ಮುಳುಗುವ ಲಂಕೆಗೆ ಆಸರೆಯಾದರೇ ರಾನಿಲ್‌?

ಅಲ್ಲಿನ ಪ್ರಧಾನಿ ಮಹೀಂದ್ರ ರಾಜಪಕ್ಸ ರಾಜೀನಾಮೆ ನೀಡಿದ್ದು ಹಳೆಯ ಸಂಗತಿ.

Team Udayavani, May 13, 2022, 11:10 AM IST

ಮುಳುಗುವ ಲಂಕೆಗೆ ಆಸರೆಯಾದರೇ ರಾನಿಲ್‌?

ಶ್ರೀಲಂಕಾದ ರಾಜಕೀಯ ಅನಿಶ್ಚಿತತೆಗೆ ಕಡೆಗೂ ತೆರೆಬಿದ್ದಿದೆ. ನೂತನ ಪ್ರಧಾನಿಯಾಗಿ ಯುನೈಟೆಡ್‌ ನ್ಯಾಶನಲ್‌ ಪಾರ್ಟಿಯ ರಾನಿಲ್‌ ವಿಕ್ರಮಸಿಂಘೆ ಆಯ್ಕೆಯಾಗಿದ್ದಾರೆ. ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರ ಕಚೇರಿಯಲ್ಲಿ ಗುರುವಾರ ಸಂಜೆ ನಡೆದ ಸರಳ ಸಮಾರಂಭದಲ್ಲಿ ಅವರು ಪ್ರಮಾಣವಚನ ಸ್ವೀಕರಿಸಿದರು. ವಿಕ್ರಮಸಿಂಘೆ ಅವರು ಶ್ರೀಲಂಕಾದ ಪ್ರಧಾನಿ ಹುದ್ದೆಗೇರುತ್ತಿರುವುದು ಇದು 5ನೇ ಬಾರಿ ಎಂಬುದು ವಿಶೇಷ.

ಹಿಂದೆಂದೂ ಕಾಣದಂಥ ತೀವ್ರ ಆರ್ಥಿಕ ಸಂಕಷ್ಟದಿಂದ ತತ್ತರಿಸಿರುವ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಜನಸಂಘರ್ಷ ತೀವ್ರಗೊಂಡು ತುರ್ತುಪರಿಸ್ಥಿತಿ ಘೋಷಣೆಯಾಗಿದ್ದು, ಅಲ್ಲಿನ ಪ್ರಧಾನಿ ಮಹೀಂದ್ರ ರಾಜಪಕ್ಸ ರಾಜೀನಾಮೆ ನೀಡಿದ್ದು ಹಳೆಯ ಸಂಗತಿ. ವಿಪಕ್ಷದಲ್ಲಿದ್ದ ವಿಕ್ರಮಸಿಂಘೆ ಅವರ ಹೆಸರನ್ನು ನೂತನ ಪ್ರಧಾನಿ ಹುದ್ದೆಗೆ ಶಿಫಾರಸು ಮಾಡಲಾಗಿದೆ. ಈ ವಾರದ ಕೊನೆಯಲ್ಲಿ ನೂತನ ಪ್ರಧಾನಿ ಹಾಗೂ ಸಚಿವ ಸಂಪುಟದ ಕುರಿತು ಅಧ್ಯಕ್ಷರು ಘೋಷಣೆ ಹೊರಡಿಸುತ್ತಾರೆ ಎಂದು ಈ ಮೊದಲು ಸುದ್ದಿಯಾಗಿತ್ತು. ಆದರೆ ಅದಕ್ಕೂ ಮುಂಚೆಯೇ 73 ವರ್ಷದ ವಿಕ್ರಮ ಸಿಂಘೆ ಪ್ರಧಾನಿ ಹುದ್ದೆಗೇರಿದ್ದಾರೆ.

