ಮಸಣ ಕಾರ್ಮಿಕರ ಜಾಗೃತಿ ಜಾಥಾ
ಕನಿಷ್ಠ 3,000 ರೂ. ಕೂಲಿ ನೀಡಲು ಆಗ್ರಹ
Team Udayavani, May 13, 2022, 4:17 PM IST
ಕೂಡ್ಲಿಗಿ: ರಾಜ್ಯ ಮಸಣ ಕಾರ್ಮಿಕರ ಸಂಘದ ವತಿಯಿಂದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜೂ.8 ರಂದು ಹೊಸಪೇಟೆ ಯಲ್ಲಿ ಜರುಗುವ ಮಸಣ ಕಾರ್ಮಿಕರ ರಾಜ್ಯ ಮಟ್ಟದ ಬೃಹತ್ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕಿ ಬಿ.ಮಾಳಮ್ಮ ಮಾತಾನಾಡಿ, ಸಾವಿರಾರು ವರ್ಷಗಳಿಂದ ಬಿಟ್ಟಿ ಚಾಕರಿಯಲ್ಲಿ ತೊಡಗಿರುವ ಕಾರ್ಮಿಕರಿಗೆ ಸರ್ಕಾರ ಯಾವುದೇ ಸವಲತ್ತುಗಳನ್ನು ನೀಡದೆ ಅನ್ಯಾಯ ಮಾಡಿದೆ. ಮಸಣ ಕಾರ್ಮಿಕರ ಲಕ್ಷಾಂತರ ಕುಟುಂಬಗಳಿಗೆ ಬಿಡಿಗಾಸು ನೀಡದೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ಮಾಡಿವೆ. ಆದ್ದರಿಂದ ಮಸಣ ಕಾರ್ಮಿಕರಿಗೆ ಪ್ರತಿ ಸಾರ್ವಜನಿಕ ಮಸಣಕ್ಕೆ ಒಬ್ಬರಂತೆ, ಮಸಣ ಕಾರ್ಮಿಕರೊಬ್ಬರನ್ನು ಸ್ಥಳಿಯ ಸಂಸ್ಥೆಗಳ ಮಸಣ ನಿರ್ವಾಹಕ ನೌಕರರೆಂದು ಪರಿಗಣಿಸಿ ನೇಮಿಸಿಕೊಳ್ಳಬೇಕು. ಪ್ರತಿ ಕುಣಿ ಅಗೆಯುವ ಮತ್ತು ಮುಚ್ಚುವ ಕೆಲಸವನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗವೆಂದು ಪರಿಗಣಿಸಿ, ಕುಣಿ ಅಗೆಯುವ, ಮುಚ್ಚುವ ಕಾರ್ಮಿಕರಿಗೆ ಸ್ಥಳೀಯ ಸಂಸ್ಥೆಗಳ ಮೂಲಕ ಕನಿಷ್ಠ 3,000 ರೂ. ಕೂಲಿ ಪಾವತಿಸಲು ಕ್ರಮ ವಹಿಸಬೇಕು. ಕಾರ್ಮಿಕರಿಗೆ ಸೂಕ್ತ ಪರಿಕರ ಹಾಗೂ ಸೋಪುಗಳನ್ನು ಒದಗಿಸಬೇಕು. ಮಸಣ ಕಾರ್ಮಿಕರಿಗೆ ಭವಿಷ್ಯನಿಧಿ ಯೋಜನೆ ಜಾರಿ ಮಾಡಬೇಕು. ಎಲ್ಲಾ ಮಸಣ ಕಾರ್ಮಿಕರಿಗೆ ತಲಾ ಐದು ಎಕರೆ ಜಮೀನು ಉಚಿತವಾಗಿ ನೀಡಬೇಕು. ಹಿತ್ತಲು ಸಹಿತ ನೀವೇಶನ ಹಾಗೂ ಹತ್ತು ಲಕ್ಷ ರೂ. ಮೌಲ್ಯದ ಮನೆಯನ್ನು ಉಚಿತವಾಗಿ ಒದಗಿಸುವ ಬೇಕು. 45 ವರ್ಷದ ಮಸಣ ಕಾರ್ಮಿಕರಿಗೆ ಮಾಸಿಕ ಸಹಾಯಧನ ಅಥವಾ ಪಿಂಚಣಿ ಕನಿಷ್ಠ 3000 ಸಾವಿರ ರೂ. ನೀಡಬೇಕು ಎನ್ನುವುದು ಸೇರಿದಂತೆ ಇತರೆ ಹಲವು ಹಕ್ಕೊತ್ತಾಯ ಮಂಡಿಸಿದರು.
ತಾಲೂಕು ಸಿಪಿಎಂ ಕಾರ್ಯದರ್ಶಿ ಸಿ. ವಿರೂಪಾಕ್ಷಪ್ಪ, ಸದಸ್ಯರಾದ ಬಿ.ಟಿ. ಗುದ್ದಿ ಚಂದ್ರು, ಗುನ್ನಳ್ಳಿ ರಾಘವೇಂದ್ರ, ಪಿ.ಚಾಂದ್ ಬೀ, ದೇವದಾಸಿ ಮಹಿಳಾ ವಿಮೋಚನಾ ಸಂಘಟನೆ ತಾಲೂಕು ಅಧ್ಯಕ್ಷೆ ಕನಕೇರಿ ವೆಂಕಮ್ಮ, ಸಣ್ಣ ಹನುಮಂತಪ್ಪ, ಬಸವರಾಜ್, ಹುಡಿಸಲಪ್ಪ, ಹುಲುಗಪ್ಪ, ಸ್ವಾಮಿ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ
BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ
Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!
Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