155245: ಹಲೋ, ಕಂದಾಯ ಸಚಿವರೇ…ಸಹಾಯವಾಣಿ ಆರಂಭ

72 ಗಂಟೆಯಲ್ಲಿ ಮನೆ ಬಾಗಿಲಿಗೆ ಪಿಂಚಣಿ ಯೋಜನೆ

Team Udayavani, May 13, 2022, 6:24 PM IST

1-sdsdsd

ಬೆಂಗಳೂರು: ರಾಜ್ಯದಲ್ಲಿ ಹಲೋ, ಕಂದಾಯ ಸಚಿವರೇ ಸಹಾಯವಾಣಿಗೆ ಶುಕ್ರವಾರ ಚಾಲನೆ ನೀಡಲಾಗಿದೆ.

ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಸಚಿವ ಆರ್ ಅಶೋಕ್, “ಇದೊಂದು ವಿನೂತನ ಕಾರ್ಯಕ್ರಮ. ಸಾಮಾನ್ಯವಾಗಿ ವಿಧಾನಸೌಧದಲ್ಲಿ ಕುಳಿತು ಯೋಜನೆ ರೂಪಿಸುತ್ತೇವೆ. ಜನರ ಬಳಿ ತೆರಳಿ ಅವರ ಅಭಿಪ್ರಾಯ ಪಡೆದು ಯೋಜನೆ ರೂಪಿಸಿದರೆ ಮಾತ್ರ ಅದು ಜನರ ಸಂಕಷ್ಟ ಪರಿಹಾರ ನೀಡಲು ಸಾಧ್ಯ. ಮೊದಲೆಲ್ಲ 6 ತಿಂಗಳು ಪಿಂಚಣಿಗಾಗಿ ಅಲೆಯಬೇಕಿತ್ತು.ಇಷ್ಟು ವರ್ಷ ಜನರಿಗೆ ಸಮಸ್ಯೆ ಆಗಿತ್ತು. ಇಂದು ಇದಕ್ಕೆ ಪರಿಹಾರ ನೀಡಿದ್ದೇವೆ. 72 ಗಂಟೆಗಳಲ್ಲಿ ಪಿಂಚಣಿ ಸಿಗುವಂತೆ ಮಾಡುತ್ತಿದ್ದೇವೆ. ಬೊಮ್ಮಾಯಿ ನೇತೃತ್ವದ ಸರ್ಕಾರ ಜನರ ಮನೆ ಬಾಗಿಲಿಗೆ ಸೌಲಭ್ಯಗಳನ್ನು ತಲುಪಿಸಲು ಹಲವಾರು ಕಾರ್ಯಕ್ರಮ ರೂಪಿಸಿದೆ” ಎಂದು ಹೇಳಿದರು.

