ನಗರ ವ್ಯಾಪ್ತಿಯಲ್ಲಿ ಭೂ ಪರಿವರ್ತನೆ ಆಗಿಲ್ಲ ಸರಳ


Team Udayavani, May 15, 2022, 10:12 AM IST

land-conversion

ಕುಂದಾಪುರ: ನಗರ ಯೋಜನ ಪ್ರದೇಶದ ಹೊರ ವ್ಯಾಪ್ತಿಯಲ್ಲಿ ಕುಟುಂಬ ದೊಳಗೆ ಪಾಲು ಆದರೆ ಭೂಮಿಯನ್ನು ವಿಂಗಡಿಸಿ ನೋಂದಣಿ ಮಾಡಲು ಸಾಧ್ಯವಾಗು ತ್ತಿಲ್ಲ ಎನ್ನುವ ಸಮಸ್ಯೆಗೆ ಪರಿಹಾರ ದೊರೆತಿದೆ.

ಸರಕಾರ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಮಾಡಿದ್ದು ಇಲಾಖಾ ಆದೇಶ ಇನ್ನಷ್ಟೇ ಜಾರಿಯಾಗಬೇಕಿದೆ. ಇದರಿಂದ ತುಂಡುಭೂಮಿ ಹೊಂದಿದ್ದು ಭೂ ಪರಿವರ್ತನೆ ಮಾಡಲು ಪ್ರಾಧಿಕಾರದಿಂದಲೇ ಅನುಮತಿ ಬೇಕೆಂಬ ನಿಯಮ ಬದಲಾಗಲಿದೆ. ಇದು ಗ್ರಾ.ಪಂ., ಪ.ಪಂ. ಜನರಿಗೆ ಅನ್ವಯವಾಗುತ್ತದೆ. ಆದರೆ ನಗರ ವ್ಯಾಪ್ತಿಯಲ್ಲಿ ಈ ಸಮಸ್ಯೆ ಇನ್ನೂ ಹಾಗೆಯೇ ಇದೆ.

ಸಚಿವರ ಪತ್ರ

ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಅಂಗಾರ ಅವರು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳಿಗೆ ಈ ಕುರಿತು ಸರಕಾರಿ ಆದೇಶ ಹೊರಡಿಸುವಂತೆ ಪತ್ರ ಬರೆದಿದ್ದಾರೆ. ಕೆ.ಎಸ್‌ ಈಶ್ವರಪ್ಪ ಅವರು ಸಂಪುಟ ಉಪ ಸಮಿತಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್‌ ಸಚಿವರಾಗಿದ್ದಾಗ ಅವರ ಅಧ್ಯಕ್ಷತೆಯಲ್ಲಿ ಮಾ. 4ರಂದು ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನವಾಗಿದೆ. ಸ್ಥಳೀಯ ಯೋಜನಾ ಪ್ರದೇಶದ ಹೊರಭಾಗದ ಒಂದು ಎಕರೆಗಿಂತ ಕಡಿಮೆ ಇರುವ ಪ್ರದೇಶ ವಸತಿ/ವಸತಿಯೇತರ ಉದ್ದೇಶದ ಭೂಪರಿವರ್ತನೆ ಜಮೀನಿನಲ್ಲಿನ ವಿನ್ಯಾಸ ಅನುಮೋದನೆಗಾಗಿ ನಗರ ಮತ್ತು ಗ್ರಾಮಾಂತರ ಯೋಜನೆ ಪ್ರಾಧಿಕಾರದ ಅನುಮೋದನೆ ಪಡೆಯುವ ಬಗ್ಗೆ ಹೊರಡಿಸಿದ ಆದೇಶದಿಂದ ಉಡುಪಿ ಜಿಲ್ಲೆಯ ಸಾರ್ವಜನಿಕರಿಗೆ ಅನನುಕೂಲವಾಗಿರುವ ಬಗ್ಗೆ ಮನವಿಗಳನ್ನು ಸ್ವೀಕರಿಸಲಾಗಿದೆ. ಭೌಗೋಳಿಕವಾಗಿ ಹೆಚ್ಚಾಗಿ ತುಂಡು ಭೂಮಿಗಳನ್ನು ಹೊಂದಿರುವಂತಹ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಈ ತಿದ್ದುಪಡಿ ಕಾಯ್ದೆಯಿಂದ ವಿನಾಯಿತಿ ನೀಡಿ ಆದೇಶಿಸಲು ಸೂಚಿಸಿದ್ದಾರೆ.

