ನಾಳೆ ಶಾಲಾರಂಭ: ಬಿಸಿಯೂಟ ನೌಕರರಿಗಿಲ್ಲ ಈ ತಿಂಗಳ ವೇತನ!

ಸರಕಾರಿ ಆದೇಶದಿಂದ ಗೊಂದಲದಲ್ಲಿ 1.18 ಲಕ್ಷ ಅಕ್ಷರದಾಸೋಹ ಸಿಬಂದಿ

Team Udayavani, May 15, 2022, 6:45 AM IST

ನಾಳೆ ಶಾಲಾರಂಭ: ಬಿಸಿಯೂಟ ನೌಕರರಿಗಿಲ್ಲ ಈ ತಿಂಗಳ ವೇತನ!

ಕುಂದಾಪುರ: ರಾಜ್ಯಾದ್ಯಂತ ಮೇ 16ರಿಂದ ಶಾಲೆಗಳು ಆರಂಭಗೊಳ್ಳಲಿವೆ. ಮೊದಲ ದಿನದಿಂದಲೇ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಇರಲಿದೆ. ಆದರೆ ಸರಕಾರದ ಆದೇಶದ ಪ್ರಕಾರ ಬಿಸಿಯೂಟ ನೌಕರರಿಗೆ ಮಾತ್ರ ಈ ತಿಂಗಳಿನ ವೇತನ ಸಿಗುವುದಿಲ್ಲ.

ಸರಕಾರವು ಬಿಸಿಯೂಟ ತಯಾರಕರು ಮತ್ತು ಸಹಾಯಕ ಸಿಬಂದಿಗೆ ವರ್ಷದ 10 ತಿಂಗಳು ಮಾತ್ರ ಗೌರವಧನ ನೀಡುತ್ತಿದ್ದು, ಎಪ್ರಿಲ್‌-ಮೇಯಲ್ಲಿ ಕೊಡುವುದಿಲ್ಲ. ಈ ಬಾರಿ ಮೇ 16ರಿಂದ ಶಾಲೆಗಳು ಆರಂಭಗೊಳ್ಳುತ್ತಿವೆ. ಬಿಸಿಯೂಟ ಆರಂಭಕ್ಕೆ ಬೇಕಾದ ಎಲ್ಲ ಅಗತ್ಯ ಸಾಮಗ್ರಿಗಳನ್ನು ಈಗಾಗಲೇ ಶಾಲೆಗಳಿಗೆ ಸರಬರಾಜು ಮಾಡಲಾಗಿದೆ. ಆದರೆ ಕೆಲಸಕ್ಕೆ ತೆರಳಿದರೆ ಸಂಬಳ ಸಿಗುವುದೇ ಎನ್ನುವ ಗೊಂದಲ ರಾಜ್ಯದ 1.18 ಲಕ್ಷ ಮಂದಿ ಬಿಸಿಯೂಟ ಸಿಬಂದಿಯದ್ದು.

ಆದೇಶವೇನು?
ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಸರಕಾರಿ ಶಾಲೆಗಳಲ್ಲಿ ಪ್ರತೀ ವರ್ಷ ಮಾ. 31ರ ಅಂತ್ಯಕ್ಕೆ ಅಡುಗೆ ಸಿಬಂದಿಯನ್ನು ಬಿಡುಗಡೆ ಮಾಡಿ, ಮತ್ತೆ ಅದೇ ಸಿಬಂದಿಯನ್ನು ಮುಂದಿನ ಶೈಕ್ಷಣಿಕ ವರ್ಷದ ಜೂ. 1ರಂದು ನೇಮಕ ಮಾಡಿಕೊಳ್ಳಬೇಕು. ಮೇ 16ರಿಂದ ಕೆಲಸ ನಿರ್ವಹಿಸಿದರೆ ಈ 16 ದಿನಗಳ ವೇತನವನ್ನು ಇಲಾಖೆ ನೀಡಬಹುದೇ ಎನ್ನುವ ಪ್ರಶ್ನೆ ಸಿಬಂದಿಯದು.

