ಸಾಹಿತಿ ಕುಂ.ವೀರಭದ್ರಪ್ಪ ಅವರಿಗೆ ಮತ್ತೊಂದು ಬೆದರಿಕೆ ಪತ್ರ
ಪ್ರಕಾಶ್ ರೈ ಸೇರಿದಂತೆ ಒಟ್ಟು 61 ಜನರಿಗೆ ಬೆದರಿಕೆ
Team Udayavani, May 13, 2022, 9:25 PM IST
ಹೊಸಪೇಟೆ:ಸಾಹಿತಿ ಕುಂ.ವೀರಭದ್ರಪ್ಪ ಅವರಿಗೆ ಮತ್ತೊಂದು ಬೆದರಿಕೆ ಪತ್ರ ಬಂದಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಸಾಹಿತಿ ಕುಂ.ವೀರಭದ್ರಪ್ಪ ನವರು ಹಾಗೂ ನಟ ಪ್ರಕಾಶ್ ರೈ ಸೇರಿದಂತೆ ಒಟ್ಟು 61 ಜನರಿಗೆ ಬೆದರಿಕೆ ಪತ್ರ ಬಂದಿದೆ.
ಮೊದಲನೇ ಪತ್ರ ಭದ್ರಾವತಿಯಿಂದ ಬಂದಿತ್ತು. ಇದೀಗ ಚಿತ್ರದುರ್ಗದಿಂದ ಮತ್ತೊಂದು ಪತ್ರ ಬಂದಿದ್ದು, ಇದೀಗ ಕೊಟ್ಟೂರಿನ ಕುಂ.ವೀ ನಿವಾಸಕ್ಕೆ ಪತ್ರ ಬಂದಿದೆ.
ಮೊದಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಸೇರಿ ಅನೇಕರಿಗೆ ಬೆದರಿಕೆ ಪತ್ರ ಬಂದಿತ್ತು. ಈಗ ಕುಂ.ವೀರಭದ್ರಪ್ಪ ಸೇರಿದಂತೆ ಮಾಜಿ ಸಿಎಂಗಳಾದ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಿಜಗುಣಾನಂದ ಸ್ವಾಮಿಜಿ, ಬಿ.ಕೆ.ಹರಿಪ್ರಸಾದ್, ದಿನೇಶ್ ಗುಂಡೂರಾವ್ ಹಾಗೂ ಪ್ರಕಾಶ್ ರೈ ಸೇರಿದಂತೆ 61 ಜನರಿಗೆ ಬೆದರಿಕೆ ಪತ್ರ ಬಂದಿದೆ.
ಇದಕ್ಕೆ ಪ್ರತಿಕ್ರಿಯಿಸಿದ ಕುಂ.ವೀ ಮತ್ತೊಂದು ಬೆದರಿಕೆ ಪತ್ರ ಬಂದಿದೆ, ಚಿತ್ರದರ್ಗದಿಂದ ಪೋಸ್ಟ್ ಆಗಿದೆ. ಸಾರ್ವಜನಿಕ ಜೀವನದಲ್ಲಿ ಇರವವರಿಗೆ ಇಂತಹ ಬೆದರಿಕೆ ಪತ್ರಗಳು ಬರುವುದು ಸಾಮಾನ್ಯ. ನಾನೀಗ 70 ರ ಅಸುಪಾಸಿನಲ್ಲಿದ್ದೇನೆ. ಭಾವೈಕ್ಯತೆ, ಸೌಹಾರ್ದತೆಗಾಗಿ ಹುತಾತ್ಮರಾದವರ ಸಾಲಿನಲ್ಲಿ ನನ್ನದು ಒಂದೂ ಹೆಸರು ಇತಿಹಾಸದ ಪುಟದಲ್ಲಿ ಉಳಿಯಲಿದೆ. ನಮ್ಮ ದೇಶದವರ್ಯಾರು ಈ ಪತ್ರ ಕಳುಹಿಸಿಲ್ಲ. ಈ ಪತ್ರ ಕಳಹಿಸಿದವರು ಬೇರೆ ದೇಶದವರು ಇರಬೇಕು ಎಂದು ಲೇವಡಿ ಮಾಡಿದರು.
ನೀವು ಪೇಪರ್ ಹೀರೋ ಆಗಲು ಹೊರಟಿದ್ದೀರಿ ಎಂದು ಹೇಳಿ ಬರೆಯಲಾಗಿದೆ. ಮೊದಲ ಪತ್ರ ಬಂದಾಗ ವಿಜಯನಗರ ಎಸ್ಪಿ ಡಾ.ಅರುಣ್ ಅವರನ್ನು ಕುಂ.ವೀರಭದ್ರಪ್ಪ ಭೇಟಿಯಾಗಿ ತಮಗೆ ರಕ್ಷಣೆ ನೀಡುವಂತೆ ಕೋರಿದ್ದನ್ನು ಸ್ಮರಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