ಐಪಿಎಲ್ 2022: ಅಗ್ರಸ್ಥಾನವೇ ಗುಜರಾತ್‌ ಟೈಟಾನ್ಸ್‌ ಗುರಿ


Team Udayavani, May 15, 2022, 5:30 AM IST

ಐಪಿಎಲ್  2022: ಅಗ್ರಸ್ಥಾನವೇ ಗುಜರಾತ್‌ ಟೈಟಾನ್ಸ್‌ ಗುರಿ

ಮುಂಬಯಿ: ಈಗಾಗಲೇ ಪ್ಲೇ ಆಫ್ ಪ್ರವೇಶಿಸಿರುವ ಗುಜರಾತ್‌ ಮತ್ತು ಕೂಟದಿಂದ ನಿರ್ಗಮಿಸಿರುವ ಚೆನ್ನೈ ತಂಡಗಳು ರವಿವಾರದ ಮೊದಲ ಪಂದ್ಯದಲ್ಲಿ ಎದುರಾಗಲಿವೆ.

ಮೇಲ್ನೋಟಕ್ಕೆ ಇದು ಲೆಕ್ಕದ ಭರ್ತಿಯ ಪಂದ್ಯ. ಆದರೆ ಗುಜರಾತ್‌ಗೆ ಮಹತ್ವದ್ದು. ಇನ್ನೂ 2 ಪಂದ್ಯಗಳು ಬಾಕಿ ಇರುವಾಗಲೇ ಪ್ಲೇ ಆಫ್ ಸುತ್ತಿಗೆ ಲಗ್ಗೆ ಹಾಕಿರುವ ಹಾರ್ದಿಕ್‌ ಪಾಂಡ್ಯ ಪಡೆಯ ಮುಂದಿನ ಗುರಿಯೆಂದರೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುವುದು. ಉಳಿದೆರಡೂ ಪಂದ್ಯಗಳನ್ನು ಗೆದ್ದರೆ ಈ ಯೋಜನೆ ಸಾಕಾರಗೊಳ್ಳಲಿದೆ. ಆಗ ಗುಜರಾತ್‌ ಅಂಕ 22ಕ್ಕೆ ಏರಲಿದೆ. ಬೇರೆ ಯಾವುದೇ ತಂಡಕ್ಕೂ 20, 18 ಅಂಕಗಳ ಗಡಿ ದಾಟಲು ಸಾಧ್ಯವಿಲ್ಲ.

ಗುಜರಾತ್‌ ಹೊರತುಪಡಿಸಿ ಅಗ್ರಸ್ಥಾನಕ್ಕೇರುವ ಅವಕಾಶ ಹೊಂದಿರುವ ಏಕೈಕ ತಂಡವೆಂದರೆ ಲಕ್ನೋ. ಅಕಸ್ಮಾತ್‌ ಗುಜರಾತ್‌ ಒಂದನ್ನು ಸೋತರೆ, ಲಕ್ನೋ ಉಳಿದೆರಡೂ ಪಂದ್ಯಗಳನ್ನು ಗೆದ್ದರೆ ಇದು ಸಾಧ್ಯ. ಹೀಗಾಗಿ ಚೆನ್ನೈ ವಿರುದ್ಧ ಗೆಲ್ಲಲು ಗುಜರಾತ್‌ ಶಕ್ತಿಮೀರಿ ಪ್ರಯತ್ನಿಸುವುದರಲ್ಲಿ ಅನುಮಾನವಿಲ್ಲ.

ಗುಜರಾತ್‌ ಹಿಂದಿನೆರಡು ಮುಖಾಮುಖಿಗಳಲ್ಲಿ ಒಂದು ಸೋಲು, ಒಂದು ಗೆಲುವು ದಾಖಲಿಸಿದೆ. ಮುಂಬೈ ಎದುರು 5 ವಿಕೆಟ್‌ಗಳಿಂದ ಎಡವಿದರೆ, ಲಕ್ನೋ ಎದುರು 4ಕ್ಕೆ 144 ರನ್‌ ಗಳಿಸಿಯೂ ಇದನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಈ ಪಂದ್ಯವನ್ನು ಗೆದ್ದೊಡನೆ ಪಾಂಡ್ಯ ಬಳಗ ಪ್ಲೇ ಆಫ್ ತಲುಪಿತ್ತು.

