ಪೋಲಕಪಳ್ಳಿ ಗ್ರಾಮಕ್ಕೆ ಸೌಕರ್ಯ ಒದಗಿಸಲು ಆಗ್ರಹ
Team Udayavani, May 13, 2022, 2:59 PM IST
ಚಿಂಚೋಳಿ: ತಾಲೂಕಿನ ಪೋಲಕಪಳ್ಳಿ ಗ್ರಾಮಕ್ಕೆ ಮೂಲ ಸೌಕರ್ಯ ಒದಗಿಸುವಂತೆ ಅನೇಕ ಸಲ ಸರ್ಕಾರಕ್ಕೆ ಮತ್ತು ಶಾಸಕರಿಗೆ ಮನವಿ ಪತ್ರಗಳನ್ನು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ರೋಸಿಹೋದ ಗ್ರಾಮದ ಹಿರಿಯ ವಕೀಲ ನಂದಕುಮಾರ ಪಾಟೀಲ ಶಾಸಕರ ಕಾರ್ಯಾಲಯದ ಎದುರು ಮೌನ ಪ್ರತಿಭಟನೆ ಆರಂಭಿಸಿದ್ದಾರೆ.
ತಾಲೂಕು ಕೇಂದ್ರ ಸ್ಥಾನದಿಂದ ಕೇವಲ ಮೂರು ಕಿ.ಮೀ ಅಂತರದಲ್ಲಿರುವ ಪೋಲಕಪಳ್ಳಿ ಗ್ರಾಮದ ಜನರಿಗೆ ಮೂಲ ಸೌಕರ್ಯ ನೀಡುವಂತೆ ಗ್ರಾಪಂ ಕಚೇರಿ, ತಹಶೀಲ್ದಾರ್ ಕಚೇರಿ, ಶಾಸಕರ ಕಚೇರಿ ಎದುರು ಅನೇಕ ಸಲ ಸತ್ಯಾಗ್ರಹ ನಡೆಸಲಾಗಿದೆ. ಆದರೆ ಆ ಸಂದರ್ಭದಲ್ಲಿ ಅಧಿಕಾರಿಗಳು, ಶಾಸಕರು ನೀಡಿದ ಆಶ್ವಾಸನೆಯಿಂದ ಸತ್ಯಾಗ್ರಹವನ್ನು ಹಿಂದಕ್ಕೆ ಪಡೆದುಕೊಳ್ಳಲಾಗಿತ್ತು. ಆದರೆ ಕಳೆದ ಮೂರು ವರ್ಷಗಳಿಂದ ಯಾವುದೇ ಮೂಲ ಸೌಕರ್ಯಗಳನ್ನು ಮಂಜೂರಿಗೊಳಿಸದೇ ಇರುವುದರಿಂದ ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಗ್ರಾಮದ ಮುಖ್ಯರಸ್ತೆ ಡಾಂಬರೀಕರಣ ಮಾಡುವುದು, ಗ್ರಾಮಸ್ಥರಿಗೆ ಶುದ್ಧ ನೀರು ಪೂರೈಕೆ, ಮಹಿಳೆಯರಿಗೆ ಶೌಚಾಲಯ ನಿರ್ಮಾಣ, ಚರಂಡಿ ವ್ಯವಸ್ಥೆ, ಸಿಮೆಂಟ್ ರಸ್ತೆ, ಮುಲ್ಲಾಮಾರಿ ನದಿಯಿಂದ ಅಕ್ರಮವಾಗಿ ಮರಳು ದಂಧೆ ನಿಲ್ಲಿಸುವುದು ಸೇರಿದಂತೆ 11 ಬೇಡಿಕೆಗಳ ಮನವಿ ಪತ್ರವನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಶಾಸಕರ ನಿರ್ಲಕ್ಷ್ಯತನ ಗ್ರಾಪಂ ಅಧ್ಯಕ್ಷ ಮತ್ತು ಪಿಡಿಒ ಬೇವಾಬ್ದಾರಿತನ, ಅಧಿಕಾರಿಗಳ ಸುಳ್ಳು ಭರವಸೆಗಳಿಂದ ರೋಸಿಹೋಗಿ ಅನಿವಾರ್ಯವಾಗಿ ಶಾಸಕರ ಕಚೇರಿ ಎದುರು ಮೌನ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಯುವ ವಕೀಲ ನಂದಕುಮಾರ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