ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ ಅಬಕಾರಿ ಉಪ ಆಯುಕ್ತೆ
Team Udayavani, May 15, 2022, 11:40 AM IST
ಕುಷ್ಟಗಿ: ಹೊಸ ಬಾರ್ ಲೈಸೆನ್ಸ್ ಗಾಗಿ ಬಾರ್ ಮಾಲೀಕರಿಂದ ಲಂಚ ಸ್ವೀಕರಿಸುವ ವೇಳೆ ಅಬಕಾರಿ ಉಪ ಆಯುಕ್ತೆಯೊರ್ವರು ಎಸಿಬಿ ಬಲೆಗೆ ಬಿದ್ದಿದ್ದಾರೆ.
ಕುಷ್ಟಗಿಯ ಅಬಕಾರಿ ಉಪ ಆಯುಕ್ತೆ ಸೆಲೆನಾ ಅವರು ಪಟ್ಟಣದ ಸಿಂಧನೂರು ರಸ್ತೆಯ ದುರ್ಗಾ ಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಲಂಚ ಸ್ವೀಕರಿಸಲು ಆಗಮಿಸಿದ್ದರು. ಈ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಬಾರ್ ಮಾಲೀಕಾರಾದ ಶೈಲಜಾ ಪ್ರಭಾಕಾರಗೌಡ ಅವರು ಹೊಸ ಬಾರ್ಗೆ ಲೈಸನ್ಸ್ ಮಾಡಿಕೊಡುವಂತೆ ಬೇಡಿಕೆಯಿಟ್ಟಿದ್ದರು. ಲೈಸನ್ಸ್ ಮಾಡಿಕೊಡಬೇಕಾದರೆ 3 ಲಕ್ಷ ಲಂಚ ಬೇಡಿಕೆ ಇಟ್ಟಿದ್ದಾರೆ. ಬಾರ್ ಮಾಲೀಕರಾದ ಶೈಲಜಾ ಪ್ರಭಾಕರ ಗೌಡ ಅವರೊಂದಿಗೆ ಒಳ ಒಪ್ಪಂದದನ್ವಯ 3ಲಕ್ಷರೂ.ಗಳಲ್ಲಿ ಒಂದು ಲಕ್ಷ ರೂ. ಸ್ವೀಕರಿಸಲು ಇಲ್ಲಿಗೆ ಬಂದಿದ್ದರು. ಅಜಯ್ ವೈನ್ಸ್ ನಲ್ಲಿ ಕೆಲಸ ಮಾಡುವ ಕೆಲಸಗಾರ ಹೊನ್ನೂರು ಭಾಷ ಅವರ ಬಳಿ1 ಲಕ್ಷ ರೂ. ಲಂಚ ಕಳುಹಿಸಿಕೊಟ್ಟಿದ್ದಾರೆ. ಲಂಚ ಸ್ವೀಕರಿಸುವ ವೇಳೆ ಸೆಲೆನಾ ಎಸಿಬಿ ಸಿಕ್ಕಿ ಬಿದ್ದಿದ್ದಾರೆ.
ಇದನ್ನೂ ಓದಿ:ಶಾಸಕ ಜಿ.ಟಿ.ದೇವೇಗೌಡರ ಮೊಮ್ಮಗಳು ನಿಧನ; ಎಚ್ ಡಿಕೆ ಸಂತಾಪ
ಮೇ.14 ರಂದು ಕುಷ್ಟಗಿಯ ಶೈಲಜಾ ಪ್ರಭಾಕರ್ ರವರು ಕೊಪ್ಪಳದ ಎಸಿಬಿ ಠಾಣೆಗೆ ಹಾಜರಾಗಿ ಕೊಪ್ಪಳದ ಸಿ. ಸೆಲಿನಾ ರವರ ವಿರುದ್ಧ ಲಂಚದ ಹಣದ ಬೇಡಿಕೆಗೆ ಸಂಬಂಧಿಸಿದಂತೆ ದೂರು ಸಲ್ಲಿಸಿದ್ದರು.
ಎಸಿಬಿ ಅಧಿಕಾರಿ & ಸಿಬ್ಬಂದಿಗಳು ದಾಳಿ ಮಾಡಿ ಲಂಚದ ಹಣ ಸಮೇತ ಹೊನ್ನೂರ್ ಬಾಷ, ಅಬಕಾರಿ ಉಪ ಆಯುಕ್ತರಾದ ಸಿ.ಸೆಲಿನಾ ಅವರನ್ನು ವಶಕ್ಕೆ ಪಡೆದಿದಿದ್ದು, ತನಿಖೆ ಮುಂದುವರೆಸಿದ್ದಾರೆ.
ಡಿಎಸ್ಪಿ ಶಿವಕುಮಾರ್ ಎಮ್.ಸಿ. ಇನ್ಸ್ ಪೆಕ್ಟರ್ ಗಳಾದ ಆಂಜನೇಯ ಡಿಎಸ್, ಶಿವರಾಜ ಇಂಗಳೆ, ಸಿಬ್ಬಂದಿಗಳಾದ ಸಿದ್ದಯ್ಯ, ರಂಗನಾಥ, ಗಣೇಶ್, ಜಗದೀಶ್, ಉಮೇಶ್, ಸವಿತಾ, ಶಂಕರಪ್ಪ, ಚಾಲಕ ಆನಂದರವರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