1994ರಿಂದಲೂ ಯುನೈಟೆಡ್‌ ನ್ಯಾಶನಲ್‌ ಪಾರ್ಟಿಯ ನಾಯಕರಾಗಿರುವ ವಿಕ್ರಮ ಸಿಂಘೆ, ರಾಜಕೀಯದಲ್ಲಿ ಏಳುಬೀಳುಗಳನ್ನು ಸಮಪ್ರಮಾಣದಲ್ಲಿ ಕಂಡ ವರು. ನಾಲ್ಕು ಅವಧಿಗೆ
ಶ್ರೀಲಂಕಾದ ಪ್ರಧಾನಿಯಾಗಿದ್ದರು. ಅದಕ್ಕೂ ಮೊದಲು ಹಣಕಾಸು ಸಚಿವರಾಗಿದ್ದರು. ಆ ಸಂದರ್ಭದಲ್ಲಿ ಆರ್ಥಿಕ ಸುಧಾರಣೆಗೆ ಕಾರಣವಾದ ಹಲವು ಯೋಜನೆಗಳನ್ನು ಜಾರಿಗೆ ತಂದು ಅದರಲ್ಲಿ ಯಶ ಕಂಡಿದ್ದು ವಿಕ್ರಮಸಿಂಘೆಯವರ ಹೆಗ್ಗಳಿಕೆ.

ಈಗ ಅಗತ್ಯ ವಸ್ತುಗಳ ಕೊರತೆ, ತೈಲದ ಕೊರತೆ, ಆರ್ಥಿಕ ದಿವಾಳಿತನದಿಂದ ತತ್ತರಿಸಿರುವ ಶ್ರೀಲಂಕಾವನ್ನು ಮತ್ತೆ ಅಭಿವೃದ್ಧಿಯ ಹಳಿಗೆ ತರುವುದು ಅವರ ಎದುರಿಗಿರುವ ದೊಡ್ಡ ಸವಾಲು. ಈ ಹಿಂದೆ ಶ್ರೀಲಂಕಾಕ್ಕೆ ಅನುಕೂಲವಾಗುವಂಥ ಯೋಜನೆಗಳನ್ನು ರೂಪಿಸಿ ರಾಜಕೀಯ ಜಾಣ್ಮೆ ಪ್ರದರ್ಶಿಸುತ್ತಿದ್ದ, ಆ ಮೂಲಕ ನೆರೆಯ ರಾಷ್ಟ್ರಗಳೊಂದಿಗೆ ಬಾಂಧವ್ಯ ಗಟ್ಟಿಮಾಡಿಕೊಳ್ಳುತ್ತಿದ್ದ ವಿಕ್ರಮಸಿಂಘೆ, ಈ ಸಂಕಷ್ಟದ ಸಮಯದಲ್ಲಿ ಯಾವ ನೀತಿ ಅನುಸರಿಸಬಹುದು, ಸವಾಲು ಗಳಿಗೆ ಹೇಗೆ ಎದೆ ಯೊಡ್ಡಬಹುದು, ಹತಾಶೆಯ ಅಂಚಿಗೆ ತಲುಪಿರುವ ಜನ ರಲ್ಲಿ ಹೇಗೆ ಆತ್ಮವಿಶ್ವಾಸ ತುಂಬಬಹುದು, ಈಗಿನ ಅನಾಹುತಕ್ಕೆ ಕಾರಣರಾದ ರಾಜಪಕ್ಸೆ ಕುಟುಂಬದ ವಿರುದ್ಧ ಯಾವ ಕ್ರಮ ಕೈಗೊಳ್ಳಬಹುದು ಎಂಬ ಕುತೂಹಲ ಎಲ್ಲರದ್ದಾಗಿದೆ. ಸದ್ಯದ ಸಂದರ್ಭವನ್ನು ಗಮನಿಸಿದರೆ, ಶ್ರೀಲಂಕಾ ಸುಸ್ಥಿತಿಗೆ ಮರಳಲು ವರ್ಷಗಳೇ ಬೇಕಾ ಗಬಹುದು. ಅಗತ್ಯ ವಸ್ತುಗಳ ಆಮದು ಸೇರಿ ಹಲವು ಬಗೆಯ ನೆರವು ಬೇಕಿ ರುವುದರಿಂದ ನೆರೆ ರಾಷ್ಟ್ರ ಗಳಾದ ಭಾರತ, ಚೀನ, ಜಪಾನ್‌ ಮತ್ತು ಜರ್ಮನಿ ಯೊಂದಿಗೆ ಸೌಹಾರ್ದ ಸಂಬಂಧ ಬೆಳೆಸುವುದೇ ವಿಕ್ರಮಸಿಂಘೆ ಅವರ ಯೋಜನೆ. ಸದ್ಯದ ಪರಿಸ್ಥಿತಿ ಯಲ್ಲಿ ಅವರಿಗೆ ಉಳಿದಿರುವ ದಾರಿಯೂ ಅದೊಂದೇ.