1.18 ಲಕ್ಷ ಸಿಬಂದಿ
ರಾಜ್ಯದಲ್ಲಿ 47,250 ಮಂದಿ ಅಡುಗೆ ತಯಾರಕರಿದ್ದು, 71,336 ಮಂದಿ ಸಹಾಯಕರು ಸೇರಿ ಒಟ್ಟು 1,18,586 ಮಂದಿ ಅಕ್ಷರ ದಾಸೋಹ ಸಿಬಂದಿಯಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 1,866 ಮತ್ತು ದ.ಕ.ದಲ್ಲಿ 3,213 ಮಂದಿ ಇದ್ದಾರೆ. ಹೊಸ ಆದೇಶದಂತೆ ಈ ಶೈಕ್ಷಣಿಕ ಸಾಲಿನಿಂದ ಅಡುಗೆ ತಯಾರಕರಿಗೆ ಮಾಸಿಕ 3,700 ರೂ. ಮತ್ತು ಸಹಾಯಕರಿಗೆ ಮಾಸಿಕ 3,600 ರೂ. ಗೌರವ ಧನವನ್ನು ನೀಡಲಾಗುತ್ತಿದೆ.

ಈ ಬಾರಿ ಮೇ ತಿಂಗಳಲ್ಲೇ ಶಾಲಾರಂಭ ಆಗುತ್ತಿರುವುದರಿಂದ ಈ ಗೊಂದಲ ಉಂಟಾಗಿದೆ. ಅಧಿಕಾರಿಗಳು ಮೇ 16ರಿಂದಲೇ ಬರುವಂತೆ ತಿಳಿಸಿದ್ದಾರೆ. ಆದರೆ ಈ 16 ದಿನಗಳ ವೇತನ ಸಿಗಲಿದೆಯೇ ಎನ್ನುವ ಬಗ್ಗೆ ಗೊಂದಲವಿದೆ. ಎಪ್ರಿಲ್‌ನಲ್ಲಿ ವೇತನ ಇರದಿದ್ದರೂ 10 ದಿನ ಕೆಲಸ ಮಾಡಿದ್ದೇವೆ. ಈಗ ಮತ್ತೆ 16 ದಿನ ಹೀಗಾದರೆ ಕಷ್ಟ. ಸರಕಾರ ಈ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಲಿ.
– ಸಿಂಗಾರಿ ಪೂಜಾರ್ತಿ, ಅಧ್ಯಕ್ಷೆ,
ಕುಂದಾಪುರ ಅಡುಗೆ ಸಿಬಂದಿ ಸಂಘ

ಸರಕಾರ 10 ತಿಂಗಳು ಬಿಸಿಯೂಟ ಸಿಬಂದಿಗೆ ವೇತನ ನೀಡುತ್ತಿದ್ದು, ಇದರಲ್ಲಿಯೇ ದಸರಾ ರಜೆ, ಇನ್ನಿತರ ರಜೆ ಸೇರಿ ಒಂದು ತಿಂಗಳು ಹೆಚ್ಚುವರಿಯಾಗಿ ಕೊಡುತ್ತಿದೆ. ಈ ಬಾರಿ ಎಪ್ರಿಲ್‌ನಲ್ಲಿ 10 ದಿನ ಮತ್ತು ಮೇಯಲ್ಲಿ 16 ದಿನ ಕಾರ್ಯನಿರ್ವಹಿಸಿದ್ದನ್ನು ಕೂಡ ಲೆಕ್ಕಹಾಕಿ, ಒಂದು ತಿಂಗಳಿಗಿಂತ ಹೆಚ್ಚಿನ ದಿನ ಆಗಿದ್ದರೆ, ವೇತನ ಕೊಡಲಾಗುವುದು. ಈ ಬಗ್ಗೆ ಸಚಿವರ ನೇತೃತ್ವದ ಸಭೆಯಲ್ಲಿ ಚರ್ಚಿಸಲಾಗಿದೆ. ಅದಲ್ಲದೆ ಅಕ್ಷರದಾಸೋಹ ಸಿಬಂದಿಗೆ ಇನ್ನಷ್ಟು ಸೌಲಭ್ಯ ನೀಡುವ ಪ್ರಸ್ತಾವವೂ ಸರಕಾರದ ಹಂತದಲ್ಲಿ ಆಗುತ್ತಿದೆ.
– ಮಂಜುನಾಥ ಎಸ್‌.ಸಿ., ಹಿರಿಯ ಸಹಾಯಕ ನಿರ್ದೇಶಕರು, ಮಧ್ಯಾಹ್ನದ ಊಟದ ಯೋಜನೆ, ಬೆಂಗಳೂರು

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.