ಲಾಡ್ಜ್ ನಲ್ಲಿ ಗಲಾಟೆ: ಯುವಕ, ಇಬ್ಬರು ತೃತೀಯ ಲಿಂಗಿಗಳ ಸೆರೆ


Team Udayavani, May 15, 2022, 2:02 PM IST

Untitled-2

ಬೆಂಗಳೂರು: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಲಾಡ್ಜ್ ನಲ್ಲಿ ಇಬ್ಬರು ತೃತೀಯ ಲಿಂಗಿಗಳು ಹಾಗೂ ಯುವಕನೊಬ್ಬ ಪರಸ್ಪರ ಹೊಡೆದಾಡಿ ಕೊಂಡಿದ್ದು, ಮೂವರೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಿಜಯನಗರದ ಮೂಡಲಪಾಳ್ಯದ ನಿವಾಸಿಗಳಾದ ತೃತೀಯ ಲಿಂಗಿಗಳಾದ ಸಂಜನಾ (28), ಅರ್ಚನಾ (30) ಹಾಗೂ ಅಂಕಿತ್‌ ಕುಮಾರ್‌ (28) ಗಾಯಗೊಂಡವರು.

ಸಂಜನಾ ಹಾಗೂ ಅರ್ಚನಾ ಮೆಜೆಸ್ಟಿಕ್‌ ಬಳಿ ಭಿಕ್ಷಾಟನೆ ನಡೆಸುತ್ತಿದ್ದರೆ, ಅಂಕಿತ್‌ ಕುಮಾರ್‌ ನಗರದ ಆಸ್ಪತ್ರೆಯೊಂದರ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದಾನೆ. ಮೇ 13ರಂದು ತಡರಾತ್ರಿ ಅಂಕಿತ್‌ ಕುಮಾರ್‌ ಮೆಜೆಸ್ಟಿಕ್‌ನಲ್ಲಿ ಸಂಜನಾ ಹಾಗೂ ಅರ್ಚನಾ ಪರಿಚಯವಾಗಿದ್ದರು. ಲೈಂಗಿಕ ಸಂಪರ್ಕದ ಉದ್ದೇಶದಿಂದ ಅಂಕಿತ್‌ ಕುಮಾರ್‌ ಜತೆಗೆ ಇಬ್ಬರೂ ಕಾಟನ್‌ ಪೇಟೆಯ ಲಾಡ್ಜ್ ಗೆ ತೆರಳಿದ್ದರು.

ಆದರೆ, ಅಲ್ಲಿ ಹಣಕಾಸಿನ ವಿಚಾರವಾಗಿ ಅಂಕಿತ್‌ ಹಾಗೂ ತೃತೀಯ ಲಿಂಗಿಗಳ ನಡುವೆ ಜಗಳವಾಗಿತ್ತು. ಜಗಳ ತಾರಕಕ್ಕೇರಿದಾಗ ಅಂಕಿತ್‌ ತನ್ನ ಬಳಿಯಿದ್ದ ಚೂರಿಯಿಂದ ಇಬ್ಬರು ತೃತೀಯ ಲಿಂಗಿಗಳ ಕತ್ತು, ಹೊಟ್ಟೆ, ಕೈ, ಕಾಲಿಗೆ ಇರಿದು ಗಾಯಪಡಿಸಿದ್ದ. ಇದಕ್ಕೆ ಪ್ರತಿಯಾಗಿ ಸಂಜನಾ ಹಾಗೂ ಅರ್ಚನಾ ಸಹ ಅಂಕಿತ್‌ ಮೇಲೆ ಹಲ್ಲೆ ನಡೆಸಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಹಲ್ಲೆಗೊಳಗಾದವರು ರೂಂನಲ್ಲಿ ಜೋರಾಗಿ ಕಿರುಚಾಡುತ್ತಿದ್ದ ಶಬ್ದ ಕೇಳಿ ಲಾಡ್ಜ್ ನ ರೂಂಬಾಯ್‌ ಬಂದು ನೋಡಿದಾಗ ಮೂವರೂ ಅಸ್ವಸ್ಥರಾಗಿ ಬಿದ್ದಿರುವುದು ಕಂಡು ಬಂದಿತ್ತು. ನಂತರ ಲಾಡ್ಜ್ ಸಿಬ್ಬಂದಿ ಕೂಡಲೇ ಮೂವರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಯುವಕನ ವಿರುದ್ಧ ಎಫ್‌ಐಆರ್‌: ಗಾಯಗೊಂಡಿರುವ ತೃತೀಯ ಲಿಂಗಿಯರ ಸ್ನೇಹಿತೆ ಕಸ್ತೂರಿ ರೆಡ್ಡಿ ಕೊಟ್ಟ ದೂರಿನ ಆಧಾರದ ಮೇರೆಗೆ ಕಾಟನ್‌ಪೇಟೆ ಪೊಲೀಸರು ಅಂಕಿತ್‌ ಕುಮಾರ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇನ್ನು ವಿಷಯ ತಿಳಿದು ಶನಿವಾರ ವಿಕ್ಟೋರಿಯಾ ಆಸ್ಪತ್ರೆ ಬಳಿ ಜಮಾಯಿಸಿದ ಹಲವು ತೃತೀಯ ಲಿಂಗಿಗಳು ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.