ನಾಗರಿಕರು ದೂರವಾಣಿ ಕರೆ ಮೂಲಕ ಪಿಂಚಣಿ ಸೌಲಭ್ಯಕ್ಕೆ ಕೋರಿಕೆ ಸಲ್ಲಿಸಬಹುದಾದ ವಿನೂತನ ಯೋಜನೆ ದೇಶದಲ್ಲಿಯೇ ಪ್ರಮಾಣ ಬಾರಿಗೆ ಚಾಲನೆ ನೀಡಲಾಗಿದೆ. ರಾಜ್ಯ ಸರ್ಕಾರ ವೃದ್ಧಾಪ್ಯ ವೇತನ ಹಾಗೂ ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲರು, ವಿಧವೆಯರು ಅವಿವಾಹಿತ ಅಥವಾ ವಿಚ್ಛೇದಿತ ಮಹಿಳೆಯರು, ತೃತೀಯ ಲಿಂಗದವರು, ಆಸಿಡ್ ದಾಳಿಗೊಳಗಾದ ಮಹಿಳೆಯರು ಮತ್ತು ಎಂಡೋಸಲ್ಫಾನ್ ಸಂತ್ರಸ್ತರಿಗೆ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ 9 ವಿವಿಧ ಮಾಸಿಕ ಪಿಂಚಣಿ ಯೋಜನೆಗಳು ಅನುಷ್ಠಾನಲ್ಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಒಟ್ಟು 73.23 ಲಕ್ಷ ಫಲಾನುಭವಿಗಳಿಗೆ ಮಾಸಿಕ ಪಿಂಚಣಿ ಸೌಲಭ್ಯ ನೀಡಲಾಗುತ್ತಿದೆ. ಪಿಂಚಣಿ ನೀಡಲು 2020-21ನೇ ಸಾಲಿನಲ್ಲಿ ರೂ.7800 ಕೋಟಿ, ಪ್ರಸಕ್ತ ವರ್ಷ ರೂ. 9483.51 ಕೋಟಿ ಅನುದಾನ ನೀಡಲಾಗಿದೆ. ಸರ್ಕಾರವು 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರ ಪಿಂಚಣಿಯನ್ನು ರೂ. 1000 ರಿಂದ 1200 ಕ್ಕೆ ಏರಿಸಿದೆ. ಅಂಗವಿಕಲ ಹಾಗೂ ವಿಧವಾ ವೇತನ ಯೋಜನೆಯಡಿ ಮೊತ್ತವನ್ನು ರೂ. 600 ರಿಂದ 800 ಕ್ಕೆ ಹೆಚ್ಚಿಸಿದೆ. ಇದರಿಂದ ಸುಮಾರು 59.45 ಲಕ್ಷ ಫಲಾನುಭವಿಗಳಿಗೆ ಉಪಯೋಗವಾಗಿದೆ. ಶೇ 75 ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮನೋವೈಕಲ್ಯತೆಯಿಂದ ಬಳಲುತ್ತಿರುವವರಿಗೆ ಮಾಸಿಕ ಪಿಂಚಣಿ ಮೊತ್ತವನ್ನು ರೂ. 1400 ರಿಂದ ರೂ. 2000 ಕ್ಕೆ ಹೆಚ್ಚಿಸಿದೆ.ಸರ್ಕಾರವು ಮನಸ್ವಿನಿ ಯೋಜನೆಯ ಫಲಾನುಭವಿಗಳಿಗೆ ಮಾಸಿಕ ಪಿಂಚಣಿಯನ್ನು ರೂ. 600 ರಿಂದ 800 ಕ್ಕೆ ಹಾಗೂ ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ರೂ. 3000 ದಿಂದ ರೂ. 10,000 ಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

ಪಿಂಚಣಿ ವ್ಯವಸ್ಥೆಯಡಿ ಸುಧಾರಣಾ ಕ್ರಮಗಳು

ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರ ಹಣ ಸಂದಾಯ.

ಸ್ವಯಂ ಪ್ರೇರಿತ ಪಿಂಚಣಿ ಮಂಜೂರಾತಿ ಅಭಿಯಾನ (ನವೋದಯ ಆಪ್ ಮೂಲಕ): ಅರ್ಹರನ್ನು ಸ್ವಯಂ ಪ್ರೇರಿತವಾಗಿ ಗುರುತಿಸಿ ಅರ್ಜಿರಹಿತ ಪಿಂಚಣಿ ಮಂಜೂರು ಮಾಡುವ ನಿಟ್ಟಿನಲ್ಲಿ “ಮನೆಬಾಗಿಲಿಗೇ ಮಾಸಾಶನ ಕಾರ್ಯಕ್ರವನ್ನು ರಾಜ್ಯದಲ್ಲಿ ಜನವರಿ 2021 ರಲ್ಲಿ ಜಾರಿಗೆ ತರಲಾಗಿದ್ದು 53 ಸಾವಿರ ಜನರಿಗೆ ಪಿಂಚಣಿ ನೀಡಲಾಗಿದೆ.

ಸಮಗ್ರ ವಾರ್ಷಿಕ ಪರಿಶೀಲನೆ : ನವೋದಯ ಮೊಬೈಲ್ ಆಪ್ ಮೂಲಕ ಪುಸ್ತುತ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಸಮಗ್ರ ವಾರ್ಷಿಕ ಪರಿಶೀಲನಾ ಕಾರ್ಯವನ್ನು ನಡೆಸಲಾಗುತ್ತಿದ್ದು ಇಲ್ಲಿಯವರೆವಿಗೂ 3.58 ಲಕ್ಷ ಮರಣ/ ಅನರ್ಹರನ್ನು ಗುರುತಿಸಿ ಒಟ್ಟು, ವಾರ್ಷಿಕ ರೂ. 430 ಕೋಟಿಗಳನ್ನು ಸರ್ಕಾರದ ಬೊಕ್ಕಸಕ್ಕೆ ಉಳಿತಾಯ ಮಾಡಲಾಗಿದೆ.