ಗುಜರಾತ್‌ ಹಾರ್ಡ್‌ ಹಿಟ್ಟರ್ ಅಥವಾ ಟಿ20 ಸ್ಟಾರ್‌ ಆಟಗಾರರನ್ನು ಹೊಂದಿರುವ ತಂಡವೇನೂ ಅಲ್ಲ. ಆದರೆ ತಂಡವಾಗಿ ಅದು ತೋರ್ಪಡಿಸಿದ ನಿರ್ವಹಣೆ ಅಮೋಘ. ಹೀಗಾಗಿ ಗುಜರಾತ್‌ ಟೈಟಾನ್ಸ್‌ ಈ ಬಾರಿಯ ನೆಚ್ಚಿನ ತಂಡವಾಗಿ ಹೊರಹೊಮ್ಮಿದೆ. ಹಾರ್ದಿಕ್‌ ಪಾಂಡ್ಯ ನಾಯಕತ್ವ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.

ಚೆನ್ನೈಗೆ ಪ್ರತಿಷ್ಠೆಯ ಪಂದ್ಯ
ಹಾಲಿ ಚಾಂಪಿಯನ್‌ ಚೆನ್ನೈಯದ್ದು ಇದಕ್ಕೆ ತದ್ವಿರುದ್ಧ ಆಟ. ಕೆಲವು ಸ್ಟಾರ್‌ ಆಟಗಾರರು ದೂರಗೊಂಡ ಪರಿಣಾಮ ಹಾಗೂ ಅರ್ಧದಷ್ಟು ಮಂದಿ ಸಾಮರ್ಥ್ಯಕ್ಕೆ ತಕ್ಕ ಪ್ರದರ್ಶನ ತೋರ್ಪಡಿಸದೇ ಇದ್ದುದರಿಂದ ಚೆನ್ನೈಗೆ ಈ ಗತಿ ಬಂದಿದೆ. ರವೀಂದ್ರ ಜಡೇಜ ನಾಯಕತ್ವದಲ್ಲಿ ವಿಫ‌ಲರಾದದ್ದು, ಈಗ ತಂಡದಿಂದ ಬೇರ್ಪಟ್ಟಿದ್ದೂ ತಂಡಕ್ಕೆ ಮಾರಕವಾಗಿ ಪರಿಣಮಿಸಿದೆ. ಈ ನಡುವೆ ಅಂಬಾಟಿ ರಾಯುಡು ಅವರ “ನಿವೃತ್ತಿ ಟ್ವೀಟ್‌’ ಕೂಡ ಸದ್ದು ಮಾಡಿದೆ. ಒಟ್ಟಾರೆ, ಚೆನ್ನೈ ತಂಡದಲ್ಲಿ ಯಾವುದೂ ಸರಿ ಇಲ್ಲ ಎಂಬುದು ಮಾತ್ರ ಸುಳ್ಳಲ್ಲ!

ಮುಂಬೈ ಎದುರಿನ ಹಿಂದಿನ ಪಂದ್ಯವನ್ನು ಜಯಿಸಿದ್ದೇ ಆದಲ್ಲಿ ಚೆನ್ನೈಗೆ ಮುಂದುವರಿಯುವ ಕ್ಷೀಣ ಅವಕಾಶವೊಂದಿತ್ತು. ಧೋನಿ ಪಡೆ ಈ ಅವಕಾಶವನ್ನು ಕಳೆದುಕೊಂಡಿದೆ. ಅಗ್ರಸ್ಥಾನಿ ಗುಜರಾತ್‌ಗೆ ಸೋಲುಣಿಸಿ ಪ್ರತಿಷ್ಠೆ ಕಾಯ್ದುಕೊಳ್ಳುವುದೊಂದೇ ಉಳಿದಿರುವ ಮಾರ್ಗ. ಆಗ, ಮೊದಲ ಸುತ್ತಿನಲ್ಲಿ ಅನುಭವಿಸಿದ 3 ವಿಕೆಟ್‌ ಸೋಲಿಗೆ ಸೇಡನ್ನೂ ತೀರಿಸಿದಂತಾಗುತ್ತದೆ.

ಟಾಪ್ ನ್ಯೂಸ್

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.