26 ದಿನದಲ್ಲಿ 5.5 ಕೋಟಿ ಜನರಿಂದ KGF 2 ವೀಕ್ಷಣೆ: ಅತೀ ಹೆಚ್ಚು ವೀಕ್ಷಣೆಯ 5 ಸಿನಿಮಾ ಯಾವುದು?
ಜಾಗತಿಕವಾಗಿ 1,160 ಕೋಟಿ ರೂಪಾಯಿ ಗಳಿಕೆ ಕಂಡಿರುವುದಾಗಿ ಮೂಲಗಳು ಹೇಳಿವೆ.
Team Udayavani, May 12, 2022, 2:14 PM IST
ಮುಂಬಯಿ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಸಿನಿಮಾ ತೆರೆ ಕಂಡ 27 ದಿನಗಳ ಬಳಿಕವೂ ಮತ್ತೊಂದು ಮೈಲಿಗಲ್ಲು ನೆಟ್ಟಿದ್ದು, ಇದೀಗ ಕೆಜಿಎಫ್ ಚಾಪ್ಟರ್ 2 ಚಿತ್ರವನ್ನು 5.5 ಕೋಟಿಗೂ ಅಧಿಕ ಮಂದಿ ಚಿತ್ರಮಂದಿರದಲ್ಲಿ ವೀಕ್ಷಿಸಿದ್ದು, ಇದೊಂದು ದಾಖಲೆಯಾಗಿದೆ ಎಂದು ವರದಿ ತಿಳಿಸಿದೆ.
ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಚಾಪ್ಟರ್ 2 ಸಿನಿಮಾ ಭಾರತದಲ್ಲಿ ಈವರೆಗೆ 958 ಕೋಟಿ ರೂಪಾಯಿ ಗಳಿಸಿದ್ದು, ಜಾಗತಿಕವಾಗಿ 1,160 ಕೋಟಿ ರೂಪಾಯಿ ಗಳಿಕೆ ಕಂಡಿರುವುದಾಗಿ ಮೂಲಗಳು ಹೇಳಿವೆ.
ಕರ್ನಾಟಕ, ತೆಲಂಗಾಣದಲ್ಲಿ 70 ಲಕ್ಷ ಮಂದಿ ಕೆಜಿಎಫ್ ಚಾಪ್ಟರ್ 2 ಸಿನಿಮಾ ವೀಕ್ಷಿಸಿದ್ದು, ಆಂಧ್ರಪ್ರದೇಶದಲ್ಲಿ 85 ಲಕ್ಷ ಮಂದಿ, ತಮಿಳುನಾಡು ಮತ್ತು ಕೇರಳದಲ್ಲಿ 45 ಲಕ್ಷ ಮಂದಿ ಈ ಚಿತ್ರವನ್ನು ವೀಕ್ಷಿಸಿದ್ದಾರೆ.
ದಕ್ಷಿಣ ಭಾರತದಲ್ಲಿ ಒಟ್ಟು 2.70 ಕೋಟಿಗೂ ಹೆಚ್ಚು ಮಂದಿ ಸಿನಿಮಾ ವೀಕ್ಷಿಸಿದ್ದು, ಉತ್ತರಭಾರತದಲ್ಲಿ 2.35 ಕೋಟಿ ಮಂದಿ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಿದ್ದಾರೆ.
ಭಾರತದಲ್ಲಿ ಬಾಹುಬಲಿ ಹಾಗೂ ಗದ್ದರ್ ಸಿನಿಮಾದ ನಂತರ ಚಿತ್ರಮಂದಿರದಲ್ಲಿ ಅತ್ಯಧಿಕ ಜನ ವೀಕ್ಷಿಸಿದ ಮೂರನೇ ಚಿತ್ರ ಎಂಬ ಹೆಗ್ಗಳಿಕೆ ಕೆಜಿಎಫ್ ಚಾಪ್ಟರ್ 2ನದ್ದಾಗಿದೆ. ಇನ್ನು ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಚಿತ್ರವನ್ನು ಭಾರತದಲ್ಲಿ 4.40 ಕೋಟಿ ಮಂದಿ ವೀಕ್ಷಿಸಿದ್ದರು. 2000ನೇ ಇಸವಿಯಿಂದ ಈವರೆಗೆ ದಂಗಲ್, ಕಭಿ ಕುಶಿ ಕಭಿ ಗಮ್, 2.0, ಬಜರಂಗಿ ಭಾಯಿಜಾನ್, ಪಿಕೆ, ಧೂಮ್ 3, ಎಂದಿರನ್ ಸಿನಿಮಾವನ್ನು 3 ಕೋಟಿಗೂ ಅಧಿಕ ಜನರು ವೀಕ್ಷಿಸಿರುವುದಾಗಿ ವರದಿ ತಿಳಿಸಿದೆ.
ಚಿತ್ರಮಂದಿರದಲ್ಲಿ ಅತೀ ಹೆಚ್ಚು ಮಂದಿ ವೀಕ್ಷಿಸಿದ ಐದು ಸಿನಿಮಾಗಳು:
- ಬಾಹುಬಲಿ 2: 10.80 ಕೋಟಿ ಮಂದಿ
- ಗದ್ದರ್: 9 ಕೋಟಿ ಮಂದಿ
- ಕೆಜಿಎಫ್ ಚಾಪ್ಟರ್ 2: 5.05 ಕೋಟಿ ಮಂದಿ
- ಬಾಹುಬಲಿ 1: 4.90 ಕೋಟಿ
- ಆರ್ ಆರ್ ಆರ್: 4.40 ಕೋಟಿ ಮಂದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