ಯಾರನ್ನು ನೋವಿಸುವ ಉದ್ದೇಶ ನಮಗಿರಲ್ಲ; ನ್ಯಾಯಾಧೀಶ ಬಿರಾದರ

ಸಮಯಪ್ರಜ್ಞೆ ಮುಖ್ಯ. ನಮ್ಮ ಬುದ್ಧಿಮಟ್ಟ ಸಮರ್ಪಕವಾಗಿ ಬಳಸಿಕೊಳ್ಳಬೇಕು.

Team Udayavani, May 13, 2022, 5:12 PM IST

ಯಾರನ್ನು ನೋವಿಸುವ ಉದ್ದೇಶ ನಮಗಿರಲ್ಲ; ನ್ಯಾಯಾಧೀಶ ಬಿರಾದರ

ಹುಬ್ಬಳ್ಳಿ: ನ್ಯಾಯಾಧೀಶರು ಯಾವಾಗಲೂ ಉದ್ದೇಶ ಪೂರ್ವಕವಾಗಿ ಯಾರನ್ನು ನೋವಿಸುವ, ಯಾರ ವೃತ್ತಿ ಹಾಳು ಮಾಡಬೇಕು ಹಾಗೂ ಕಕ್ಷಿದಾರರಿಗೆ ತೊಂದರೆ ಕೊಡಬೇಕೆಂಬ ದೃಷ್ಟಿಯಿಂದ ಕಾರ್ಯ ನಿರ್ವಹಿಸಲ್ಲ ಎಂದು 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿರಾದರ ದೇವೆಂದ್ರಪ್ಪ ಎನ್‌. ಹೇಳಿದರು.

ಇಲ್ಲಿನ ವಕೀಲರ ಸಂಘದ ಸಭಾಭವನದಲ್ಲಿ ವಕೀಲರ ಸಂಘದವರು ಗುರುವಾರ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಮನುಷ್ಯನಿಗೆ ಜೀವನದಲ್ಲಿ ಹಸಿವು, ಧನ ಹಾಗೂ ಹೆಣ್ಣು-ಗಂಡು ಆತುರಗಳಿಗಿಂತ ಮನ್ನಣೆಯ ಆತುರ ಶ್ರೇಷ್ಠ. ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಪ್ರದೇಶದವರು ಬೇರೆ ಭಾಗಕ್ಕೆ ಹೋದರೆ ಅವರಿಗೆ ಅಲ್ಲಿನ ಭಾಷಾ ಶೈಲಿ ಸಮಸ್ಯೆಯಾಗುತ್ತದೆ. ಆದರೆ ಉತ್ತರ ಕರ್ನಾಟಕದವರು ಯಾವುದೇ ಭಾಗಕ್ಕೆ ಹೋದರೂ ಅವರಿಗೆ ಆ ತೊಂದರೆಯಾಗಲ್ಲ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಇನ್ನೋರ್ವ ನ್ಯಾಯಾಧೀಶರಾದ ಪ್ರಧಾನ ಕೌಟುಂಬಿಕ ನ್ಯಾಯಾಲಯದ ಸುಮಂಗಲಾ ಬಸವಣ್ಣೂರ, ಕೌಟುಂಬಿಕ ನ್ಯಾಯಾಲಯಗಳಲ್ಲಿ ಕಕ್ಷಿದಾರರಿಗೆ ಆದಷ್ಟು ಬೇಗ ನ್ಯಾಯ ವಿತರಣೆಯಾದಾಗ ಅವರಿಗೆ ನ್ಯಾಯ ಒದಗಿಸಿದಂತಾಗುತ್ತದೆ. ಈ ವಿಚಾರದಲ್ಲಿ ಹುಬ್ಬಳ್ಳಿ ವಕೀಲರ ಸಂಘದವರು ನ್ಯಾಯಾಧೀಶರಿಗೆ ಹೆಚ್ಚಿನ ಸಹಕಾರ ನೀಡಿದ್ದರ ಫಲವಾಗಿ ಹಲವು ಪ್ರಕರಣಗಳು ಬೇಗನೆ ಇತ್ಯರ್ಥಗೊಂಡಿವೆ. ಕೆಲವು ಪ್ರದೇಶಗಳ
ಕೋರ್ಟ್‌ಗಳಲ್ಲಿ ವಕೀಲರು ವಾದ ಮಾಡಲ್ಲ. ಉತ್ತರ ಕರ್ನಾಟಕದಲ್ಲಿ ಕೆಲಸ ಮಾಡುವುದೆಂದರೆ ಗೌರವ, ಒತ್ತಡ ರಹಿತ ಜೀವನ ಆಗಿದೆ. ಈ ಭಾಗದಲ್ಲಿ ನ್ಯಾಯಾಧೀಶರಿಗೆ ಗೌರವ, ಸ್ಪಂದನೆ ಕೊಡುತ್ತಾರೆ. ಆತ್ಮೀಯತೆ ತೋರುತ್ತಾರೆ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ 2ನೇ ಹಿರಿಯ ಶ್ರೇಣಿಯ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಕುಮಾರಿ ಸುಜಾತಾ, 4ನೇ ಹೆಚ್ಚುವರಿ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಶಕುಂತಲಾ ಆರ್‌., 3ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಪುಷ್ಪಾ ಜೋಗೋಜಿ, ನಮ್ಮ ವೃತ್ತಿ ಜೀವನದ ಒಂದು ಹಂತ ಸೇರಿಸಿದ ಜಿಲ್ಲೆ ಧಾರವಾಡ. ಯಾವುದೇ ಕೆಲಸ ಮಾಡಿದರೂ ಅದರಲ್ಲಿ ನಮ್ಮ ಪಾಲ್ಗೊಳ್ಳುವಿಕೆ, ಸಮಯಪ್ರಜ್ಞೆ ಮುಖ್ಯ. ನಮ್ಮ ಬುದ್ಧಿಮಟ್ಟ ಸಮರ್ಪಕವಾಗಿ ಬಳಸಿಕೊಳ್ಳಬೇಕು. ಕಿರಿಯ ವಕೀಲರು ಕೋರ್ಟ್‌ಗೆ ಬರುವ ಮುಂಚೆ ಆಯಾ ಪ್ರಕರಣ, ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಸಮಯ ಕೊಡಿ ಎಂದು ಕೇಳಬಾರದು ಎಂದರು.

ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಸಿ.ಆರ್‌.ಪಾಟೀಲ ಮಾತನಾಡಿ, ಕಕ್ಷಿದಾರರಿಗೆ ನ್ಯಾಯದಾನ ಸಿಗುವಲ್ಲಿ ನ್ಯಾಯಾಧೀಶರು ಮತ್ತು ವಕೀಲರ ಸಂಘದ ನಡುವೆ ಉತ್ತಮ ಸಂಬಂಧ ಮುಖ್ಯ. ಈಗ ಕಕ್ಷಿದಾರರಿಗೆ ತ್ವರಿತ ನ್ಯಾಯಾಧೀಶರು ಬೇಕಾಗಿದೆ. ಕಾರಣ ನ್ಯಾಯಾಧೀಶರು ಅರ್ಜೆನ್ಸಿಗೆ ಸ್ಪಂದಿಸಬೇಕು. ಪ್ರಕರಣದ ಆಧಾರ ಮೇಲೆ ಆದೇಶ ನೀಡುವಂತಾಗಬೇಕು ಎಂದರು.

1ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶೆ ಇಂದಿರಾ ಮೇಲಸ್ವಾಮಿ ಚೆಟ್ಟಿಯಾರ ಅತಿಥಿಯಾಗಿದ್ದರು. ನ್ಯಾಯಾಧೀಶರು, ವಕೀಲರ ಸಂಘದ ಕಾರ್ಯದರ್ಶಿ ಅಶೋಕ ಅಣವೇಕರ, ಉಪಾಧ್ಯಕ್ಷ ಐ.ಕೆ. ಬೆಳಗಲಿ ಹಾಗೂ ಸಂಘದ ಪದಾಧಿಕಾರಿಗಳು, ಹಿರಿಯ- ಕಿರಿಯ ವಕೀಲರು ಇದ್ದರು. ರತ್ನಾ ದಾನಮ್ಮನವರ ಪ್ರಾರ್ಥಿಸಿದರು. ಸುನೀತಾ ಪಿಳ್ಳೆ ಸ್ವಾಗತಿಸಿದರು. ಲೋಕೇಶ ಕೆ.ಎಂ. ನಿರೂಪಿಸಿದರು. ಎಂ.ಎಂ. ಹಳ್ಳಿ ವಂದಿಸಿದರು.

ಟಾಪ್ ನ್ಯೂಸ್

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.