ಅಂದ ಹಾಗೆ, ರಾನಿಲ್‌ ವಿಕ್ರಮ ಸಿಂಘೆ ಅವರದ್ದು ಅತ್ಯಂತ ಶಕ್ತಿಯುತ ರಾಜಕೀಯ ಕುಟುಂಬ. ಇವರ ತಂದೆ ಎಸ್ಮೋಂಡ್‌ ವಿಕ್ರಮಸಿಂಘೆ ದೇಶದ ಬಹುದೊಡ್ಡ ವಕೀಲರು ಮತ್ತು ಮಾಧ್ಯಮಗಳ ಮಾಲಕರಾಗಿದ್ದರು. ಇವರ ಚಿಕ್ಕಪ್ಪ ಜೆ.ಆರ್‌. ಜಯವರ್ಧನೆ, ಶ್ರೀಲಂಕಾದ ಅತ್ಯಂತ ಶಕ್ತಿಯುತ ಅಧ್ಯಕ್ಷರಾಗಿದ್ದವರು. ರಾನಿಲ್‌ ವಿದ್ಯಾಭ್ಯಾಸ ಮುಗಿಸಿದ್ದು ಇಂಗ್ಲೆಂಡ್‌ನಲ್ಲಿ. 1977ರಲ್ಲಿ ಮೊದಲ ಬಾರಿಗೆ ಸಂಸತ್‌ ಪ್ರವೇಶಿಸಿದ್ದರು. ಆಗ ಅವರಿಗೆ ಕೇವಲ 28 ವರ್ಷ. ಅಂದಿನಿಂದ 2020ರ ವರೆಗೆ ಎಲ್ಲ ಚುನಾವಣೆಗಳಲ್ಲೂ ವಿಜಯ ಸಾಧಿಸಿದ್ದಾರೆ. ಹಾಗೆಯೇ ಜಯವರ್ಧನೆ ಮತ್ತು ಪ್ರೇಮದಾಸ ಸರಕಾರದಲ್ಲಿ ಕ್ಯಾಬಿನೆಟ್‌ ಸಚಿವರಾಗಿದ್ದರು.

ಟಾಪ್ ನ್ಯೂಸ್

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sunil Chhetri

Sunil Chhetri ಸರಿಸಾಟಿಯಿಲ್ಲದ ಆಟಗಾರ; ಭಾರತ ಫುಟ್‌ಬಾಲ್‌ನ ತೆಂಡುಲ್ಕರ್‌ ಚೆಟ್ರಿ

ರಘುಪತಿ ಭಟ್‌

ಈಗಿನ ಬಿಜೆಪಿಯಲ್ಲಿ ಚಮಚಾಗಿರಿಗೆ ಟಿಕೆಟ್‌!: ಟಿಕೆಟ್‌ ವಂಚಿತ ರಘುಪತಿ ಭಟ್‌ ಬಿರುನುಡಿ

POK ಆಜಾದಿ ರಣಕಹಳೆ! ಪಾಕಿಸ್ಥಾನ ದೌರ್ಜನ್ಯ ವಿರುದ್ಧ ಬೀದಿಗಿಳಿದ ಪಾಕ್‌ ಆಕ್ರಮಿತ ಕಾಶ್ಮೀರ ಜನ

POK ಆಜಾದಿ ರಣಕಹಳೆ! ಪಾಕಿಸ್ಥಾನ ದೌರ್ಜನ್ಯ ವಿರುದ್ಧ ಬೀದಿಗಿಳಿದ ಪಾಕ್‌ ಆಕ್ರಮಿತ ಕಾಶ್ಮೀರ ಜನ

1-wewqeqwe

Karachi ಭಾರತೀಯ ಮಹಿಳೆಯ ವಡಾಪಾವ್‌, ಪಾವ್‌ಭಾಜಿ ಕಮಾಲ್‌!

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.