ಆದೇಶ ಬಾಕಿಯಾಗಿತ್ತು

ಸಚಿವರಿಂದ ಪತ್ರ ಹೋಗಿದ್ದು, ಸಭೆಯಲ್ಲಿ ನಿರ್ಣಯ ಆಗಿದ್ದರೂ ಇಲಾಖೆಯಿಂದ ಇನ್ನೂ ಸರಕಾರಿ ಆದೇಶ ಬಂದಿಲ್ಲ. ಇದಕ್ಕಾಗಿ ಉಸ್ತುವಾರಿ ಸಚಿವರು ಪತ್ರ ಬರೆದಿದ್ದರು. ಮೇ 12ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನವಾಗಿದೆ. ಪಟ್ಟಣ ಪಂಚಾಯತ್‌, ಪುರಸಭೆ ವ್ಯಾಪ್ತಿ ಸೇರಿದಂತೆ ಪ್ರತ್ಯೇಕ ನಗರ ಯೋಜನೆ ಪ್ರಾಧಿಕಾರಗಳಿಲ್ಲದ ಕಡೆ ಮನೆ ಹಾಗೂ ಕಟ್ಟಡ ನಿರ್ಮಾಣಕ್ಕೆ ಟೌನ್‌ ಪ್ಲಾನಿಂಗ್‌ ನಿಂದ ವಿನಾಯಿತಿ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ.

ಇದೂ ಬಾಕಿ

ಯೋಜನಾ ಪ್ರಾಧಿಕಾರದಿಂದ ಸರಕಾರಕ್ಕೆ ಕಳುಹಿಸಿದ ಮಹಾಯೋಜನೆ ಇನ್ನೂ ಅನುಮೋದನೆ ಆಗದೇ ಭೂ ವಿಂಗಡಣೆ ಕೂಡ ಮಾಡುವಂತಿಲ್ಲ. ನಗರ ಯೋಜನ ಪ್ರಾಧಿಕಾರ ಆರಂಭವಾದ ಬಳಿಕದಿಂದ ಇರುವ ಈ ಸಮಸ್ಯೆಗೆ ಕಳೆದ 13 ವರ್ಷಗಳಿಂದ ಪರಿಹಾರ ದೊರೆತಿಲ್ಲ. ಮಾಸ್ಟರ್‌ ಪ್ಲಾನ್‌ ಮಂಜೂರಾಗದ ಎಲ್ಲ ನಗರ ಯೋಜನ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಈ ಸಮಸ್ಯೆ ಇದೆ. ಸಾರ್ವಜನಿಕರಿಗೆ ಆಗುವ ಅನನುಕೂಲತೆಯನ್ನು ತಡೆಯಲು ಆದ್ಯತೆ ಮೇಲೆ ಸ್ಥಳೀಯ ಯೋಜನ ಪ್ರದೇಶಗಳು ಮಹಾಯೋಜನೆ ತಯಾರಿಸಿ ಯೋಜನ ಪ್ರಾಧಿಕಾರ ರಚನೆಯಾದ ವರ್ಷಗಳೊಳಗೆ ಸರಕಾರದ ಅನುಮೋದನೆಗೆ ಸಲ್ಲಿಸಲು ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ನಿಯಮ ಇದೆ. ಆದರೆ ಪಾಲನೆ ಆಗುತ್ತಿಲ್ಲ.

ಆದೇಶವಾಗಿಲ್ಲ

ನಗರ ಯೋಜನಾ ಪ್ರದೇಶದ ಹೊರ ಗ್ರಾಮದವರಿಗೆ ಅನುಕೂಲವಾಗುವ ತೀರ್ಮಾನ ಸರಕಾರದಿಂದ ಆಗಿದ್ದು ಯೋಜನಾ ಪ್ರಾಧಿಕಾರಗಳು ಇರುವಲ್ಲಿ ಮಹಾಯೋಜನೆ ಅನುಮೋದನೆಯಾಗದೇ, ಅನುಮತಿಗೂ ಶಾಶ್ವತ ವ್ಯವಸ್ಥೆಯಾಗದೇ ಸಮಸ್ಯೆ ಮುಂದುವರಿದಿದೆ. -ವಿಜಯ್‌ ಎಸ್‌. ಪೂಜಾರಿ, ಅಧ್ಯಕ್ಷರು, ನಗರ ಯೋಜನಾ ಪ್ರಾಧಿಕಾರ, ಕುಂದಾಪುರ

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.