ಮರಿಯಮ್ಮನಹಳ್ಳಿಗೆ ನೀರು ಬಿಡದಿದ್ದರೆ ಹೋರಾಟ

ಶಾಸಕ ಭೀಮಾನಾಯ್ಕ ಎಚ್ಚರಿಕೆ

Team Udayavani, May 12, 2022, 12:47 PM IST

neeru

ಹೊಸಪೇಟೆ: ತುಂಗಭದ್ರಾ ಜಲಾಶಯದಿಂದ ಪಾವಗಡಕ್ಕೆ ಕುಡಿಯುವ ನೀರು ಹರಿಸುವ ಯೋಜನೆಯಲ್ಲಿ ಮರಿಯಮ್ಮನಹಳ್ಳಿ ಪಟ್ಟಣಕ್ಕೂ ನೀರು ಕೊಡಬೇಕೆಂಬ ಬೇಡಿಕೆಗೆ ಸಂಬಂಧಿಸಿದಂತೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಜಿಲ್ಲಾಧಿಕಾರಿ ಅನಿರುದ್ಧ ಪಿ. ಶ್ರವಣ್‌ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಶಾಸಕ ಭೀಮಾನಾಯ್ಕ ಮಾತನಾಡಿ, ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿ ಪಟ್ಟಣಕ್ಕೆ ಪಾವಗಡ ಕುಡಿವ ನೀರಿನ ಯೋಜನೆಯಡಿ ನೀರು ಒದಗಿಸದಿದ್ದರೆ ಹೋರಾಟದ ಸ್ವರೂಪ ಬದಲಾಗಲಿದೆ. ತುಂಗಭದ್ರಾ ಜಲಾಶಯದ ಹಿನ್ನೀರಿನಲ್ಲಿರುವ ಹಂಪಿನಕಟ್ಟಿ ಕೆರೆಯ ಅಂಗಳದಿಂದ ಪಾವಗಡಕ್ಕೆ ನೀರು ಹರಿಸುವ ಸಂಬಂಧ ಅಂದಾಜು ಎರಡು ಸಾವಿರ ಕೋಟಿಗೂ ಅಧಿಕ ವೆಚ್ಚದಲ್ಲಿ ಕಾಮಗಾರಿ ಪ್ರಾರಂಭವಾಗಿ ಎರಡು ವರ್ಷಗಳು ಕಳೆದಿವೆ. ಶೇ. 50ರಷ್ಟು ಕಾಮಗಾರಿ ಮುಗಿದಿದೆ. ಪ್ರಾರಂಭವಾಗಿರುವ ಈ ಯೋಜನೆಯ ಪೈಪ್‌ ಲೈನ್‌ ಕಾಮಗಾರಿ ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ಹಾದು ಹೋಗಲಿದ್ದು, ಪಾವಗಡ ಕುಡಿಯುವ ನೀರಿನ ಯೋಜನೆಯಲ್ಲಿ ಮರಿಯಮ್ಮಹಳ್ಳಿಗೂ ನೀರು ಕೊಡಬೇಕು ಎಂದು ಆಗ್ರಹಿಸಿದರು.

ತುಂಗಭದ್ರಾ ಜಲಾಶಯ ಪಕ್ಕದಲ್ಲೇ ಮರಿಯಮ್ಮನಹಳ್ಳಿ ಪಟ್ಟಣವಿದ್ದು, ಜಲಾಶಯ ನಿರ್ಮಾಣಕ್ಕೆ ಮರಿಯಮ್ಮನಹಳ್ಳಿಯ ಜನಗಳು ಮನೆ, ಮಠ, ಕಳೆದುಕೊಂಡಿದ್ದಾರೆ. ಆದರೂ ಮರಿಯಮ್ಮನಹಳ್ಳಿ ಪಟ್ಟಣದ ಜನರಿಗೆ ಇದುವರೆಗೆ ಕುಡಿಯುವ ನೀರು ದೊರೆತಿಲ್ಲ. ಮರಿಯಮ್ಮನಹಳ್ಳಿ ಮಾರ್ಗವಾಗಿ ಹಾದುಹೋಗುವ ಪಾವಗಡ ಕುಡಿಯುವ ನೀರಿನ ಯೋಜನೆಯಲ್ಲಿ ಮರಿಯಮ್ಮನಹಳ್ಳಿಗೂ ನೀರು ಕೊಡಲಿ ಎಂದು ಶಾಸಕ ಭೀಮಾನಾಯ್ಕ ಒತ್ತಾಯಿಸಿದರು.

ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್‌ ಮಾತನಾಡಿ, ಪಾವಗಡ ಕುಡಿಯುವ ನೀರಿನ ಯೋಜನೆಯಲ್ಲಿ ಮರಿಯಮ್ಮನಹಳ್ಳಿ ಪಟ್ಟಣಕ್ಕೆ ನೀರು ಕೊಡುವುದಕ್ಕೆ ಎಷ್ಟು ಸಾಧ್ಯತೆಗಳಿವೆ ಎಂಬುದರ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಯೋಜನೆಯ ರೂಪುರೇಷೆಗಳನ್ನು ಪರಿಶೀಲಿಸಲಾಗುವುದು ಎಂದರು. ಸಂಸದ ವೈ.ದೇವೇಂದ್ರಪ್ಪ, ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯ್ತಿ ಸದಸ್ಯರು ಇದ್ದರು.

ಜಿಲ್ಲಾಧಿಕಾರಿಗಳು ನೀಡಿದ ಗಡುವು ಮುಕ್ತಾಯವಾಗುವುದರೊಳಗೆ ನಮ್ಮ ಬೇಡಿಕೆ ಈಡೇರಬೇಕು. ಇಲ್ಲವಾದರೆ ಮಾರನೆ ದಿನವೇ ಮರಿಯಮ್ಮನಹಳ್ಳಿ ಪಟ್ಟಣದ 25 ಸಾವಿರ ಜನರು ನೀರಿಗಾಗಿ ಪ್ರತಿಭಟನೆಗೆ ಇಳಿಯುವುದು ಪಕ್ಕಾ ಎಂದು ಶಾಸಕ ಭೀಮಾನಾಯ್ಕ ಸುದ್ದಿಗಾರರಿಗೆ ತಿಳಿಸಿದರು.

ಪಾವಗಡ ಕುಡಿಯುವ ನೀರಿನ ಯೋಜನೆ ಪ್ರಾರಂಭವಾದಾಗ ಮೊಳಕಾಲ್ಮೂರು ಪಟ್ಟಣಕ್ಕೆ ನೀರು ಕೊಡುವ ಆಲೋಚನೆ ಸರ್ಕಾರಕ್ಕೆ ಇರಲಿಲ್ಲ. ಆದರೆ ಇತ್ತೀಚೆಗೆ ಏಕಾಏಕಿಯಾಗಿ ಈ ಯೋಜನೆಯಲ್ಲಿ ಮೊಳಕಾಲ್ಮೂರು ಪಟ್ಟಣಕ್ಕೆ ನೀರು ಕೊಡುವ ತೀರ್ಮಾನವನ್ನು ಸರ್ಕಾರ ಮಾಡಿತ್ತು. ಅದೇ ಯೋಜನೆಯಲ್ಲಿ ಮರಿಯಮ್ಮನಹಳ್ಳಿ ಪಟ್ಟಣಕ್ಕೂ ನೀರು ಕೊಡಲು ಒತ್ತಾಯಿಸಿದ್ದೇವೆ ಎಂದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

Ayodhya ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.