ಸರ್ಕಾರವು ಇದೀಗ ದೂರವಾಣಿ ಮೂಲಕವೇ ಪಿಂಚಣಿ ಕೋರಿಕೆ ಸ್ವೀಕರಿಸಿ 72 ಗಂಟೆಯಲ್ಲಿ ಪಿಂಚಣಿ ಮಂಜೂರಾತಿ ಮಾಡುವ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ನಾಗರಿಕರು ದೂರವಾಣಿ ಕರೆ ಮೂಲಕ ತಮ್ಮ ಆಧಾರ್ ಸಂಖ್ಯೆ ಒದಗಿಸಿ ಪಿಂಚಣಿ ಸೌಲಭ್ಯ ಕೋರಿಕೆ ಸಲ್ಲಿಸಬಹುದಾಗಿದೆ. ದೂರವಾಣಿ ಮುಖಾಂತರ ಸ್ವೀಕರಿಸಲಾದ ಕೋರಿಕೆ ಮೇರೆಗೆ ಗ್ರಾಮಲೆಕ್ಕಾಧಿಕಾರಿಗಳು ಸದರಿ ಮಾಹಿತಿ ಆದರಿಸಿ ಅರ್ಜಿದಾರರ ಮನೆಬಾಗಿಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ “ನವೋದಯ” ಮೊಬೈಲ್ ಆಪ್ ಮೂಲಕ ಅರ್ಜಿದಾರರ ಮಾಹಿತಿ ನಮೂದಿಸಿಕೊಳ್ಳುತ್ತಾರೆ.

ಗ್ರಾಮಲೆಕ್ಕಾಧಿಕಾರಿಗಳು ಅರ್ಜಿದಾರರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್, ಬ್ಯಾಂಕ್/ಅಂಚೆ ಖಾತೆ ವಿವರ, ವಿಳಾಸ ಮತ್ತು ವಯಸ್ಸಿಗೆ ಸಂಬಂಧಿಸಿದ ದಾಖಲಾತಿಗಳನ್ನು ಒದಗಿಸಬೇಕು. (ಪಡಿತರಚೀಟಿ, ಚುನಾವಣೆ ಗುರುತಿನ ಚೀಟಿ ಅಥವಾ ಸರ್ಕಾರ ವಿತರಿಸಿದ ಗುರುತಿನ ಚೀಟಿ),

ಅರ್ಹರಿಗೆ 72 ಗಂಟೆ ಯೊಳಗೆ ನಾಡಕಚೇರಿ ಉಪತಹಸೀಲ್ದಾರ ರಿಂದ ಪಿಂಚಣಿ ಮಂಜೂರಾತಿ ಅನುಮೋದನೆ ನೀಡಿ, ಮಂಜೂರಾತಿ ಆದೇಶದ ಡೌನ್ ಲೋಡ್ ಲಿಂಕ್‌ನ್ನು SMS ಮೂಲಕ ಫಲಾನುಭವಿಗಳ ಮೊಬೈಲ್‌ಗೆ ಕಳುಹಿಸಲಾಗುವುದು.

ಗ್ರಾಮ ಲೆಕ್ಕಾಧಿಕಾರಿಗಳು/ ಗ್ರಾಮ ಸಹಾಯಕರ ಮೂಲಕ ಫಲಾನುಭವಿಗಳ ಮನೆಬಾಗಿಲಿಗೆ ಪಿಂಚಣಿ ಮಂಜೂರಾತಿ ಆದೇಶಪತ್ರ ವಿತರಣೆ ಮಾಡಲಾಗುವುದು ಮತ್ತು ಇದನ್ನು ಖಚಿತ ಪಡಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.