ದಾನೆ. ಆ ಭ್ರಮೆಗಳ ಪ್ರಪಂಚದಲ್ಲಿ ಮಿಂದ ಮಾನವ ತನ್ನ ಅಂತಃ ಪ್ರಜ್ಞೆಯನ್ನು ಕಳೆದುಕೊಳ್ಳುತ್ತಿದ್ದಾನೆ ಎನ್ನಬಹುದು.’ ಎಂದು ಕಾದಂಬರಿಯ ಒಂದು ಪಾತ್ರ ಹೇಳುತ್ತದೆ. ಸದ್ಯ ದೇಶದಲ್ಲಿ ನಡೆಯುತ್ತಿರುವ ಧಾರ್ಮಿಕ ಕಲಹಗಳನ್ನು ಗಮನಿಸಿದರೆ, ನಮ್ಮ ಸಮಾಜ ಈ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವ ಸಮಯವಿದು.

ಓದುವಾಗ ಈ ಕಾದಂಬರಿಯ ಮೊದಲ ಅರವತ್ತು ಪುಟಗಳು ಸ್ವಲ್ಪ ಬೇಸರವೆನಿಸುತ್ತವೆ. ಅನಂತರ ಹಂತ ಹಂತವಾಗಿ ಬೆಳೆಯುವ ಕಥೆ ಹಲವಾರು ಪ್ರಮುಖ ಮಾಹಿತಿಗಳನ್ನು ಬಿಚ್ಚಿಡುತ್ತಾ ಸಾಗುತ್ತದೆ. ಲೇಖಕರು ಕಾದಂಬರಿಯನ್ನು ಊಹೆ ಮತ್ತು ಕಲ್ಪನೆಗಳಿಂದ ಮಾತ್ರ ಬರೆಯದೆ ಹಲವಾರು ಆಕರ ಗ್ರಂಥಗಳ ಸಹಾಯದಿಂದ ಬರೆದಿದ್ದಾರೆ. ಭಾರತೀಯ ಸಮಾಜದ ಚಾರಿತ್ರಿಕ ಹಿನ್ನೆಲೆಯನ್ನು ಅರ್ಥ ಮಾಡಿಕೊಳ್ಳಲು ಈ ಕಾದಂಬರಿ ಒಳ್ಳೆಯದು.

ಪುಸ್ತಕ : ಕಾನನ ಜನಾರ್ದನ
ಲೇಖಕರು: ಡಾ. ಕೆ. ಎನ್. ಗಣೇಶಯ್ಯ
ಪ್ರಕಾಶಕರು : ಅಂಕಿತ ಪುಸ್ತಕ
ಬೆಲೆ : ರೂ. 395/-
ಪುಟಗಳು : 399

– ಓಂಕಾರ ಕುಡಚೆ, ಎಸ್.ಡಿ.ಎಮ್‌ ಕಾಲೇಜು ಉಜಿರೆ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.